Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಅಕ್ಕಿ ಹಾಕದೆ ರಾಗಿ ಮಾತ್ರ ಬಳಸಿ ಮಾಡುವ ಇಡ್ಲಿ, ಮಧುಮೇಹಿಗಳಿಗೆ ರುಚಿಕರವಾದ ಬ್ರೇಕ್ಫಾಸ್ಟ್ ಆಯ್ಕೆ
ರಾಗಿ ತಿನ್ನುವುದರಿಂದ ರೋಗ ದೂರವಿಡಬಹುದು, ಮಧುಮೇಹಿಗಳ ಪಾಲಿನ ಅಮೃತ ರಾಗಿಯೆಂದರೆ ತಪ್ಪಾಗಲಾರದು. ಮುದ್ದೆ, ಇಡ್ಲಿ, ರೊಟ್ಟಿ, ರಾಗಿ ಮಣ್ಣಿ ಅಂತ ರುಚಿ ರುಚಿಯಾಗಿ ಇದನ್ನು ಮಾಡಿ ಸವಿಯಬಹುದು, ರಾಗಿ ತಿನ್ನುವುದರಿಂದ ದೇಹಕ್ಕೆ ಅವಶ್ಯಕವಾದ ಪೋಷಕಾಂಶ ದೊರೆಯುವುದು, ಸಕ್ಕರೆಯಂಶ ನಿಯಂತ್ರಣದಲ್ಲಿಡಬಹುದು. ಇಲ್ಲಿ ನಾವು ಇಡಿ ರಾಗಿ ಬಳಸಿ ಮಾಡುವ ಬ್ರೇಕ್ಫಾಸ್ಟ್ ನೀಡಿದ್ದೇವೆ ನೋಡಿ:

ಬೇಕಾಗುವ ಸಾಮಗ್ರಿ
2 ಕಪ್ ರಾಗಿ (ಇಡಿ ರಾಗಿ)
ಉದ್ದಿನ ಬೇಳೆ 1 ಕಪ್
1 ಚಮಚ ಮೆಂತೆ ಬೀಜ
ಒಂದು ಮುಷ್ಟಿಯಷ್ಟು ಅವಲಕ್ಕಿ
ತುಪ್ಪ ಅಥವಾ ಎಣ್ಣೆ
ರುಚಿಗೆ ತಕ್ಕ ಉಪ್ಪು
ಮಾಡುವ ವಿಧಾನ
ನೀವು ರಾಗಿ ಮತ್ತೆ ಉದ್ದುವನ್ನು ಪ್ರತ್ಯೇಕವಾಗಿ ನೆನೆ ಹಾಕಿ. ನೀವು
6-8 ಗಂಟೆಗಳ ಕಾಲ ನೆನೆ ಹಾಕಿ.
ಮೆಂತೆಯನ್ನು ಕೂಡ ನೆನೆ ಹಾಕಿ
ಅವಲಕ್ಕಿ ರುಬ್ಬುವ 10 ನಿಮಿಷ ಮೊದಲು ನೆನೆ ಹಾಕಿದರೆ
ಸಾಕು.
- ರಾಗಿಯನ್ನು ರುಬ್ಬಿ, ತುಂಬಾ ನುಣ್ಣನೆ ರುಬ್ಬಬೇಡಿ,ಸ್ವಲ್ಪ ತರಿತರಿಯಾಗಿ ರುಬ್ಬಿ
- ಉದ್ದಿನ ಬೇಳೆ ರುಬ್ಬುವಾಗ ಮೆಂತೆ ಕೂಡ ಸೇರಿಸಿ ರುಬ್ಬಿ. ಅವಲಕ್ಕಿ ಕೂಡ ಸೇರಿಸಿ.
- ಈಗ ಎಲ್ಲಾ ಹಿಟ್ಟು ಚೆನ್ನಾಗಿ ಕಲೆಸಿ ಹುದುಗು ಬರಲು 8 ಗಂಟೆ ಇಡಿ.
- ನಂತರ ಇಡ್ಲಿ ಪಾತ್ರೆಗೆ ತುಪ್ಪ ಸವರಿ ಹಿಟ್ಟು ಹಾಕಿ 20 ನಿಮಿಷ ಬೇಯಿಸಿದರೆ ರುಚಿಯಾದ ರಾಗಿ ಇಡ್ಲಿ ರೆಡಿ.
ರಾಗಿ ಇಡ್ಲಿ ಮಧುಮೇಹಗಳಿಗೆ ಅತ್ಯುತ್ತುಮವಾದ
ಬ್ರೇಕ್ಫಾಸ್ಟ್
ಭಾರತದಲ್ಲಿ ಮಧುಮೆಹಿಗಳ ಸಮಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ, ಬದಲಾಗುತ್ತಿರುವ ಜೀವನಶೈಲಿ , ಆಹಾರ ಶೈಲಿ ಮಧುಮೇಹ ಹೆಚ್ಚಳಕ್ಕೆ ಬಹುದೊಡ್ಡ ಕೊಡುಗೆಯನ್ನೇ ನೀಡುತ್ತಿದೆ. ಮಧುಮೇಹ ನಿಯಂತ್ರಣದಲ್ಲಿರದಿದ್ದರೆ ಸೋಂಕು, ದೃಷ್ಟಿದೋಷ, ಕಿಡ್ನಿ ವೈಫಲ್ಯ, ಹೃದಯ ಸಂಬಮಧಿ ಸಮಸ್ಯೆ, ಪಾರ್ಶ್ವವಾಯು ಸೇರಿಸಿ ಅನೇಕ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಹಾಗಾಗಿ ಮಧುಮೇಹಿಗಳು ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ಪ್ರಯತ್ನಿಸಬೇಕು.
- ರಾಗಿ ಮಧುಮೇಹ ನಿಯಂತ್ರಿಸುವ ಅತ್ಯುತ್ತಮವಾದ ಆಹಾರವಾಗಿದೆ. ರಾಗಿಯಲ್ಲಿ ಪಾಲಿಫೀನೋಲ್, ಕ್ಯಾಲ್ಸಿಯಂ, ಅಮೈನೋ ಆಮ್ಲ ಅಂಶವಿದೆ. ಹಾಗಾಗಿ ಅಕ್ಕಿ ಬದಲಿಗೆ ರಾಗಿ ಸೇವನೆ ತುಂಬಾ ಒಳ್ಳೆಯದು.
- ರಾಗಿಯಲ್ಲಿ ಗ್ಲುಟೀನ್ ಫ್ರೀ ಆದ್ದರಿಂದ ರಾಗಿಗಳಿಗೆ ತುಂಬಾ ಒಳ್ಳೆಯದು.
- ರಾಗಿ ರಕ್ತದಲ್ಲಿ ಸಕ್ಕರೆಯಂಶ ಹೆಚ್ಚಾಗುವುದನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.
- ರಾಗಿಯಲ್ಲಿರುವ ಪೋಷಕಾಂಶಗಳು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ
- ತೂಕ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ.



Click it and Unblock the Notifications