Latest Updates
-
ಮಳೆಗಾಲದ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸೋರಿಕೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮರೆವಿನ ಕಾಯಿಲೆಗೆ ವಿದಾಯ: ಮೆದುಳಿನ ಆರೋಗ್ಯಕ್ಕೆ ಭಾರತೀಯ ಶೈಲಿಯ 'ಮೈಂಡ್ ಡಯಟ್' ಹೀಗಿರಲಿ! -
2026ರ ಏಷ್ಯನ್ ಗೇಮ್ಸ್: ಮೊದಲ ದಿನವೇ ಭಾರತಕ್ಕೆ ಪದಕದ ಬೇಟೆ! ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಮತ್ತು ಲೈವ್ ಅಪ್ಡೇಟ್ಸ್ ಇಲ್ಲಿದೆ -
ದೆಹಲಿ-ಎನ್ಸಿಆರ್ನಲ್ಲಿ ಕಲುಷಿತ ಗಾಳಿ: ವಾಕಿಂಗ್ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಬಾಂದ್ರಾ ಫೇರ್ ರಶ್: ಕಪಲ್ಸ್ ಹುಷಾರ್! ಟ್ರಾಫಿಕ್ ಜಾಮ್ನಲ್ಲಿ ಸಿಲುಕದಂತೆ ಡೇಟಿಂಗ್ ಪ್ಲಾನ್ ಮಾಡುವುದು ಹೇಗೆ? -
ಅಪಾರ್ಟ್ಮೆಂಟ್ನಲ್ಲಿ ಗಣೇಶ ವಿಸರ್ಜನೆ: ಪರಿಸರ ಸ್ನೇಹಿಯಾಗಿ ಆಚರಿಸಲು ಇಲ್ಲಿವೆ 5 ಸಿಂಪಲ್ ಟಿಪ್ಸ್ -
ಹಬ್ಬದ ಸೀಸನ್ನಲ್ಲಿ ಎಚ್ಚರ! ಮಾರುಕಟ್ಟೆಯಲ್ಲಿ ನಕಲಿ 'ಅನಲಾಗ್ ಪನೀರ್' ಹಾವಳಿ: ಅಸಲಿ ಪನೀರ್ ಗುರುತಿಸುವುದು ಹೇಗೆ? -
iPhone 18 ಪ್ರೀ-ಆರ್ಡರ್ ಆರಂಭ: ನಿಮ್ಮ ಫೋನ್ ಬುಕ್ ಮಾಡುವ ಮುನ್ನ ಈ 5 ವಿಷಯಗಳನ್ನು ಮಿಸ್ ಮಾಡ್ಬೇಡಿ! -
ಬೀಚ್ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿದ್ದೀರಾ? ಗಾಯಗಳಾಗದಂತೆ ಕೆಲಸ ಮಾಡಲು ಈ ಸುರಕ್ಷತಾ ಟಿಪ್ಸ್ ಮಿಸ್ ಮಾಡಬೇಡಿ! -
ಇಂದಿನ ಲವ್ ಜಾತಕ: ನಿಮ್ಮ ಪ್ರೀತಿಯನ್ನು ಗಟ್ಟಿಗೊಳಿಸಲು ಇಂದಿನ ಬೆಸ್ಟ್ ಟಿಪ್ಸ್ ಮತ್ತು ಡೇಟಿಂಗ್ ಐಡಿಯಾಗಳು
ಅಕ್ಕಿ ಹಾಕದೆ ರಾಗಿ ಮಾತ್ರ ಬಳಸಿ ಮಾಡುವ ಇಡ್ಲಿ, ಮಧುಮೇಹಿಗಳಿಗೆ ರುಚಿಕರವಾದ ಬ್ರೇಕ್ಫಾಸ್ಟ್ ಆಯ್ಕೆ
ರಾಗಿ ತಿನ್ನುವುದರಿಂದ ರೋಗ ದೂರವಿಡಬಹುದು, ಮಧುಮೇಹಿಗಳ ಪಾಲಿನ ಅಮೃತ ರಾಗಿಯೆಂದರೆ ತಪ್ಪಾಗಲಾರದು. ಮುದ್ದೆ, ಇಡ್ಲಿ, ರೊಟ್ಟಿ, ರಾಗಿ ಮಣ್ಣಿ ಅಂತ ರುಚಿ ರುಚಿಯಾಗಿ ಇದನ್ನು ಮಾಡಿ ಸವಿಯಬಹುದು, ರಾಗಿ ತಿನ್ನುವುದರಿಂದ ದೇಹಕ್ಕೆ ಅವಶ್ಯಕವಾದ ಪೋಷಕಾಂಶ ದೊರೆಯುವುದು, ಸಕ್ಕರೆಯಂಶ ನಿಯಂತ್ರಣದಲ್ಲಿಡಬಹುದು. ಇಲ್ಲಿ ನಾವು ಇಡಿ ರಾಗಿ ಬಳಸಿ ಮಾಡುವ ಬ್ರೇಕ್ಫಾಸ್ಟ್ ನೀಡಿದ್ದೇವೆ ನೋಡಿ:

ಬೇಕಾಗುವ ಸಾಮಗ್ರಿ
2 ಕಪ್ ರಾಗಿ (ಇಡಿ ರಾಗಿ)
ಉದ್ದಿನ ಬೇಳೆ 1 ಕಪ್
1 ಚಮಚ ಮೆಂತೆ ಬೀಜ
ಒಂದು ಮುಷ್ಟಿಯಷ್ಟು ಅವಲಕ್ಕಿ
ತುಪ್ಪ ಅಥವಾ ಎಣ್ಣೆ
ರುಚಿಗೆ ತಕ್ಕ ಉಪ್ಪು
ಮಾಡುವ ವಿಧಾನ
ನೀವು ರಾಗಿ ಮತ್ತೆ ಉದ್ದುವನ್ನು ಪ್ರತ್ಯೇಕವಾಗಿ ನೆನೆ ಹಾಕಿ. ನೀವು
6-8 ಗಂಟೆಗಳ ಕಾಲ ನೆನೆ ಹಾಕಿ.
ಮೆಂತೆಯನ್ನು ಕೂಡ ನೆನೆ ಹಾಕಿ
ಅವಲಕ್ಕಿ ರುಬ್ಬುವ 10 ನಿಮಿಷ ಮೊದಲು ನೆನೆ ಹಾಕಿದರೆ
ಸಾಕು.
- ರಾಗಿಯನ್ನು ರುಬ್ಬಿ, ತುಂಬಾ ನುಣ್ಣನೆ ರುಬ್ಬಬೇಡಿ,ಸ್ವಲ್ಪ ತರಿತರಿಯಾಗಿ ರುಬ್ಬಿ
- ಉದ್ದಿನ ಬೇಳೆ ರುಬ್ಬುವಾಗ ಮೆಂತೆ ಕೂಡ ಸೇರಿಸಿ ರುಬ್ಬಿ. ಅವಲಕ್ಕಿ ಕೂಡ ಸೇರಿಸಿ.
- ಈಗ ಎಲ್ಲಾ ಹಿಟ್ಟು ಚೆನ್ನಾಗಿ ಕಲೆಸಿ ಹುದುಗು ಬರಲು 8 ಗಂಟೆ ಇಡಿ.
- ನಂತರ ಇಡ್ಲಿ ಪಾತ್ರೆಗೆ ತುಪ್ಪ ಸವರಿ ಹಿಟ್ಟು ಹಾಕಿ 20 ನಿಮಿಷ ಬೇಯಿಸಿದರೆ ರುಚಿಯಾದ ರಾಗಿ ಇಡ್ಲಿ ರೆಡಿ.
ರಾಗಿ ಇಡ್ಲಿ ಮಧುಮೇಹಗಳಿಗೆ ಅತ್ಯುತ್ತುಮವಾದ
ಬ್ರೇಕ್ಫಾಸ್ಟ್
ಭಾರತದಲ್ಲಿ ಮಧುಮೆಹಿಗಳ ಸಮಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ, ಬದಲಾಗುತ್ತಿರುವ ಜೀವನಶೈಲಿ , ಆಹಾರ ಶೈಲಿ ಮಧುಮೇಹ ಹೆಚ್ಚಳಕ್ಕೆ ಬಹುದೊಡ್ಡ ಕೊಡುಗೆಯನ್ನೇ ನೀಡುತ್ತಿದೆ. ಮಧುಮೇಹ ನಿಯಂತ್ರಣದಲ್ಲಿರದಿದ್ದರೆ ಸೋಂಕು, ದೃಷ್ಟಿದೋಷ, ಕಿಡ್ನಿ ವೈಫಲ್ಯ, ಹೃದಯ ಸಂಬಮಧಿ ಸಮಸ್ಯೆ, ಪಾರ್ಶ್ವವಾಯು ಸೇರಿಸಿ ಅನೇಕ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಹಾಗಾಗಿ ಮಧುಮೇಹಿಗಳು ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ಪ್ರಯತ್ನಿಸಬೇಕು.
- ರಾಗಿ ಮಧುಮೇಹ ನಿಯಂತ್ರಿಸುವ ಅತ್ಯುತ್ತಮವಾದ ಆಹಾರವಾಗಿದೆ. ರಾಗಿಯಲ್ಲಿ ಪಾಲಿಫೀನೋಲ್, ಕ್ಯಾಲ್ಸಿಯಂ, ಅಮೈನೋ ಆಮ್ಲ ಅಂಶವಿದೆ. ಹಾಗಾಗಿ ಅಕ್ಕಿ ಬದಲಿಗೆ ರಾಗಿ ಸೇವನೆ ತುಂಬಾ ಒಳ್ಳೆಯದು.
- ರಾಗಿಯಲ್ಲಿ ಗ್ಲುಟೀನ್ ಫ್ರೀ ಆದ್ದರಿಂದ ರಾಗಿಗಳಿಗೆ ತುಂಬಾ ಒಳ್ಳೆಯದು.
- ರಾಗಿ ರಕ್ತದಲ್ಲಿ ಸಕ್ಕರೆಯಂಶ ಹೆಚ್ಚಾಗುವುದನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.
- ರಾಗಿಯಲ್ಲಿರುವ ಪೋಷಕಾಂಶಗಳು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ
- ತೂಕ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ.



Click it and Unblock the Notifications
