Latest Updates
-
ರಕ್ಷಾಬಂಧನ ವಿಶೇಷ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ಪ್ರಯಾಣಕ್ಕೂ ಮುನ್ನ ಈ ನಿಯಮಗಳನ್ನು ಮಿಸ್ ಮಾಡ್ಬೇಡಿ! -
ಖೇಲೋ ಇಂಡಿಯಾ ಸಂವಾದ ವೀಕ್ಷಿಸುವಾಗ ಜಡತ್ವ ಬೇಡ: 12 ನಿಮಿಷಗಳ ಈ ಸಿಂಪಲ್ ವರ್ಕೌಟ್ ಟ್ರೈ ಮಾಡಿ! -
ಆಗಸ್ಟ್ 27 ಅಥವಾ 28? ರಾಖಿ ಹಬ್ಬದ ಗೊಂದಲಕ್ಕೆ ಇಲ್ಲಿದೆ ಬೆಸ್ಟ್ ಪ್ಲಾನ್! -
ಗುಡುಗು-ಸಿಡಿಲು ಮಳೆ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು 15 ನಿಮಿಷಗಳ ತುರ್ತು ಕ್ರಮಗಳು -
ರಕ್ಷಾಬಂಧನಕ್ಕೆ ಸಿಹಿ ಖರೀದಿಸ್ತಿದ್ದೀರಾ? ಈ ತಪ್ಪು ಮಾಡಿದ್ರೆ ಆರೋಗ್ಯಕ್ಕೆ ಕುತ್ತು, ನಕಲಿ ಸ್ವೀಟ್ಸ್ ಪತ್ತೆ! -
ರಕ್ಷಾಬಂಧನಕ್ಕೆ ಚಿನ್ನ ಖರೀದಿಸುವ ಮುನ್ನ ಎಚ್ಚರ! ಇಂದಿನ ದರ ಮತ್ತು ಲಾಭದಾಯಕ ಟಿಪ್ಸ್ ಇಲ್ಲಿದೆ -
ರಾಷ್ಟ್ರೀಯ ಕ್ರೀಡಾ ದಿನ: 29 ನಿಮಿಷಗಳ ಸರಳ ವರ್ಕೌಟ್ ಮೂಲಕ ಫಿಟ್ ಆಗಿ! -
ಕುಟುಂಬದಲ್ಲಿ ಉಡುಪಿನ ಬಗ್ಗೆ ಟೀಕೆಗಳೇ? ಈ 7 ವಾಕ್ಯಗಳ ಮೂಲಕ ಗೌರವಯುತವಾಗಿ ಉತ್ತರಿಸಿ! -
ಈರುಳ್ಳಿ ಬೆಲೆ ಏರಿಕೆ: ಅಡುಗೆಮನೆಯ ಬಜೆಟ್ ಉಳಿಸಲು ಸರಳ ಟಿಪ್ಸ್ ಮತ್ತು ಪರ್ಯಾಯಗಳು! -
ಪ್ಯಾಕೆಟ್ ಆಹಾರದ ಮೇಲೆ ಕಡ್ಡಾಯ ಎಚ್ಚರಿಕೆ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಅಂತಿಮ ಗಡುವು!
ಅಕ್ಕಿ ಹಾಕದೆ ರಾಗಿ ಮಾತ್ರ ಬಳಸಿ ಮಾಡುವ ಇಡ್ಲಿ, ಮಧುಮೇಹಿಗಳಿಗೆ ರುಚಿಕರವಾದ ಬ್ರೇಕ್ಫಾಸ್ಟ್ ಆಯ್ಕೆ
ರಾಗಿ ತಿನ್ನುವುದರಿಂದ ರೋಗ ದೂರವಿಡಬಹುದು, ಮಧುಮೇಹಿಗಳ ಪಾಲಿನ ಅಮೃತ ರಾಗಿಯೆಂದರೆ ತಪ್ಪಾಗಲಾರದು. ಮುದ್ದೆ, ಇಡ್ಲಿ, ರೊಟ್ಟಿ, ರಾಗಿ ಮಣ್ಣಿ ಅಂತ ರುಚಿ ರುಚಿಯಾಗಿ ಇದನ್ನು ಮಾಡಿ ಸವಿಯಬಹುದು, ರಾಗಿ ತಿನ್ನುವುದರಿಂದ ದೇಹಕ್ಕೆ ಅವಶ್ಯಕವಾದ ಪೋಷಕಾಂಶ ದೊರೆಯುವುದು, ಸಕ್ಕರೆಯಂಶ ನಿಯಂತ್ರಣದಲ್ಲಿಡಬಹುದು. ಇಲ್ಲಿ ನಾವು ಇಡಿ ರಾಗಿ ಬಳಸಿ ಮಾಡುವ ಬ್ರೇಕ್ಫಾಸ್ಟ್ ನೀಡಿದ್ದೇವೆ ನೋಡಿ:

ಬೇಕಾಗುವ ಸಾಮಗ್ರಿ
2 ಕಪ್ ರಾಗಿ (ಇಡಿ ರಾಗಿ)
ಉದ್ದಿನ ಬೇಳೆ 1 ಕಪ್
1 ಚಮಚ ಮೆಂತೆ ಬೀಜ
ಒಂದು ಮುಷ್ಟಿಯಷ್ಟು ಅವಲಕ್ಕಿ
ತುಪ್ಪ ಅಥವಾ ಎಣ್ಣೆ
ರುಚಿಗೆ ತಕ್ಕ ಉಪ್ಪು
ಮಾಡುವ ವಿಧಾನ
ನೀವು ರಾಗಿ ಮತ್ತೆ ಉದ್ದುವನ್ನು ಪ್ರತ್ಯೇಕವಾಗಿ ನೆನೆ ಹಾಕಿ. ನೀವು
6-8 ಗಂಟೆಗಳ ಕಾಲ ನೆನೆ ಹಾಕಿ.
ಮೆಂತೆಯನ್ನು ಕೂಡ ನೆನೆ ಹಾಕಿ
ಅವಲಕ್ಕಿ ರುಬ್ಬುವ 10 ನಿಮಿಷ ಮೊದಲು ನೆನೆ ಹಾಕಿದರೆ
ಸಾಕು.
- ರಾಗಿಯನ್ನು ರುಬ್ಬಿ, ತುಂಬಾ ನುಣ್ಣನೆ ರುಬ್ಬಬೇಡಿ,ಸ್ವಲ್ಪ ತರಿತರಿಯಾಗಿ ರುಬ್ಬಿ
- ಉದ್ದಿನ ಬೇಳೆ ರುಬ್ಬುವಾಗ ಮೆಂತೆ ಕೂಡ ಸೇರಿಸಿ ರುಬ್ಬಿ. ಅವಲಕ್ಕಿ ಕೂಡ ಸೇರಿಸಿ.
- ಈಗ ಎಲ್ಲಾ ಹಿಟ್ಟು ಚೆನ್ನಾಗಿ ಕಲೆಸಿ ಹುದುಗು ಬರಲು 8 ಗಂಟೆ ಇಡಿ.
- ನಂತರ ಇಡ್ಲಿ ಪಾತ್ರೆಗೆ ತುಪ್ಪ ಸವರಿ ಹಿಟ್ಟು ಹಾಕಿ 20 ನಿಮಿಷ ಬೇಯಿಸಿದರೆ ರುಚಿಯಾದ ರಾಗಿ ಇಡ್ಲಿ ರೆಡಿ.
ರಾಗಿ ಇಡ್ಲಿ ಮಧುಮೇಹಗಳಿಗೆ ಅತ್ಯುತ್ತುಮವಾದ
ಬ್ರೇಕ್ಫಾಸ್ಟ್
ಭಾರತದಲ್ಲಿ ಮಧುಮೆಹಿಗಳ ಸಮಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ, ಬದಲಾಗುತ್ತಿರುವ ಜೀವನಶೈಲಿ , ಆಹಾರ ಶೈಲಿ ಮಧುಮೇಹ ಹೆಚ್ಚಳಕ್ಕೆ ಬಹುದೊಡ್ಡ ಕೊಡುಗೆಯನ್ನೇ ನೀಡುತ್ತಿದೆ. ಮಧುಮೇಹ ನಿಯಂತ್ರಣದಲ್ಲಿರದಿದ್ದರೆ ಸೋಂಕು, ದೃಷ್ಟಿದೋಷ, ಕಿಡ್ನಿ ವೈಫಲ್ಯ, ಹೃದಯ ಸಂಬಮಧಿ ಸಮಸ್ಯೆ, ಪಾರ್ಶ್ವವಾಯು ಸೇರಿಸಿ ಅನೇಕ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಹಾಗಾಗಿ ಮಧುಮೇಹಿಗಳು ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ಪ್ರಯತ್ನಿಸಬೇಕು.
- ರಾಗಿ ಮಧುಮೇಹ ನಿಯಂತ್ರಿಸುವ ಅತ್ಯುತ್ತಮವಾದ ಆಹಾರವಾಗಿದೆ. ರಾಗಿಯಲ್ಲಿ ಪಾಲಿಫೀನೋಲ್, ಕ್ಯಾಲ್ಸಿಯಂ, ಅಮೈನೋ ಆಮ್ಲ ಅಂಶವಿದೆ. ಹಾಗಾಗಿ ಅಕ್ಕಿ ಬದಲಿಗೆ ರಾಗಿ ಸೇವನೆ ತುಂಬಾ ಒಳ್ಳೆಯದು.
- ರಾಗಿಯಲ್ಲಿ ಗ್ಲುಟೀನ್ ಫ್ರೀ ಆದ್ದರಿಂದ ರಾಗಿಗಳಿಗೆ ತುಂಬಾ ಒಳ್ಳೆಯದು.
- ರಾಗಿ ರಕ್ತದಲ್ಲಿ ಸಕ್ಕರೆಯಂಶ ಹೆಚ್ಚಾಗುವುದನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.
- ರಾಗಿಯಲ್ಲಿರುವ ಪೋಷಕಾಂಶಗಳು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ
- ತೂಕ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ.



Click it and Unblock the Notifications