Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಅಕ್ಕಿ ಹಾಕದೆ ರಾಗಿ ಮಾತ್ರ ಬಳಸಿ ಮಾಡುವ ಇಡ್ಲಿ, ಮಧುಮೇಹಿಗಳಿಗೆ ರುಚಿಕರವಾದ ಬ್ರೇಕ್ಫಾಸ್ಟ್ ಆಯ್ಕೆ
ರಾಗಿ ತಿನ್ನುವುದರಿಂದ ರೋಗ ದೂರವಿಡಬಹುದು, ಮಧುಮೇಹಿಗಳ ಪಾಲಿನ ಅಮೃತ ರಾಗಿಯೆಂದರೆ ತಪ್ಪಾಗಲಾರದು. ಮುದ್ದೆ, ಇಡ್ಲಿ, ರೊಟ್ಟಿ, ರಾಗಿ ಮಣ್ಣಿ ಅಂತ ರುಚಿ ರುಚಿಯಾಗಿ ಇದನ್ನು ಮಾಡಿ ಸವಿಯಬಹುದು, ರಾಗಿ ತಿನ್ನುವುದರಿಂದ ದೇಹಕ್ಕೆ ಅವಶ್ಯಕವಾದ ಪೋಷಕಾಂಶ ದೊರೆಯುವುದು, ಸಕ್ಕರೆಯಂಶ ನಿಯಂತ್ರಣದಲ್ಲಿಡಬಹುದು. ಇಲ್ಲಿ ನಾವು ಇಡಿ ರಾಗಿ ಬಳಸಿ ಮಾಡುವ ಬ್ರೇಕ್ಫಾಸ್ಟ್ ನೀಡಿದ್ದೇವೆ ನೋಡಿ:

ಬೇಕಾಗುವ ಸಾಮಗ್ರಿ
2 ಕಪ್ ರಾಗಿ (ಇಡಿ ರಾಗಿ)
ಉದ್ದಿನ ಬೇಳೆ 1 ಕಪ್
1 ಚಮಚ ಮೆಂತೆ ಬೀಜ
ಒಂದು ಮುಷ್ಟಿಯಷ್ಟು ಅವಲಕ್ಕಿ
ತುಪ್ಪ ಅಥವಾ ಎಣ್ಣೆ
ರುಚಿಗೆ ತಕ್ಕ ಉಪ್ಪು
ಮಾಡುವ ವಿಧಾನ
ನೀವು ರಾಗಿ ಮತ್ತೆ ಉದ್ದುವನ್ನು ಪ್ರತ್ಯೇಕವಾಗಿ ನೆನೆ ಹಾಕಿ. ನೀವು
6-8 ಗಂಟೆಗಳ ಕಾಲ ನೆನೆ ಹಾಕಿ.
ಮೆಂತೆಯನ್ನು ಕೂಡ ನೆನೆ ಹಾಕಿ
ಅವಲಕ್ಕಿ ರುಬ್ಬುವ 10 ನಿಮಿಷ ಮೊದಲು ನೆನೆ ಹಾಕಿದರೆ
ಸಾಕು.
- ರಾಗಿಯನ್ನು ರುಬ್ಬಿ, ತುಂಬಾ ನುಣ್ಣನೆ ರುಬ್ಬಬೇಡಿ,ಸ್ವಲ್ಪ ತರಿತರಿಯಾಗಿ ರುಬ್ಬಿ
- ಉದ್ದಿನ ಬೇಳೆ ರುಬ್ಬುವಾಗ ಮೆಂತೆ ಕೂಡ ಸೇರಿಸಿ ರುಬ್ಬಿ. ಅವಲಕ್ಕಿ ಕೂಡ ಸೇರಿಸಿ.
- ಈಗ ಎಲ್ಲಾ ಹಿಟ್ಟು ಚೆನ್ನಾಗಿ ಕಲೆಸಿ ಹುದುಗು ಬರಲು 8 ಗಂಟೆ ಇಡಿ.
- ನಂತರ ಇಡ್ಲಿ ಪಾತ್ರೆಗೆ ತುಪ್ಪ ಸವರಿ ಹಿಟ್ಟು ಹಾಕಿ 20 ನಿಮಿಷ ಬೇಯಿಸಿದರೆ ರುಚಿಯಾದ ರಾಗಿ ಇಡ್ಲಿ ರೆಡಿ.
ರಾಗಿ ಇಡ್ಲಿ ಮಧುಮೇಹಗಳಿಗೆ ಅತ್ಯುತ್ತುಮವಾದ
ಬ್ರೇಕ್ಫಾಸ್ಟ್
ಭಾರತದಲ್ಲಿ ಮಧುಮೆಹಿಗಳ ಸಮಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ, ಬದಲಾಗುತ್ತಿರುವ ಜೀವನಶೈಲಿ , ಆಹಾರ ಶೈಲಿ ಮಧುಮೇಹ ಹೆಚ್ಚಳಕ್ಕೆ ಬಹುದೊಡ್ಡ ಕೊಡುಗೆಯನ್ನೇ ನೀಡುತ್ತಿದೆ. ಮಧುಮೇಹ ನಿಯಂತ್ರಣದಲ್ಲಿರದಿದ್ದರೆ ಸೋಂಕು, ದೃಷ್ಟಿದೋಷ, ಕಿಡ್ನಿ ವೈಫಲ್ಯ, ಹೃದಯ ಸಂಬಮಧಿ ಸಮಸ್ಯೆ, ಪಾರ್ಶ್ವವಾಯು ಸೇರಿಸಿ ಅನೇಕ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಹಾಗಾಗಿ ಮಧುಮೇಹಿಗಳು ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ಪ್ರಯತ್ನಿಸಬೇಕು.
- ರಾಗಿ ಮಧುಮೇಹ ನಿಯಂತ್ರಿಸುವ ಅತ್ಯುತ್ತಮವಾದ ಆಹಾರವಾಗಿದೆ. ರಾಗಿಯಲ್ಲಿ ಪಾಲಿಫೀನೋಲ್, ಕ್ಯಾಲ್ಸಿಯಂ, ಅಮೈನೋ ಆಮ್ಲ ಅಂಶವಿದೆ. ಹಾಗಾಗಿ ಅಕ್ಕಿ ಬದಲಿಗೆ ರಾಗಿ ಸೇವನೆ ತುಂಬಾ ಒಳ್ಳೆಯದು.
- ರಾಗಿಯಲ್ಲಿ ಗ್ಲುಟೀನ್ ಫ್ರೀ ಆದ್ದರಿಂದ ರಾಗಿಗಳಿಗೆ ತುಂಬಾ ಒಳ್ಳೆಯದು.
- ರಾಗಿ ರಕ್ತದಲ್ಲಿ ಸಕ್ಕರೆಯಂಶ ಹೆಚ್ಚಾಗುವುದನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.
- ರಾಗಿಯಲ್ಲಿರುವ ಪೋಷಕಾಂಶಗಳು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ
- ತೂಕ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ.



Click it and Unblock the Notifications