Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಅಕ್ಕಿ ಹಾಕದೆ ರಾಗಿ ಮಾತ್ರ ಬಳಸಿ ಮಾಡುವ ಇಡ್ಲಿ, ಮಧುಮೇಹಿಗಳಿಗೆ ರುಚಿಕರವಾದ ಬ್ರೇಕ್ಫಾಸ್ಟ್ ಆಯ್ಕೆ
ರಾಗಿ ತಿನ್ನುವುದರಿಂದ ರೋಗ ದೂರವಿಡಬಹುದು, ಮಧುಮೇಹಿಗಳ ಪಾಲಿನ ಅಮೃತ ರಾಗಿಯೆಂದರೆ ತಪ್ಪಾಗಲಾರದು. ಮುದ್ದೆ, ಇಡ್ಲಿ, ರೊಟ್ಟಿ, ರಾಗಿ ಮಣ್ಣಿ ಅಂತ ರುಚಿ ರುಚಿಯಾಗಿ ಇದನ್ನು ಮಾಡಿ ಸವಿಯಬಹುದು, ರಾಗಿ ತಿನ್ನುವುದರಿಂದ ದೇಹಕ್ಕೆ ಅವಶ್ಯಕವಾದ ಪೋಷಕಾಂಶ ದೊರೆಯುವುದು, ಸಕ್ಕರೆಯಂಶ ನಿಯಂತ್ರಣದಲ್ಲಿಡಬಹುದು. ಇಲ್ಲಿ ನಾವು ಇಡಿ ರಾಗಿ ಬಳಸಿ ಮಾಡುವ ಬ್ರೇಕ್ಫಾಸ್ಟ್ ನೀಡಿದ್ದೇವೆ ನೋಡಿ:

ಬೇಕಾಗುವ ಸಾಮಗ್ರಿ
2 ಕಪ್ ರಾಗಿ (ಇಡಿ ರಾಗಿ)
ಉದ್ದಿನ ಬೇಳೆ 1 ಕಪ್
1 ಚಮಚ ಮೆಂತೆ ಬೀಜ
ಒಂದು ಮುಷ್ಟಿಯಷ್ಟು ಅವಲಕ್ಕಿ
ತುಪ್ಪ ಅಥವಾ ಎಣ್ಣೆ
ರುಚಿಗೆ ತಕ್ಕ ಉಪ್ಪು
ಮಾಡುವ ವಿಧಾನ
ನೀವು ರಾಗಿ ಮತ್ತೆ ಉದ್ದುವನ್ನು ಪ್ರತ್ಯೇಕವಾಗಿ ನೆನೆ ಹಾಕಿ. ನೀವು
6-8 ಗಂಟೆಗಳ ಕಾಲ ನೆನೆ ಹಾಕಿ.
ಮೆಂತೆಯನ್ನು ಕೂಡ ನೆನೆ ಹಾಕಿ
ಅವಲಕ್ಕಿ ರುಬ್ಬುವ 10 ನಿಮಿಷ ಮೊದಲು ನೆನೆ ಹಾಕಿದರೆ
ಸಾಕು.
- ರಾಗಿಯನ್ನು ರುಬ್ಬಿ, ತುಂಬಾ ನುಣ್ಣನೆ ರುಬ್ಬಬೇಡಿ,ಸ್ವಲ್ಪ ತರಿತರಿಯಾಗಿ ರುಬ್ಬಿ
- ಉದ್ದಿನ ಬೇಳೆ ರುಬ್ಬುವಾಗ ಮೆಂತೆ ಕೂಡ ಸೇರಿಸಿ ರುಬ್ಬಿ. ಅವಲಕ್ಕಿ ಕೂಡ ಸೇರಿಸಿ.
- ಈಗ ಎಲ್ಲಾ ಹಿಟ್ಟು ಚೆನ್ನಾಗಿ ಕಲೆಸಿ ಹುದುಗು ಬರಲು 8 ಗಂಟೆ ಇಡಿ.
- ನಂತರ ಇಡ್ಲಿ ಪಾತ್ರೆಗೆ ತುಪ್ಪ ಸವರಿ ಹಿಟ್ಟು ಹಾಕಿ 20 ನಿಮಿಷ ಬೇಯಿಸಿದರೆ ರುಚಿಯಾದ ರಾಗಿ ಇಡ್ಲಿ ರೆಡಿ.
ರಾಗಿ ಇಡ್ಲಿ ಮಧುಮೇಹಗಳಿಗೆ ಅತ್ಯುತ್ತುಮವಾದ
ಬ್ರೇಕ್ಫಾಸ್ಟ್
ಭಾರತದಲ್ಲಿ ಮಧುಮೆಹಿಗಳ ಸಮಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ, ಬದಲಾಗುತ್ತಿರುವ ಜೀವನಶೈಲಿ , ಆಹಾರ ಶೈಲಿ ಮಧುಮೇಹ ಹೆಚ್ಚಳಕ್ಕೆ ಬಹುದೊಡ್ಡ ಕೊಡುಗೆಯನ್ನೇ ನೀಡುತ್ತಿದೆ. ಮಧುಮೇಹ ನಿಯಂತ್ರಣದಲ್ಲಿರದಿದ್ದರೆ ಸೋಂಕು, ದೃಷ್ಟಿದೋಷ, ಕಿಡ್ನಿ ವೈಫಲ್ಯ, ಹೃದಯ ಸಂಬಮಧಿ ಸಮಸ್ಯೆ, ಪಾರ್ಶ್ವವಾಯು ಸೇರಿಸಿ ಅನೇಕ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಹಾಗಾಗಿ ಮಧುಮೇಹಿಗಳು ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ಪ್ರಯತ್ನಿಸಬೇಕು.
- ರಾಗಿ ಮಧುಮೇಹ ನಿಯಂತ್ರಿಸುವ ಅತ್ಯುತ್ತಮವಾದ ಆಹಾರವಾಗಿದೆ. ರಾಗಿಯಲ್ಲಿ ಪಾಲಿಫೀನೋಲ್, ಕ್ಯಾಲ್ಸಿಯಂ, ಅಮೈನೋ ಆಮ್ಲ ಅಂಶವಿದೆ. ಹಾಗಾಗಿ ಅಕ್ಕಿ ಬದಲಿಗೆ ರಾಗಿ ಸೇವನೆ ತುಂಬಾ ಒಳ್ಳೆಯದು.
- ರಾಗಿಯಲ್ಲಿ ಗ್ಲುಟೀನ್ ಫ್ರೀ ಆದ್ದರಿಂದ ರಾಗಿಗಳಿಗೆ ತುಂಬಾ ಒಳ್ಳೆಯದು.
- ರಾಗಿ ರಕ್ತದಲ್ಲಿ ಸಕ್ಕರೆಯಂಶ ಹೆಚ್ಚಾಗುವುದನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.
- ರಾಗಿಯಲ್ಲಿರುವ ಪೋಷಕಾಂಶಗಳು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ
- ತೂಕ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ.



Click it and Unblock the Notifications
