Latest Updates
-
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು
ಚುಕ್ಕಿ ಚಂದ್ರಮನಲ್ಲೂ ನಿನ್ನನ್ನೇ ಹುಡುಕುತ್ತಾ...

"ಎಲ್ಲಿಯೋ ಮಧು ಬಟ್ಟಲು ಒಡೆದ ಸದ್ದು! ಯಾರ ಹೃದಯ ಚೂರಾಯಿತೋ?"ಎಂದು ಕೇಳಿದವನು ಗಾಲಿಬ್.
ಈ ಬದುಕಿನಲ್ಲಿ ಪ್ರೀತಿಯನ್ನು ಅನುಭವಿಸಿದಷ್ಟೇ ತೀವ್ರವಾಗಿ ವಿಷಾಧವನ್ನೂ ಅನುಭವಿಸಿದವರಿಗೆ ಮಾತ್ರ ಆ ಸದ್ದು ಕೇಳುತ್ತದೆ. ಅಂತಹ ಪ್ರತಿ ಸದ್ದಿನ ಹಿಂದೆ ಒಂದು ವಂಚನೆ ಇರಬಹುದು ಅಥವಾ ಒಂದು ಅಮಾಯಕ ನಂಬಿಕೆ ಇರಬಹುದು!
ಮಲೆನಾಡಿನ ಮಾಮರದಲ್ಲೆಲ್ಲೋ ಚಿಗುರು ತಿಂದು ಕೂಗಿದ ಕೋಗಿಲೆಯ ಕೂಹೂವಿಗೆ ಬಯಲು ಸೀಮೆಯ ಮೂಲೆಯಲ್ಲಿರುವ ಮರದ ಮೇಲೆ ಕುಳಿತ ಹೆಸರಿಲ್ಲದ ಹಕ್ಕಿ ಅನುಭವಿಸಿದ ಹೇಳಿಕೊಳ್ಳಲಾಗದ ಖುಷಿಯಂತೆ ಈ ಬದುಕಿನಲಿ ನಡೆದು ಬಂದೆ! ಬರೀ ಕಿಳರಿಮೆಗಳೇ ತುಂಬಿದ ಈ ಹುಡುಗನ ಆತ್ಮವಿಶ್ವಾಸದಂತೆ!! ಆಮೇಲೇನಿದೆ ಈ ಬಾನು, ಈ ಭೂಮಿ ಯಾವುದು ಸಾಲದೆಂಬಂತೆ ತಿರುಗಾಡಿಬಿಟ್ಟೆವು ಸ್ಟಾರ್ ಹೋಟೆಲಿನಿಂದ ಬೀದಿ ಬದಿಯ ಗೊಲಗುಪ್ಪೆ ವರೆಗೆ. ಎಲ್ಲೆಲ್ಲು ನಾವೇ!!
ಒಂದೇ ಯೋಚನೆ,ಯೋಜನೆ,ಅಭಿರುಚಿ,ಕನಸು ಎಲ್ಲವು ಇದ್ದೂ, ನಾವು ಬೇರೆಯಾಗಿದ್ದು ಯಾಕೆ? I think ಇದು ಯಾವತ್ತಿಗೂ ಬಗೆಹರಿಯದ ಪ್ರಶ್ನೆ! ನಮ್ಮ ಅಹಂ, attitude, possessiveness, ಹೊಂದಾಣಿಕೆ, ಹಠ, ಜಗಳ ಹೀಗೆ ನೂರು ಕಾರಣಗಳು ಇದ್ದರೂ, ತಪ್ಪು ಯಾರದೇ ಇದ್ದರೂ ಸೋನು, ಚೂರೆ ಚೂರು ಇದೆಲ್ಲವನ್ನೂ ಬಿಟ್ಟು ಯೋಚನೆ ಮಾಡಿ ನೋಡು ಕೂಡಿ ಬದುಕಲಿಕ್ಕೆ ಸಾವಿರ ಕಾರಣ ಸಿಕ್ಕಾವು.
ಹೆಸರೇ ಕೇಳದ ದೂರದ ಊರುಗಳಲ್ಲಿ ಹುಟ್ಟಿ, ಬೆಳೆದು ಕೇವಲ ಈ ಪ್ರೀತಿಗಾಗಿಯೇ ನಾವಿಬ್ಬರು ಸೇರಿದೆವೇನೋ ಅನಿಸುತ್ತದೆ. ಬಿಡು ಇದೆಲ್ಲ ನನ್ನ ಪೆದ್ದು ಮನಸಿನ ಭಾವುಕ ಕನವರಿಕೆ ಇರಬಹುದು. ಇಡೀ ಬದುಕನ್ನು ಒಂದು ಲ್ಯಾಬ್ ನಲ್ಲಿನ ಪ್ರಾಕ್ಟಿಕಲ್ ಎಂದು ತಿಳಿದ ಸೈನ್ಸ್ ಹುಡುಗಿಯಲ್ಲವೇ ನೀನು? ಹಾಳು ಹಂಪೆಯ ಕಲ್ಲಿನ ರಥದ ಮುಂದೆ ನಿಂತು ಅಂದಿನ ಶ್ರೀ ಕೃಷ್ಣ ದೇವರಾಯನ ಸುವರ್ಣ ಕಾಲಕ್ಕೆ ಹೋಗಿ, ಅಂದಿನ ವೈಭವವನ್ನು ಇಂದು ಅನುಭವಿಸುವ ಇತಿಹಾಸ ಕಲಿತವನ ಮನದ ಭಾವುಕತೆ ನಿನಗೆಲ್ಲಿ ಅರ್ಥವಾದೀತು?
ಹುಣ್ಣಿಮೆಯ ರಾತ್ರಿ ಗೆಳತಿಯರೋಡಗೂಡಿ ಪಾನಿಪುರಿ ತಿಂದು ಬಂದು ಯಾವುದೊ ಇಂಗ್ಲಿಷ್ ಸಿನಿಮಾ ನೋಡೋಳಿಗೆ ಟೆರೇಸಿನ ಮೇಲೆ ಮಲಗಿ ಚುಕ್ಕಿಗಳೊಂದಿಗೆ ಮಾತನಾಡುತ್ತ, ಚಂದ್ರನ ಮೇಲೊಂದು ಕವಿತೆ ಕಟ್ಟಲು ಪರದಾಡುತಿರುವ ಈ ಹುಡುಗ ಹುಚ್ಚನ ಹಾಗೆ ಕಂಡರೆ ಅದು ನಿನ್ನ ತಪ್ಪಲ್ಲ ಬಿಡು. ಅಸಂಖ್ಯಾತ ಚುಕ್ಕಿಗಳಲು, ಚಲುವಾಂತ ಚನ್ನಿಗ ಚಂದ್ರನ ಮುಖದಲ್ಲೂ, ನಿನ್ನನ್ನೇ ಹುಡುಕುತಿರುವ ಈ ಪೆದ್ದು ಮನಸಿನ ಹುಡುಗ ನಿನಗೆ ನೆನಪಾಗುತ್ತಿಲ್ಲವೇ? I Miss You ಕಣೇ...
I Love You.



Click it and Unblock the Notifications