Latest Updates
-
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ
ಚುಕ್ಕಿ ಚಂದ್ರಮನಲ್ಲೂ ನಿನ್ನನ್ನೇ ಹುಡುಕುತ್ತಾ...

"ಎಲ್ಲಿಯೋ ಮಧು ಬಟ್ಟಲು ಒಡೆದ ಸದ್ದು! ಯಾರ ಹೃದಯ ಚೂರಾಯಿತೋ?"ಎಂದು ಕೇಳಿದವನು ಗಾಲಿಬ್.
ಈ ಬದುಕಿನಲ್ಲಿ ಪ್ರೀತಿಯನ್ನು ಅನುಭವಿಸಿದಷ್ಟೇ ತೀವ್ರವಾಗಿ ವಿಷಾಧವನ್ನೂ ಅನುಭವಿಸಿದವರಿಗೆ ಮಾತ್ರ ಆ ಸದ್ದು ಕೇಳುತ್ತದೆ. ಅಂತಹ ಪ್ರತಿ ಸದ್ದಿನ ಹಿಂದೆ ಒಂದು ವಂಚನೆ ಇರಬಹುದು ಅಥವಾ ಒಂದು ಅಮಾಯಕ ನಂಬಿಕೆ ಇರಬಹುದು!
ಮಲೆನಾಡಿನ ಮಾಮರದಲ್ಲೆಲ್ಲೋ ಚಿಗುರು ತಿಂದು ಕೂಗಿದ ಕೋಗಿಲೆಯ ಕೂಹೂವಿಗೆ ಬಯಲು ಸೀಮೆಯ ಮೂಲೆಯಲ್ಲಿರುವ ಮರದ ಮೇಲೆ ಕುಳಿತ ಹೆಸರಿಲ್ಲದ ಹಕ್ಕಿ ಅನುಭವಿಸಿದ ಹೇಳಿಕೊಳ್ಳಲಾಗದ ಖುಷಿಯಂತೆ ಈ ಬದುಕಿನಲಿ ನಡೆದು ಬಂದೆ! ಬರೀ ಕಿಳರಿಮೆಗಳೇ ತುಂಬಿದ ಈ ಹುಡುಗನ ಆತ್ಮವಿಶ್ವಾಸದಂತೆ!! ಆಮೇಲೇನಿದೆ ಈ ಬಾನು, ಈ ಭೂಮಿ ಯಾವುದು ಸಾಲದೆಂಬಂತೆ ತಿರುಗಾಡಿಬಿಟ್ಟೆವು ಸ್ಟಾರ್ ಹೋಟೆಲಿನಿಂದ ಬೀದಿ ಬದಿಯ ಗೊಲಗುಪ್ಪೆ ವರೆಗೆ. ಎಲ್ಲೆಲ್ಲು ನಾವೇ!!
ಒಂದೇ ಯೋಚನೆ,ಯೋಜನೆ,ಅಭಿರುಚಿ,ಕನಸು ಎಲ್ಲವು ಇದ್ದೂ, ನಾವು ಬೇರೆಯಾಗಿದ್ದು ಯಾಕೆ? I think ಇದು ಯಾವತ್ತಿಗೂ ಬಗೆಹರಿಯದ ಪ್ರಶ್ನೆ! ನಮ್ಮ ಅಹಂ, attitude, possessiveness, ಹೊಂದಾಣಿಕೆ, ಹಠ, ಜಗಳ ಹೀಗೆ ನೂರು ಕಾರಣಗಳು ಇದ್ದರೂ, ತಪ್ಪು ಯಾರದೇ ಇದ್ದರೂ ಸೋನು, ಚೂರೆ ಚೂರು ಇದೆಲ್ಲವನ್ನೂ ಬಿಟ್ಟು ಯೋಚನೆ ಮಾಡಿ ನೋಡು ಕೂಡಿ ಬದುಕಲಿಕ್ಕೆ ಸಾವಿರ ಕಾರಣ ಸಿಕ್ಕಾವು.
ಹೆಸರೇ ಕೇಳದ ದೂರದ ಊರುಗಳಲ್ಲಿ ಹುಟ್ಟಿ, ಬೆಳೆದು ಕೇವಲ ಈ ಪ್ರೀತಿಗಾಗಿಯೇ ನಾವಿಬ್ಬರು ಸೇರಿದೆವೇನೋ ಅನಿಸುತ್ತದೆ. ಬಿಡು ಇದೆಲ್ಲ ನನ್ನ ಪೆದ್ದು ಮನಸಿನ ಭಾವುಕ ಕನವರಿಕೆ ಇರಬಹುದು. ಇಡೀ ಬದುಕನ್ನು ಒಂದು ಲ್ಯಾಬ್ ನಲ್ಲಿನ ಪ್ರಾಕ್ಟಿಕಲ್ ಎಂದು ತಿಳಿದ ಸೈನ್ಸ್ ಹುಡುಗಿಯಲ್ಲವೇ ನೀನು? ಹಾಳು ಹಂಪೆಯ ಕಲ್ಲಿನ ರಥದ ಮುಂದೆ ನಿಂತು ಅಂದಿನ ಶ್ರೀ ಕೃಷ್ಣ ದೇವರಾಯನ ಸುವರ್ಣ ಕಾಲಕ್ಕೆ ಹೋಗಿ, ಅಂದಿನ ವೈಭವವನ್ನು ಇಂದು ಅನುಭವಿಸುವ ಇತಿಹಾಸ ಕಲಿತವನ ಮನದ ಭಾವುಕತೆ ನಿನಗೆಲ್ಲಿ ಅರ್ಥವಾದೀತು?
ಹುಣ್ಣಿಮೆಯ ರಾತ್ರಿ ಗೆಳತಿಯರೋಡಗೂಡಿ ಪಾನಿಪುರಿ ತಿಂದು ಬಂದು ಯಾವುದೊ ಇಂಗ್ಲಿಷ್ ಸಿನಿಮಾ ನೋಡೋಳಿಗೆ ಟೆರೇಸಿನ ಮೇಲೆ ಮಲಗಿ ಚುಕ್ಕಿಗಳೊಂದಿಗೆ ಮಾತನಾಡುತ್ತ, ಚಂದ್ರನ ಮೇಲೊಂದು ಕವಿತೆ ಕಟ್ಟಲು ಪರದಾಡುತಿರುವ ಈ ಹುಡುಗ ಹುಚ್ಚನ ಹಾಗೆ ಕಂಡರೆ ಅದು ನಿನ್ನ ತಪ್ಪಲ್ಲ ಬಿಡು. ಅಸಂಖ್ಯಾತ ಚುಕ್ಕಿಗಳಲು, ಚಲುವಾಂತ ಚನ್ನಿಗ ಚಂದ್ರನ ಮುಖದಲ್ಲೂ, ನಿನ್ನನ್ನೇ ಹುಡುಕುತಿರುವ ಈ ಪೆದ್ದು ಮನಸಿನ ಹುಡುಗ ನಿನಗೆ ನೆನಪಾಗುತ್ತಿಲ್ಲವೇ? I Miss You ಕಣೇ...
I Love You.



Click it and Unblock the Notifications
