Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಚುಕ್ಕಿ ಚಂದ್ರಮನಲ್ಲೂ ನಿನ್ನನ್ನೇ ಹುಡುಕುತ್ತಾ...

"ಎಲ್ಲಿಯೋ ಮಧು ಬಟ್ಟಲು ಒಡೆದ ಸದ್ದು! ಯಾರ ಹೃದಯ ಚೂರಾಯಿತೋ?"ಎಂದು ಕೇಳಿದವನು ಗಾಲಿಬ್.
ಈ ಬದುಕಿನಲ್ಲಿ ಪ್ರೀತಿಯನ್ನು ಅನುಭವಿಸಿದಷ್ಟೇ ತೀವ್ರವಾಗಿ ವಿಷಾಧವನ್ನೂ ಅನುಭವಿಸಿದವರಿಗೆ ಮಾತ್ರ ಆ ಸದ್ದು ಕೇಳುತ್ತದೆ. ಅಂತಹ ಪ್ರತಿ ಸದ್ದಿನ ಹಿಂದೆ ಒಂದು ವಂಚನೆ ಇರಬಹುದು ಅಥವಾ ಒಂದು ಅಮಾಯಕ ನಂಬಿಕೆ ಇರಬಹುದು!
ಮಲೆನಾಡಿನ ಮಾಮರದಲ್ಲೆಲ್ಲೋ ಚಿಗುರು ತಿಂದು ಕೂಗಿದ ಕೋಗಿಲೆಯ ಕೂಹೂವಿಗೆ ಬಯಲು ಸೀಮೆಯ ಮೂಲೆಯಲ್ಲಿರುವ ಮರದ ಮೇಲೆ ಕುಳಿತ ಹೆಸರಿಲ್ಲದ ಹಕ್ಕಿ ಅನುಭವಿಸಿದ ಹೇಳಿಕೊಳ್ಳಲಾಗದ ಖುಷಿಯಂತೆ ಈ ಬದುಕಿನಲಿ ನಡೆದು ಬಂದೆ! ಬರೀ ಕಿಳರಿಮೆಗಳೇ ತುಂಬಿದ ಈ ಹುಡುಗನ ಆತ್ಮವಿಶ್ವಾಸದಂತೆ!! ಆಮೇಲೇನಿದೆ ಈ ಬಾನು, ಈ ಭೂಮಿ ಯಾವುದು ಸಾಲದೆಂಬಂತೆ ತಿರುಗಾಡಿಬಿಟ್ಟೆವು ಸ್ಟಾರ್ ಹೋಟೆಲಿನಿಂದ ಬೀದಿ ಬದಿಯ ಗೊಲಗುಪ್ಪೆ ವರೆಗೆ. ಎಲ್ಲೆಲ್ಲು ನಾವೇ!!
ಒಂದೇ ಯೋಚನೆ,ಯೋಜನೆ,ಅಭಿರುಚಿ,ಕನಸು ಎಲ್ಲವು ಇದ್ದೂ, ನಾವು ಬೇರೆಯಾಗಿದ್ದು ಯಾಕೆ? I think ಇದು ಯಾವತ್ತಿಗೂ ಬಗೆಹರಿಯದ ಪ್ರಶ್ನೆ! ನಮ್ಮ ಅಹಂ, attitude, possessiveness, ಹೊಂದಾಣಿಕೆ, ಹಠ, ಜಗಳ ಹೀಗೆ ನೂರು ಕಾರಣಗಳು ಇದ್ದರೂ, ತಪ್ಪು ಯಾರದೇ ಇದ್ದರೂ ಸೋನು, ಚೂರೆ ಚೂರು ಇದೆಲ್ಲವನ್ನೂ ಬಿಟ್ಟು ಯೋಚನೆ ಮಾಡಿ ನೋಡು ಕೂಡಿ ಬದುಕಲಿಕ್ಕೆ ಸಾವಿರ ಕಾರಣ ಸಿಕ್ಕಾವು.
ಹೆಸರೇ ಕೇಳದ ದೂರದ ಊರುಗಳಲ್ಲಿ ಹುಟ್ಟಿ, ಬೆಳೆದು ಕೇವಲ ಈ ಪ್ರೀತಿಗಾಗಿಯೇ ನಾವಿಬ್ಬರು ಸೇರಿದೆವೇನೋ ಅನಿಸುತ್ತದೆ. ಬಿಡು ಇದೆಲ್ಲ ನನ್ನ ಪೆದ್ದು ಮನಸಿನ ಭಾವುಕ ಕನವರಿಕೆ ಇರಬಹುದು. ಇಡೀ ಬದುಕನ್ನು ಒಂದು ಲ್ಯಾಬ್ ನಲ್ಲಿನ ಪ್ರಾಕ್ಟಿಕಲ್ ಎಂದು ತಿಳಿದ ಸೈನ್ಸ್ ಹುಡುಗಿಯಲ್ಲವೇ ನೀನು? ಹಾಳು ಹಂಪೆಯ ಕಲ್ಲಿನ ರಥದ ಮುಂದೆ ನಿಂತು ಅಂದಿನ ಶ್ರೀ ಕೃಷ್ಣ ದೇವರಾಯನ ಸುವರ್ಣ ಕಾಲಕ್ಕೆ ಹೋಗಿ, ಅಂದಿನ ವೈಭವವನ್ನು ಇಂದು ಅನುಭವಿಸುವ ಇತಿಹಾಸ ಕಲಿತವನ ಮನದ ಭಾವುಕತೆ ನಿನಗೆಲ್ಲಿ ಅರ್ಥವಾದೀತು?
ಹುಣ್ಣಿಮೆಯ ರಾತ್ರಿ ಗೆಳತಿಯರೋಡಗೂಡಿ ಪಾನಿಪುರಿ ತಿಂದು ಬಂದು ಯಾವುದೊ ಇಂಗ್ಲಿಷ್ ಸಿನಿಮಾ ನೋಡೋಳಿಗೆ ಟೆರೇಸಿನ ಮೇಲೆ ಮಲಗಿ ಚುಕ್ಕಿಗಳೊಂದಿಗೆ ಮಾತನಾಡುತ್ತ, ಚಂದ್ರನ ಮೇಲೊಂದು ಕವಿತೆ ಕಟ್ಟಲು ಪರದಾಡುತಿರುವ ಈ ಹುಡುಗ ಹುಚ್ಚನ ಹಾಗೆ ಕಂಡರೆ ಅದು ನಿನ್ನ ತಪ್ಪಲ್ಲ ಬಿಡು. ಅಸಂಖ್ಯಾತ ಚುಕ್ಕಿಗಳಲು, ಚಲುವಾಂತ ಚನ್ನಿಗ ಚಂದ್ರನ ಮುಖದಲ್ಲೂ, ನಿನ್ನನ್ನೇ ಹುಡುಕುತಿರುವ ಈ ಪೆದ್ದು ಮನಸಿನ ಹುಡುಗ ನಿನಗೆ ನೆನಪಾಗುತ್ತಿಲ್ಲವೇ? I Miss You ಕಣೇ...
I Love You.



Click it and Unblock the Notifications