Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಚುಕ್ಕಿ ಚಂದ್ರಮನಲ್ಲೂ ನಿನ್ನನ್ನೇ ಹುಡುಕುತ್ತಾ...

"ಎಲ್ಲಿಯೋ ಮಧು ಬಟ್ಟಲು ಒಡೆದ ಸದ್ದು! ಯಾರ ಹೃದಯ ಚೂರಾಯಿತೋ?"ಎಂದು ಕೇಳಿದವನು ಗಾಲಿಬ್.
ಈ ಬದುಕಿನಲ್ಲಿ ಪ್ರೀತಿಯನ್ನು ಅನುಭವಿಸಿದಷ್ಟೇ ತೀವ್ರವಾಗಿ ವಿಷಾಧವನ್ನೂ ಅನುಭವಿಸಿದವರಿಗೆ ಮಾತ್ರ ಆ ಸದ್ದು ಕೇಳುತ್ತದೆ. ಅಂತಹ ಪ್ರತಿ ಸದ್ದಿನ ಹಿಂದೆ ಒಂದು ವಂಚನೆ ಇರಬಹುದು ಅಥವಾ ಒಂದು ಅಮಾಯಕ ನಂಬಿಕೆ ಇರಬಹುದು!
ಮಲೆನಾಡಿನ ಮಾಮರದಲ್ಲೆಲ್ಲೋ ಚಿಗುರು ತಿಂದು ಕೂಗಿದ ಕೋಗಿಲೆಯ ಕೂಹೂವಿಗೆ ಬಯಲು ಸೀಮೆಯ ಮೂಲೆಯಲ್ಲಿರುವ ಮರದ ಮೇಲೆ ಕುಳಿತ ಹೆಸರಿಲ್ಲದ ಹಕ್ಕಿ ಅನುಭವಿಸಿದ ಹೇಳಿಕೊಳ್ಳಲಾಗದ ಖುಷಿಯಂತೆ ಈ ಬದುಕಿನಲಿ ನಡೆದು ಬಂದೆ! ಬರೀ ಕಿಳರಿಮೆಗಳೇ ತುಂಬಿದ ಈ ಹುಡುಗನ ಆತ್ಮವಿಶ್ವಾಸದಂತೆ!! ಆಮೇಲೇನಿದೆ ಈ ಬಾನು, ಈ ಭೂಮಿ ಯಾವುದು ಸಾಲದೆಂಬಂತೆ ತಿರುಗಾಡಿಬಿಟ್ಟೆವು ಸ್ಟಾರ್ ಹೋಟೆಲಿನಿಂದ ಬೀದಿ ಬದಿಯ ಗೊಲಗುಪ್ಪೆ ವರೆಗೆ. ಎಲ್ಲೆಲ್ಲು ನಾವೇ!!
ಒಂದೇ ಯೋಚನೆ,ಯೋಜನೆ,ಅಭಿರುಚಿ,ಕನಸು ಎಲ್ಲವು ಇದ್ದೂ, ನಾವು ಬೇರೆಯಾಗಿದ್ದು ಯಾಕೆ? I think ಇದು ಯಾವತ್ತಿಗೂ ಬಗೆಹರಿಯದ ಪ್ರಶ್ನೆ! ನಮ್ಮ ಅಹಂ, attitude, possessiveness, ಹೊಂದಾಣಿಕೆ, ಹಠ, ಜಗಳ ಹೀಗೆ ನೂರು ಕಾರಣಗಳು ಇದ್ದರೂ, ತಪ್ಪು ಯಾರದೇ ಇದ್ದರೂ ಸೋನು, ಚೂರೆ ಚೂರು ಇದೆಲ್ಲವನ್ನೂ ಬಿಟ್ಟು ಯೋಚನೆ ಮಾಡಿ ನೋಡು ಕೂಡಿ ಬದುಕಲಿಕ್ಕೆ ಸಾವಿರ ಕಾರಣ ಸಿಕ್ಕಾವು.
ಹೆಸರೇ ಕೇಳದ ದೂರದ ಊರುಗಳಲ್ಲಿ ಹುಟ್ಟಿ, ಬೆಳೆದು ಕೇವಲ ಈ ಪ್ರೀತಿಗಾಗಿಯೇ ನಾವಿಬ್ಬರು ಸೇರಿದೆವೇನೋ ಅನಿಸುತ್ತದೆ. ಬಿಡು ಇದೆಲ್ಲ ನನ್ನ ಪೆದ್ದು ಮನಸಿನ ಭಾವುಕ ಕನವರಿಕೆ ಇರಬಹುದು. ಇಡೀ ಬದುಕನ್ನು ಒಂದು ಲ್ಯಾಬ್ ನಲ್ಲಿನ ಪ್ರಾಕ್ಟಿಕಲ್ ಎಂದು ತಿಳಿದ ಸೈನ್ಸ್ ಹುಡುಗಿಯಲ್ಲವೇ ನೀನು? ಹಾಳು ಹಂಪೆಯ ಕಲ್ಲಿನ ರಥದ ಮುಂದೆ ನಿಂತು ಅಂದಿನ ಶ್ರೀ ಕೃಷ್ಣ ದೇವರಾಯನ ಸುವರ್ಣ ಕಾಲಕ್ಕೆ ಹೋಗಿ, ಅಂದಿನ ವೈಭವವನ್ನು ಇಂದು ಅನುಭವಿಸುವ ಇತಿಹಾಸ ಕಲಿತವನ ಮನದ ಭಾವುಕತೆ ನಿನಗೆಲ್ಲಿ ಅರ್ಥವಾದೀತು?
ಹುಣ್ಣಿಮೆಯ ರಾತ್ರಿ ಗೆಳತಿಯರೋಡಗೂಡಿ ಪಾನಿಪುರಿ ತಿಂದು ಬಂದು ಯಾವುದೊ ಇಂಗ್ಲಿಷ್ ಸಿನಿಮಾ ನೋಡೋಳಿಗೆ ಟೆರೇಸಿನ ಮೇಲೆ ಮಲಗಿ ಚುಕ್ಕಿಗಳೊಂದಿಗೆ ಮಾತನಾಡುತ್ತ, ಚಂದ್ರನ ಮೇಲೊಂದು ಕವಿತೆ ಕಟ್ಟಲು ಪರದಾಡುತಿರುವ ಈ ಹುಡುಗ ಹುಚ್ಚನ ಹಾಗೆ ಕಂಡರೆ ಅದು ನಿನ್ನ ತಪ್ಪಲ್ಲ ಬಿಡು. ಅಸಂಖ್ಯಾತ ಚುಕ್ಕಿಗಳಲು, ಚಲುವಾಂತ ಚನ್ನಿಗ ಚಂದ್ರನ ಮುಖದಲ್ಲೂ, ನಿನ್ನನ್ನೇ ಹುಡುಕುತಿರುವ ಈ ಪೆದ್ದು ಮನಸಿನ ಹುಡುಗ ನಿನಗೆ ನೆನಪಾಗುತ್ತಿಲ್ಲವೇ? I Miss You ಕಣೇ...
I Love You.



Click it and Unblock the Notifications