Latest Updates
-
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ?
ಪ್ರೀತಿಗಾಗಿ ಕಾದಿರುವ ಹೃದಯ ಬರೆಯ ಉಯಿಲು

ನನ್ನ ಕಣ್ಣಲ್ಲಿ ಒಂದು ಹನಿ ನೀರು ಬಿದ್ದರೂ ನೀ ಅದೆಷ್ಟೋ ಚಡಪಡಿಸುತ್ತಿದ್ದೆ. ಆದರೆ ಈಗ ಈ ಹೃದಯ ನಿನಗಾಗಿ ಬಿಕ್ಕಿ ಬಿಕ್ಕಿ ಆಳುತ್ತಿದ್ದರೂ ನೋಡದಷ್ಟು ಕುರುಡನಾಗಿ ಹೋದೆಯಾ? ನೀನಾಡಿದ ಆ ಭರವಸೆಯ ಮಾತುಗಳು ಸುಳ್ಳಾಯಿತೆ? ನೀನೇ ಇಲ್ಲದೇ ಈ ಬದುಕಿನ ಚಕ್ರವೇ ಮುರಿದು ಬಿದ್ದಂತಾಗಿದೆ. ನಿನ್ನೊಂದಿಗೆ ಇರುವ ಪ್ರತಿಯೊಂದು ಕ್ಷಣವೂ ಜೀವನದ ಆಸೆಯನ್ನು ಹೆಚ್ಚಿಸುತ್ತಿತ್ತು. ನಾಳೆಯ ಬರುವಿಕೆಗಾಗಿ ಆಸೆಗಣ್ಣೆನಿಂದ ಹಾತೊರೆಯುತ್ತಿದೆ ನನ್ನ ಮನ. ಆದರೆ ಈಗ ನಾಳೆಯೆಂಬುದು ಬರೀ ಕತ್ತಲು ತುಂಬಿದ ಕಲ್ಲು ಮುಳ್ಳಿನ ದಾರಿಯಾಗಿದೆ.
ನಿನ್ನ ಎದೆಯ ಮೇಲೆ ಕಣ್ಣುಮುಚ್ಚಿ ಮಗುವಂತೆ ಮಲಗಿದಾಗ ನಿನ್ನ ಆಸರೆಯ ಅಪ್ಪುಗೆಯಾ ನಾ ಹೇಗೆ ಮರೆಯಲಿ. ನಾ ನನ್ನ ಮರೆಯುವಷ್ಟು ನೀ ನನ್ನ ಪ್ರೀತಿಸಿ ನಡುನೀರಿನಲ್ಲಿ ನನ್ನ ಮರೆತು ಬಿಟ್ಟು ನಿನ್ನ ದಾರಿಯಾ ನೀ ಕಂಡು ಕೊಂಡೆಯಾ? ನಾ ಆ ನೀರಿನಾ ಸುಳಿಯಲ್ಲಿ ಸಿಕ್ಕಿ ಪ್ರಾಣ ಹೋಗಲಿ ಎಂದು ಕಾಯುತ್ತಿರುವೆಯಾ?
ನಿನ್ನ ಧ್ವನಿ ಕೇಳದೇ, ನಿನ್ನ ನಗು ನೋಡದೇ ಈ ಮನ ಕೊರಗುತ್ತಿದೆ. ನೀನಿಲ್ಲದೇ ನಾ ಬೇರು ಮುರಿದ ಮರದ ಹಾಗೇ ನನ್ನ ಜೀವ ನರಳಿದೆ. ನನ್ನ ಮಡಿಲಿನಲ್ಲಿ ಸವಿಗನಸನು ಹಾಸಿದೆ ಬಾರೋ ನನ್ನ ಗೆಳೆಯನೆ ನಿನಗಾಗಿ ಕಾದಿರುವೆ. ಸಾವು ಬಂದರೂ ಮುಂದಿನ ಜನ್ಮದಲ್ಲಿಯೂ ನೀನೇ ಸಿಗುವಂತೆ ನಾ ಉಯಿಲು ಬರೆಯುವೆ.



Click it and Unblock the Notifications