Latest Updates
-
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ!
ಒಡೆದದ್ದು ಮೂತಿ ಮಾತ್ರವಲ್ಲ ಪ್ರೀತಿ, ಬದುಕು ಕೂಡ!

ನನಗೇ ಏಕೆ ಹೀಗಾಯಿತು? ಯಾರಿಗೆ ನಾನು ಏನು ಅನ್ಯಾಯ ಮಾಡಿದೆ? ಎಂದು ಯೋಚಿಸಿ.. ಯೋಚಿಸಿ... ಮನಸ್ಸು ಮರಗಟ್ಟಿ ಹೋಗಿದೆ... ಎಂದಾದರೂ ಸಿಕ್ಕರೆ ನಿನ್ನ ಕೇಳಬೇಕು ಎಂದು ಆಕಾಶದೆಡೆಗೆ ನೋಡುತ್ತೇನೆ... ಉತ್ತರಕ್ಕೆ, ಸಾಂತ್ವನಕ್ಕೆ ಆಕಾಶದಲ್ಲಿ ಅಮ್ಮನನ್ನು ಹುಡುಕುತ್ತೇನೆ.
ದುರಂತ ಅಂದರೆ ನೋಡು, ಈಗ ನನಗೂ ಮದುವೆಯಾಗಿ, ಇಬ್ಬರು ಮಕ್ಕಳು. ಪ್ರಪಂಚದ ಕಣ್ಣಿಗೆ ನಾ ಸುಖಿ ಕುಟುಂಬದ ಯಜಮಾನ. ಬೆಂಗಳೂರಿನಲ್ಲಿ ಒಳ್ಳೆ ಕೆಲಸ, ಮನೆ, ಕಾರು, ಆಳುಕಾಳು ಉಳ್ಳ ಶ್ರೀಮಂತ, ಅದೃಷ್ಟವಂತ. ಆದರೂ ನಿನ್ನ ಕಳೆದು ಕೊಂಡದ್ದು ನೆನಪಾದಾಗೆಲ್ಲ ನಾನು ಅನುಭವಿಸುವ, ನನ್ನ ಮನದಲ್ಲಿ ಹುಟ್ಟುವ ದಟ್ಟದಾರಿದ್ರ್ಯ ನನಗೊಬ್ಬನಿಗೆ ಗೊತ್ತು.
ದಿನವೂ ನಾನು ಪ್ರೀತಿಸುವ ಜನರಿಗೋಸ್ಕರ ದೇವರಲ್ಲಿ ಬೇಡಿಕೊಳ್ಳುವುದಿಷ್ಟೇ, ನಿನ್ನಂತಹ ಹೆಣ್ಣು ಪ್ರತಿಯೊಬ್ಬರಿಗೂ ಬದುಕಲ್ಲಿ ಯಾವ ರೂಪದಲ್ಲಾದರೂ ಸಿಗಲಿ... ಅಮ್ಮ, ಅಕ್ಕ, ತಂಗಿ, ಗೆಳತಿ, ಹೆಂಡತಿ, ಪ್ರೇಯಸಿ, ಟೀಚರ್ ಯಾವುದೇ ರೂಪದಲ್ಲಿ ಸಿಕ್ಕರೂ ಅವರ ಬದುಕು ಬಂಗಾರವಾಗುವುದರಲ್ಲಿ ಸಂದೇಹವೇ ಇಲ್ಲ. ನನಗಂತೂ ನೀನೆ ಮತ್ತು ನಿನ್ನ ನೆನಪೇ ಎಲ್ಲಾ.
ಪ್ರತಿ ವರುಷ ಪ್ರೇಮಿಗಳ ದಿನದಂದು ನಿನ್ನ ಪ್ರೀತಿಸಿದ ನನ್ನೊಳಗಿನ ಮುಗ್ಧ ಪ್ರೇಮಿ ಎದ್ದು ಕೂಡುತ್ತಾನೆ, ನಾನು ಪ್ರತಿ ವರುಷ ಅವನ ಕತ್ತುಹಿಡಿದು ಅದುಮಿ, ಹೂತಿಟ್ಟು ನಿಟ್ಟುಸಿರು ಬಿಡುತ್ತೇನೆ. ಆದರೂ ಹುಚ್ಚುಖೋಡಿ ಮನಸು ಇನ್ನೂ ಆಸೆ ಬಿಟ್ಟಿಲ್ಲ... ನನ್ನನು ಸಮಾಧಾನಿಸುವಂತೆ ಡೆಕ್ಕಲ್ಲಿ ನಿನ್ನದೇ ಗಜಲ್ ತೇಲಿ ಬರುತಿದೆ... ಹುಡುಕಿದರೆ, ಧ್ಯಾನಿಸಿದರೆ ದೇವರೇ ಸೀಗುತ್ತಾನಂತೆ... ಮತ್ತೊಮ್ಮೆ ಬದುಕಿನಲ್ಲಿ ನೀನು ಸಿಗಲಾರೆಯಾ?
ಎರಡು ಹನಿ ಕಣ್ಣೀರು, ಬಿಕ್ಕಿನೊಂದಿಗೆ,
ನಾನು
(ಅನುಲೇಖ: ಕ್ಷಮಿಸು ಗೌರಿ! ನಿನ್ನ ಆಜ್ಞೆ ಮೀರಿ, ನಿನ್ನ ನೆನಪಾಗಿ ತಡೆಯದೆ ಕಣ್ಣು, ಕಣ್ಣೀರು ಸುರಿಸುತ್ತಿದೆ, ಅದಕ್ಕೆ ನಾನಂತೂ ಹೊಣೆಯೆಲ್ಲ.)



Click it and Unblock the Notifications