Latest Updates
-
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ!
ಎರಡು ಹನಿ ಕಣ್ಣೀರು, ಬಿಕ್ಕಿನೊಂದಿಗೆ, ನಾನು

ತಮ್ಮ ಪ್ರೀತಿಯನ್ನು ಬದುಕಿನಲ್ಲಿ ಮೊದಲಸಲ ಕಂಡಾಕ್ಷಣ ಯಾರ್ಯಾರಿಗೋ ಏನೇನೋ ಅನಿಸಬಹುದು ಮತ್ತು ಅವರ ಮನದಲ್ಲಿ ಏನೇನೋ ಆಸೆ ಹುಟ್ಟಬಹುದು. ಆದರೆ ನನ್ನಲ್ಲಿ, ನನ್ನ ಬದುಕಲ್ಲಿ ಹುಟ್ಟಿದ್ದು ಅಪ್ಪಟ ಹದಿನಾರಾಣೆ ಶಿಸ್ತು ಎಂದರೆ ನೀನು ಅಚ್ಚರಿಯಾದರು ನಂಬಲೇಬೇಕು. ನಿಜ, ಅಸ್ತವ್ಯಸ್ತವಾಗಿದ್ದ ನನ್ನ ಬ್ರಹ್ಮಚಾರಿ ಜೀವನದಲ್ಲಿ ಭಯಂಕರ ಶಿಸ್ತು, ಶ್ರದ್ಧೆ ಬಂದುಬಿಡ್ತು. ಮಾಡುವ ಎಲ್ಲಾ ಕೆಲಸಗಳಲ್ಲೂ ಕಂಡು ಕೇಳರಿಯದ ಮಟ್ಟಸ್ತನ ಬಂದು ಬಿಡ್ತು ನೋಡು! ದಿನವೂ ಸ್ನಾನ, ಹಾಗು ಹೀಗು ಇದ್ದ ಬಟ್ಟೆಗಳಿಗೆ ಇಸ್ತ್ರಿ, ತಲೆಗೆ ಎಣ್ಣೆ, ತೀಡಿ ತೀಡಿ ಬಾಚಿದ ಕ್ರಾಪು.... ಅದೆಲ್ಲಾ ಬಿಡು ನನ್ನ ಹಳೆ ಹರಿದ ಚಡ್ಡಿ, ಬನಿಯನ್ನು ಹಿಂಡಿ ಒಣಗ್ಹಾಕುವಾಗಲು ನನ್ನಲ್ಲೇ ನಾನು ಪ್ರೀತಿಯಿಂದ ಮುಗುಳು ನಗುತ್ತಿದ್ದೆ! ನನ್ನ ಅಮ್ಮ ಬದುಕಿದ್ದರೆ ನನ್ನ ಶಿಸ್ತು, ಶ್ರದ್ದೆ ನೋಡಿ ಎಷ್ಟು ಸಂತೋಷ ಪಡುತಿದ್ದಳೋ... ಒಟ್ಟಿನಲ್ಲಿ ಬರಗೂರು ರಾಮಚಂದ್ರಪ್ಪನವರ ಗದ್ಯದಂತಿದ್ದ ನನ್ನ ಬದುಕು ಕೆ.ಎಸ್. ನರಸಿಂಹ ಸ್ವಾಮಿಯವರ ಪದ್ಯದಂತಾಯಿತು ನೋಡು...
ನಿನಗಿಷ್ಟವೆಂದು ತಿಳಿದ ತಕ್ಷಣ ಪದ್ಯ ಓದುವುದು ಕಲಿತೆ ಮತ್ತು ಗಜಲ್ ಕೇಳುವುದು ರೂಢಿಸಿಕೊಂಡೆ. ಒಂದು ಸಲ ನಿನ್ನ ಮುಂದೆ ಪೆದ್ದುಪೆದ್ದಾಗಿ ಗಜಲ್ ಹಾಡಲು ಹೋಗಿ ಹಾಸ್ಯಾಸ್ಪದವಾದೆ, ಆಗ ನೀನು ಮುಕ್ತವಾಗಿ ನಕ್ಕು ಎಲ್ಲವನ್ನೂ ಮರೆಸಿದೆ. ಇಂದು ತಕ್ಕ ಮಟ್ಟಿಗೆ ಗಜಲ್ ಹಾಡಲು ಕಲಿತಿದ್ದರೆ ಮತ್ತು ಉರ್ದು ಭಾಷೆಯ ಸೂಕ್ಷ್ಮಗಳನ್ನೂ ಕಲಿತಿದ್ದರೆ ಅದಕ್ಕೆ ನೀನೆ ಕಾರಣ. ಆದರೆ ನಿನ್ನ ಮುಂದೆ ನಾನೇನಿಲ್ಲ ಬಿಡು. ನೀನು ರೇಷ್ಮೆ ಸೀರೆಯುಟ್ಟು ಸ್ಟೇಜ್ ಮೇಲೆ ಕುಳಿತು ಗಜಲ್ ಹಾಡುತ್ತಿದ್ದರೆ, ಆ ಕ್ಷಣಕ್ಕೆ ಅರ್ಧ ರಾಜ್ಯ ಬರೆದುಕೊಟ್ಟ ರಸಿಕರೆಷ್ಟೋ... ನಾನಂತೂ ನನ್ನ ಪೂರ್ತಿ ರಾಜ್ಯ ಮತ್ತು ಬದುಕುನ್ನೇ ಬರೆದು ಕೊಟ್ಟೆ.
ಎಷ್ಟೋ ಸಲ ನಿನ್ನ ಗುಣಕ್ಕೆ, ಸೌಂದರ್ಯಕ್ಕೆ, ಕಲೆಗೆ ಸರಿಸಾಟಿಯಾಗಿ... ಉಹುಂ ಅದೆಲ್ಲಾ ಹೋಗಲಿ ನಿನ್ನ ಜೊತೆ ನಿಲ್ಲುವುದಕ್ಕೂ ಯೋಗ್ಯತೆ ಇಲ್ಲದ ನಾನು ಅನೇಕ ಸಲ ಕೀಳರಿಮೆಯಿಂದ ಬಳಲುತಿದ್ದೆ. ಆದರೆ ನಿನ್ನ ಒಂದು ಮುಗುಳ್ನಗೆ, ತೋರಿಸುತಿದ್ದ ವಿಶ್ವಾಸ ನನ್ನಲ್ಲಿ ಆತ್ಮವಿಶ್ವಾಸದ ಜೋಗದ ಜಲಪಾತವನ್ನೇ ಹರಿಸಿತ್ತು. ಇಂತದ್ದೇ ಒಂದು ಅಶಕ್ತ ಗಳಿಗೆಯಲ್ಲಿ ಮೈ ಮರೆತು ನಿನ್ನ ಆರಾಧಿಸುತ್ತ, ಪ್ರೀತಿಯಲ್ಲಿ ಮುಳುಗಿಬಿಟ್ಟೆ. ನಿನ್ನ ದೊಡ್ಡ ಭಾವ ಪೂರ್ಣ ಕಣ್ಣುಗಳಲ್ಲಿ ನನ್ನನ್ನೇ ಹುಡುಕುತ್ತಿದ್ದೆ.
ನನ್ನ ಬದುಕಿನ ಅತ್ಯಂತ ಸುಖಿ ದಿನಗಳವು. ಹಗಲಾದರೆ ನಿನ್ನ ನೋಡುವ ತವಕ, ರಾತ್ರಿಯಾದರೆ, ಕನಸಲ್ಲಿ ಆಡದೆ ಉಳಿದ ಮಾತುಗಳ ಮರಮರ. ಅಪ್ಪಟ ನಾಸ್ತಿಕನಾದ ನಾನು ಆ ಕ್ಷಣಕ್ಕೆ ದೇವರನ್ನು ನಂಬಿಬಿಟ್ಟೆ! ಆ ದೇವರು ಎಷ್ಟೊಂದು ದಯಾಮಯಿ! ನನ್ನಂಥ ಒರಟು ರುದ್ರನನ್ನು ಹುಟ್ಟಿಸಿ ನಿನ್ನಂಥ ಲಕ್ಷಣವಾದ ಗೌರಿಯನ್ನು ಸೃಷ್ಟಿಸಿದ!



Click it and Unblock the Notifications
