Latest Updates
-
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ! -
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್!
ನೋವನ್ನು ನುಂಗುವ ವಿದ್ಯೆ ಕಲಿಸಿದ ದೇವತೆಯೇ

ತುಂಬಾ ದಿನದಿಂದ ಕಾಪಾಡಿಕೊಂಡು ಬಂದ ಪ್ರೀತಿಯ ವಸ್ತುವೊಂದು ಕಳೆದು ಹೋದಾಗ... ತಾಯಿಯನ್ನು ಬಿಟ್ಟು ಶಾಲೆಗೆ ಹೋಗಲಾರದೇ ಅಳುವ ಪುಟ್ಟ ಕಂದನ ನೋಡಿದಾಗ... ಇಷ್ಟವಾದವರನ್ನು ಅಗಲಿ ದೂರವಾಗಲೇಬೇಕಾದ ಅನಿವಾರ್ಯತೆ ಬಂದಾಗ ಆಗುವ ವೇದನೆ ಅನುಭವಿಸಲಾಗದು ಕಣೇ ಹುಡುಗಿ. ತೀರ ಮುಗ್ಧ ಹುಡುಗಿ ಕಣೇ ನೀನು ಇದಾವುದರ ಪರಿವೇ ನಿನಗಿರದು.
ನಿನ್ನ ನೆರಳಾಗುವ ಬಯಕೆಯಲ್ಲಿ ನಿನ್ನ ಗೆಳೆಯನಾಗಿ ಸ್ನೇಹದ ನಂಬಿಕೆಯಿಂದ ವಂಚಿತನಾಗಿ ಒಬ್ಬಂಟಿಯಾದವನ ನೆರಳು ನಿನ್ನ ಪಾದ ಸೇರಿ ಹೋಯಿತಲ್ಲೆ ಪ್ರೀತಿಯ ಚಿಲುಮೆ. ನೀ ದೂರವಾಗುವ ಕೊನೆಯ ಸಮಯದವರೆಗೂ ಅಲೆಗಳ ಅಪ್ಪಳಿಸುವಿಕೆಯ ನಡುವೆ ಸಮುದ್ರ ನೀರಿನ ಮುಂದೆ ನಿಂತು ನಿನ್ನ ಹೆಸರು ಹೇಳಿ ಕೂಗಿ ಕರೆಯುತ್ತಿತ್ತು ನನ್ನ ಧ್ವನಿ. ಆ ನಿನ್ನ ಮಹತ್ವಾಕಾಂಕ್ಷೆಗಳ ವಿಚಾರ, ಮೌನದಲ್ಲೆ ಎದ್ದು ಕಾಣುವ ಮುಗ್ದತೆ, ಒಮ್ಮೊಮ್ಮೆ ಹಾಗೆ ಗಂಭೀರ, ಮತ್ತೊಮ್ಮೆ ಮುನಿಸು, ಒಂದಿಷ್ಟು ಕುಚೇಷ್ಟೆ, ಬೇಸರದಲ್ಲಿನ ಸಾಂತ್ವನ, ದುಃಖ ಮಿತಿ ಮೀರಿದರೆ ಕಣ್ಣಂಚಲ್ಲಿ ಕಣ್ಣೀರಿನ ಭೋರ್ಗರೆತ ಎಲ್ಲವು ನಿನ್ನೆಯಷ್ಟೆ ಕಳೆದು ಹೋದ ದಿನಗಳಂತೆ ಕಾಡುತ್ತಲಿತ್ತು. ಅಂದು ನನ್ನ ಸ್ನೇಹವನ್ನು ದಿಕ್ಕರಿಸಿದ ಆ ನಿನ್ನ ಗಟ್ಟಿ ನಿರ್ಧಾರ ಕಷ್ಟವಾದರೂ ಇಷ್ಟವಾಯಿತು ಕಣೇ..
ಬಹುಷಃ ನೆನಪುಗಳೇ ಹೀಗೆ ಎಂದು ಅನಿಸುತ್ತದೆ. ಬೇಡ ಬೇಡವೆಂದರೂ ಮತ್ತೆ ಮತ್ತೆ ಮರುಕಳಿಸುತ್ತದೆ. ಅತ್ತ ಅನುಭವಿಸಲೂ ಆಗದೇ ಮರೆಯಲು ಆಗದೆ ಪೇಚಿಗೆ ಸಿಲುಕಿಸುವಂತಹ ವೇದನೆಯನ್ನು ತಂದೊಡ್ಡುತ್ತವೆ. ನನ್ನ ಬದುಕಿಗೆ ನೀ ಬಂದ ಘಳಿಗೆಯಿದೆಯಲ್ಲ. ನನಗರಿವೇ ಇರಲಿಲ್ಲ ನೀ ಹೇಗೆ ಬಂದಿಯೆಂದು. ಅಂದು ನಾನೇಕೊ ಕೊಂಚ ಬೇಸರದಲ್ಲಿದ್ದೆ. ಏಕಾಂತವನ್ನು ಬಯಸಿದ್ದೆ. ನಿನ್ನ ಮೊದಲ ದರ್ಶನವಾದದ್ದು ಆವಾಗಲೇ. ಕ್ಷಣಮಾತ್ರದಲ್ಲಿಯೇ ಬೇಸರವೆಲ್ಲ ಮಾಯವಾಗಿ ಹೊಸ ಹುರುಪನ್ನು ಹುಟ್ಟುಹಾಕಿತ್ತು ನಿನ್ನ ಮೊದಲ ನೋಟ. ಅದಕ್ಕೇ ಅಂತಾರಾ ಲವ್ ಅಟ್ ಫಸ್ಟ್ ಸೈಟ್? ಒಂಟಿಯಾದಾಗ ಸಿಕ್ಕು ಒಂಟಿತನವ ನೀಗಿ ಮತ್ತೆ ಒಂಟಿಯನ್ನಾಗಿಸಿ ಸದ್ದಿಲ್ಲದೇ ಎದ್ದು ಹೋಗುತ್ತಿರುವ ನಿನಗೆ ಹೇಗೆತಾನೆ ಅರ್ಥವಾಗಬಲ್ಲದು ನನ್ನ ಕಾಡುತ್ತಿರುವ ಒಂಟಿಬಾವ..?
ನನ್ನ ಜೀವನದ ಪಯಣದಲ್ಲಿ ಯಾವುದೋ ಒಂದು ಹಂತದಲ್ಲಿ ಪರಿಚಯವಾಗಿ, ಸ್ನೇಹದ ಹೂವಾಗಿ ಬಾಡಿಹೋದ ಬಳ್ಳಿ ನೀನಾದೆ. ಬಾಡಿಹೋದ ಬಳ್ಳಿಯ ಮುಳ್ಳೊಂದು ಮನಸಿನಲ್ಲಿ ನಾಟಿ ಚುಚ್ಚುತ್ತಲಿದೆ ಕಣೇ. ಮುಳ್ಳಿನ ಮೇಲೆ ಅರಳಿದ ಹೂಗಳ ಸೌಂದರ್ಯ.. ಆ ಸುವಾಸನೆ.. ನೀನು ಉಳಿಸಿಹೋದ ನೆನಪುಗಳು, ಮನ ಕೆರಳಿಸುವ ಭಾವನೆಗಳು ಬದುಕಲು ಬಿಡಲಾರೆಯೆನ್ನುತ್ತಲಿವೆ. ಇಂದು ಭೌತಿಕವಾಗಿ ನೀ ನನ್ನೊಂದಿಗಿಲ್ಲದಿರಬಹುದು. ಆದರೆ ಮಾನಸಿಕವಾಗಿ ನನ್ನ ಹೃದಯದಲ್ಲಿ ಬೆಚ್ಚಗಿನ ನೆನಪುಗಳನ್ನು ಇರಿಸಿ ಅದರೊಂದಿಗೆ ಕಚಗುಳಿ ಇಡುತ್ತಿರುವೆಯಲ್ಲೆ ನಿನಗರಿವಿಲ್ಲದೆಯೇ. ನಿನ್ನ ಹೆಸರು ಚಿರಪರಿಚಿತವಾದರೂ ನೋವನ್ನು ನುಂಗುವ ವಿದ್ಯೆ ಕಲಿಸಿದ ದೇವತೆಯೇ ನಿನಗೆ ಎನೆಂದು ಕರೆಯಲಿ. ಮನದ ಕರೆ ನಿನಗೆ ಕೇಳುವದೆಂದು?



Click it and Unblock the Notifications