Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಭಾವನೆಗಳು ಸತ್ತರೆ ವಿಚ್ಛೇದನ ಒಳ್ಳೆಯದು!

ಪರಸ್ಪರ ಕೂಡಿ ಜೀವನ ಮಾಡಲು ಸಾಧ್ಯವಾಗದದಿದ್ದಾಗ ವಿಚ್ಛೇದನ ತೆಗೆದುಕೊಳ್ಳುವುದೇ ಒಳ್ಳೆಯದು! ಆದರೆ ಈ ರೀತಿಯ ನಿರ್ಧಾರ ತೆಗೆದುಕೊಳ್ಳುವುದು ಎಲ್ಲರಿಂದ ಸಾಧ್ಯವಾಗುವುದು ಇಲ್ಲ. ಸಮಾಜದ ಕಟ್ಟುಪಾಡುಗಳಿಗೆ ಎದುರಿ ಅನೇಕರು ವಿಚ್ಛೇದನ ತೆಗೆದುಕೊಳ್ಳದೆ ನರಕದ ಜೀವನವನ್ನು ಅನುಭವಿಸುತ್ತಾರೆ. ಕೊನೆಗೆ ಆತ್ಮಹತ್ಯೆಯಂತಹ ಮುಠ್ಠಾಳ ತೀರ್ಮಾನ ಕೈಗೊಳ್ಳುತ್ತಾರೆ. ನರಕದ ಜೀವನ ಸಾಗಿಸುವುದು, ಆತ್ಮಹತ್ಯೆ ಮಾಡಿಕೊಳ್ಳುವುದಕ್ಕಿಂತ ವಿಚ್ಛೇದನ ತೆಗೆದುಕೊಳ್ಳುವುದು ಒಳ್ಳೆಯದು! ಭಾವನೆಗಳು ಸತ್ತ ಮೇಲೆ ಜೊತೆಗೆ ಬಾಳಿ ಪ್ರಯೋಜವೇನು?
ಬಾಳಸಂಗಾತಿಗೆ ನಮ್ಮೊಂದಿಗೆ ಬಾಳಲು ಇಷ್ಟವಿಲ್ಲದಿದ್ದರೆ ಅದನ್ನು ಅವರ ನಡುವಳಿಕೆಗಳಿಂದ ತಿಳಿದುಕೊಳ್ಳಬಹುದು. ದೈಹಿಕ ಹಿಂಸೆ ನೀಡುವುದು, ಸಣ್ಣ ಪುಟ್ಟ ವಿಷಯಕ್ಕೂ ವಾದ ಮಾಡುವುದು, ನಿಮ್ಮ ಭಾವನೆಗಳಿಗೆ ಬೆಲೆಯೆ ಕೊಡದಿರುವುದು, ಸಣ್ಣ-ಪುಟ್ಟ ವಿಷಯವನ್ನು ದೊಡ್ಡದು ಮಾಡಿ ಜಗಳವಾಡುವುದು ಅಂತಹವರ ಜೊತೆ ಬಾಳಿಯೂ ಪ್ರಯೋಜನವಿಲ್ಲ, ಯಾವಾಗ ಭಾವನೆಗಳು ಸಾಯುತ್ತವೆಯೊ ಆಗ ಸಂಬಂಧಗಳನ್ನು ಕೊನೆಗೊಳಿಸುವುದು ಒಳ್ಳೆಯದು.
ಏಕೆಂದರೆ ಜೊತೆಗೆ ಇದ್ದು ಪ್ರತಿಕ್ಷಣ ನರಕ ಅನುಭವಿಸುವ ಬದಲು ದೂರವಾದರೆ ಸ್ವಲ್ಪವಾದರೂ ಮಾನಸಿಕ ನೆಮ್ಮದಿ ದೊರೆಯುತ್ತದೆ.
ಈಗ ಸಾಕಷ್ಟು ಸಂಬಂಧಗಳು ಕೊನೆಗೊಳ್ಳುತ್ತಿರುವುದು ಅನೈತಿಕ ಸಂಬಂಧಗಳಿಂದ. ನಿಮ್ಮ ಜೀವನ ಸಂಗಾತಿ ಅನೈತಿಕ ಸಂಬಂಧ ಹೊಂದಿದ್ದರೆ ಯೋಚಿಸಲು ಹೋಗಲೇ ಬಾರದು. ಆ ಕ್ಷಣದಲ್ಲಿಯೆ ಅವರಿಂದ ದೂರವಾಗಿ ಬಿಡಬೇಕು. ಆದರೆ ಅನೇಕ ಹೆಣ್ಣು ಮಕ್ಕಳು ಗಂಡನಿಗೆ ಮತ್ತೊಂದು ಸಂಬಂಧಿವಿದ್ದರೂ ಕೂಡ ಸಹಿಸಿಕೊಂಡು ಇರುತ್ತಾರೆ. ಆದರೆ ಒಂದು ವಿಷಯ ಯೋಚಿಸಿ ನಿಮ್ಮ ಬಗ್ಗೆ ಕಿಂಚಿತ್ತು ಪ್ರೀತಿ ಅಥವಾ ನಿಮ್ಮ ಭಾವನೆಗಳಿಗೆ ಬೆಲೆಯಿದ್ದಿದ್ದರೆ ಅವನು ಬೇರೆ ಸಂಬಂಧ ನೋಡುತ್ತಿರಲಿಲ್ಲ. ನಿಮ್ಮ ವ್ಯಕ್ತಿತ್ವಕ್ಕೆ ಬೆಲೆಯಿಲ್ಲದ ಜಾಗದಲ್ಲಿ ನೀವು ಇರಬೇಕೆ?
ಸಣ್ಣ-ಪುಟ್ಟ ಕಾರಣಗಳಿಗೆ ಡಿವೋರ್ಸ್ ತೆಗೆದುಕೊಂಡರೆ ಬದುಕನ್ನು ನಮ್ಮ ಕೈಯಿಂದ ಒಡೆದುಕೊಂಡಂತೆ. ಜೀವನದಲ್ಲಿ ಹೊಂದಾಣಿಕೆ ಇರಬೇಕು. ಯಾವಾಗ ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ತಲುಪಿದಾಗ ಹಿಂಸೆ ಅನುಭವಿಸುವುದರಲ್ಲಿ ಯಾವುದೇ ಅರ್ಥವಿಲ್ಲ.



Click it and Unblock the Notifications











