Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಭಾವನೆಗಳು ಸತ್ತರೆ ವಿಚ್ಛೇದನ ಒಳ್ಳೆಯದು!

ಪರಸ್ಪರ ಕೂಡಿ ಜೀವನ ಮಾಡಲು ಸಾಧ್ಯವಾಗದದಿದ್ದಾಗ ವಿಚ್ಛೇದನ ತೆಗೆದುಕೊಳ್ಳುವುದೇ ಒಳ್ಳೆಯದು! ಆದರೆ ಈ ರೀತಿಯ ನಿರ್ಧಾರ ತೆಗೆದುಕೊಳ್ಳುವುದು ಎಲ್ಲರಿಂದ ಸಾಧ್ಯವಾಗುವುದು ಇಲ್ಲ. ಸಮಾಜದ ಕಟ್ಟುಪಾಡುಗಳಿಗೆ ಎದುರಿ ಅನೇಕರು ವಿಚ್ಛೇದನ ತೆಗೆದುಕೊಳ್ಳದೆ ನರಕದ ಜೀವನವನ್ನು ಅನುಭವಿಸುತ್ತಾರೆ. ಕೊನೆಗೆ ಆತ್ಮಹತ್ಯೆಯಂತಹ ಮುಠ್ಠಾಳ ತೀರ್ಮಾನ ಕೈಗೊಳ್ಳುತ್ತಾರೆ. ನರಕದ ಜೀವನ ಸಾಗಿಸುವುದು, ಆತ್ಮಹತ್ಯೆ ಮಾಡಿಕೊಳ್ಳುವುದಕ್ಕಿಂತ ವಿಚ್ಛೇದನ ತೆಗೆದುಕೊಳ್ಳುವುದು ಒಳ್ಳೆಯದು! ಭಾವನೆಗಳು ಸತ್ತ ಮೇಲೆ ಜೊತೆಗೆ ಬಾಳಿ ಪ್ರಯೋಜವೇನು?
ಬಾಳಸಂಗಾತಿಗೆ ನಮ್ಮೊಂದಿಗೆ ಬಾಳಲು ಇಷ್ಟವಿಲ್ಲದಿದ್ದರೆ ಅದನ್ನು ಅವರ ನಡುವಳಿಕೆಗಳಿಂದ ತಿಳಿದುಕೊಳ್ಳಬಹುದು. ದೈಹಿಕ ಹಿಂಸೆ ನೀಡುವುದು, ಸಣ್ಣ ಪುಟ್ಟ ವಿಷಯಕ್ಕೂ ವಾದ ಮಾಡುವುದು, ನಿಮ್ಮ ಭಾವನೆಗಳಿಗೆ ಬೆಲೆಯೆ ಕೊಡದಿರುವುದು, ಸಣ್ಣ-ಪುಟ್ಟ ವಿಷಯವನ್ನು ದೊಡ್ಡದು ಮಾಡಿ ಜಗಳವಾಡುವುದು ಅಂತಹವರ ಜೊತೆ ಬಾಳಿಯೂ ಪ್ರಯೋಜನವಿಲ್ಲ, ಯಾವಾಗ ಭಾವನೆಗಳು ಸಾಯುತ್ತವೆಯೊ ಆಗ ಸಂಬಂಧಗಳನ್ನು ಕೊನೆಗೊಳಿಸುವುದು ಒಳ್ಳೆಯದು.
ಏಕೆಂದರೆ ಜೊತೆಗೆ ಇದ್ದು ಪ್ರತಿಕ್ಷಣ ನರಕ ಅನುಭವಿಸುವ ಬದಲು ದೂರವಾದರೆ ಸ್ವಲ್ಪವಾದರೂ ಮಾನಸಿಕ ನೆಮ್ಮದಿ ದೊರೆಯುತ್ತದೆ.
ಈಗ ಸಾಕಷ್ಟು ಸಂಬಂಧಗಳು ಕೊನೆಗೊಳ್ಳುತ್ತಿರುವುದು ಅನೈತಿಕ ಸಂಬಂಧಗಳಿಂದ. ನಿಮ್ಮ ಜೀವನ ಸಂಗಾತಿ ಅನೈತಿಕ ಸಂಬಂಧ ಹೊಂದಿದ್ದರೆ ಯೋಚಿಸಲು ಹೋಗಲೇ ಬಾರದು. ಆ ಕ್ಷಣದಲ್ಲಿಯೆ ಅವರಿಂದ ದೂರವಾಗಿ ಬಿಡಬೇಕು. ಆದರೆ ಅನೇಕ ಹೆಣ್ಣು ಮಕ್ಕಳು ಗಂಡನಿಗೆ ಮತ್ತೊಂದು ಸಂಬಂಧಿವಿದ್ದರೂ ಕೂಡ ಸಹಿಸಿಕೊಂಡು ಇರುತ್ತಾರೆ. ಆದರೆ ಒಂದು ವಿಷಯ ಯೋಚಿಸಿ ನಿಮ್ಮ ಬಗ್ಗೆ ಕಿಂಚಿತ್ತು ಪ್ರೀತಿ ಅಥವಾ ನಿಮ್ಮ ಭಾವನೆಗಳಿಗೆ ಬೆಲೆಯಿದ್ದಿದ್ದರೆ ಅವನು ಬೇರೆ ಸಂಬಂಧ ನೋಡುತ್ತಿರಲಿಲ್ಲ. ನಿಮ್ಮ ವ್ಯಕ್ತಿತ್ವಕ್ಕೆ ಬೆಲೆಯಿಲ್ಲದ ಜಾಗದಲ್ಲಿ ನೀವು ಇರಬೇಕೆ?
ಸಣ್ಣ-ಪುಟ್ಟ ಕಾರಣಗಳಿಗೆ ಡಿವೋರ್ಸ್ ತೆಗೆದುಕೊಂಡರೆ ಬದುಕನ್ನು ನಮ್ಮ ಕೈಯಿಂದ ಒಡೆದುಕೊಂಡಂತೆ. ಜೀವನದಲ್ಲಿ ಹೊಂದಾಣಿಕೆ ಇರಬೇಕು. ಯಾವಾಗ ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ತಲುಪಿದಾಗ ಹಿಂಸೆ ಅನುಭವಿಸುವುದರಲ್ಲಿ ಯಾವುದೇ ಅರ್ಥವಿಲ್ಲ.



Click it and Unblock the Notifications