Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಭಾವನೆಗಳು ಸತ್ತರೆ ವಿಚ್ಛೇದನ ಒಳ್ಳೆಯದು!

ಪರಸ್ಪರ ಕೂಡಿ ಜೀವನ ಮಾಡಲು ಸಾಧ್ಯವಾಗದದಿದ್ದಾಗ ವಿಚ್ಛೇದನ ತೆಗೆದುಕೊಳ್ಳುವುದೇ ಒಳ್ಳೆಯದು! ಆದರೆ ಈ ರೀತಿಯ ನಿರ್ಧಾರ ತೆಗೆದುಕೊಳ್ಳುವುದು ಎಲ್ಲರಿಂದ ಸಾಧ್ಯವಾಗುವುದು ಇಲ್ಲ. ಸಮಾಜದ ಕಟ್ಟುಪಾಡುಗಳಿಗೆ ಎದುರಿ ಅನೇಕರು ವಿಚ್ಛೇದನ ತೆಗೆದುಕೊಳ್ಳದೆ ನರಕದ ಜೀವನವನ್ನು ಅನುಭವಿಸುತ್ತಾರೆ. ಕೊನೆಗೆ ಆತ್ಮಹತ್ಯೆಯಂತಹ ಮುಠ್ಠಾಳ ತೀರ್ಮಾನ ಕೈಗೊಳ್ಳುತ್ತಾರೆ. ನರಕದ ಜೀವನ ಸಾಗಿಸುವುದು, ಆತ್ಮಹತ್ಯೆ ಮಾಡಿಕೊಳ್ಳುವುದಕ್ಕಿಂತ ವಿಚ್ಛೇದನ ತೆಗೆದುಕೊಳ್ಳುವುದು ಒಳ್ಳೆಯದು! ಭಾವನೆಗಳು ಸತ್ತ ಮೇಲೆ ಜೊತೆಗೆ ಬಾಳಿ ಪ್ರಯೋಜವೇನು?
ಬಾಳಸಂಗಾತಿಗೆ ನಮ್ಮೊಂದಿಗೆ ಬಾಳಲು ಇಷ್ಟವಿಲ್ಲದಿದ್ದರೆ ಅದನ್ನು ಅವರ ನಡುವಳಿಕೆಗಳಿಂದ ತಿಳಿದುಕೊಳ್ಳಬಹುದು. ದೈಹಿಕ ಹಿಂಸೆ ನೀಡುವುದು, ಸಣ್ಣ ಪುಟ್ಟ ವಿಷಯಕ್ಕೂ ವಾದ ಮಾಡುವುದು, ನಿಮ್ಮ ಭಾವನೆಗಳಿಗೆ ಬೆಲೆಯೆ ಕೊಡದಿರುವುದು, ಸಣ್ಣ-ಪುಟ್ಟ ವಿಷಯವನ್ನು ದೊಡ್ಡದು ಮಾಡಿ ಜಗಳವಾಡುವುದು ಅಂತಹವರ ಜೊತೆ ಬಾಳಿಯೂ ಪ್ರಯೋಜನವಿಲ್ಲ, ಯಾವಾಗ ಭಾವನೆಗಳು ಸಾಯುತ್ತವೆಯೊ ಆಗ ಸಂಬಂಧಗಳನ್ನು ಕೊನೆಗೊಳಿಸುವುದು ಒಳ್ಳೆಯದು.
ಏಕೆಂದರೆ ಜೊತೆಗೆ ಇದ್ದು ಪ್ರತಿಕ್ಷಣ ನರಕ ಅನುಭವಿಸುವ ಬದಲು ದೂರವಾದರೆ ಸ್ವಲ್ಪವಾದರೂ ಮಾನಸಿಕ ನೆಮ್ಮದಿ ದೊರೆಯುತ್ತದೆ.
ಈಗ ಸಾಕಷ್ಟು ಸಂಬಂಧಗಳು ಕೊನೆಗೊಳ್ಳುತ್ತಿರುವುದು ಅನೈತಿಕ ಸಂಬಂಧಗಳಿಂದ. ನಿಮ್ಮ ಜೀವನ ಸಂಗಾತಿ ಅನೈತಿಕ ಸಂಬಂಧ ಹೊಂದಿದ್ದರೆ ಯೋಚಿಸಲು ಹೋಗಲೇ ಬಾರದು. ಆ ಕ್ಷಣದಲ್ಲಿಯೆ ಅವರಿಂದ ದೂರವಾಗಿ ಬಿಡಬೇಕು. ಆದರೆ ಅನೇಕ ಹೆಣ್ಣು ಮಕ್ಕಳು ಗಂಡನಿಗೆ ಮತ್ತೊಂದು ಸಂಬಂಧಿವಿದ್ದರೂ ಕೂಡ ಸಹಿಸಿಕೊಂಡು ಇರುತ್ತಾರೆ. ಆದರೆ ಒಂದು ವಿಷಯ ಯೋಚಿಸಿ ನಿಮ್ಮ ಬಗ್ಗೆ ಕಿಂಚಿತ್ತು ಪ್ರೀತಿ ಅಥವಾ ನಿಮ್ಮ ಭಾವನೆಗಳಿಗೆ ಬೆಲೆಯಿದ್ದಿದ್ದರೆ ಅವನು ಬೇರೆ ಸಂಬಂಧ ನೋಡುತ್ತಿರಲಿಲ್ಲ. ನಿಮ್ಮ ವ್ಯಕ್ತಿತ್ವಕ್ಕೆ ಬೆಲೆಯಿಲ್ಲದ ಜಾಗದಲ್ಲಿ ನೀವು ಇರಬೇಕೆ?
ಸಣ್ಣ-ಪುಟ್ಟ ಕಾರಣಗಳಿಗೆ ಡಿವೋರ್ಸ್ ತೆಗೆದುಕೊಂಡರೆ ಬದುಕನ್ನು ನಮ್ಮ ಕೈಯಿಂದ ಒಡೆದುಕೊಂಡಂತೆ. ಜೀವನದಲ್ಲಿ ಹೊಂದಾಣಿಕೆ ಇರಬೇಕು. ಯಾವಾಗ ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ತಲುಪಿದಾಗ ಹಿಂಸೆ ಅನುಭವಿಸುವುದರಲ್ಲಿ ಯಾವುದೇ ಅರ್ಥವಿಲ್ಲ.



Click it and Unblock the Notifications
