Latest Updates
-
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್!
ಭಾವನೆಗಳು ಸತ್ತರೆ ವಿಚ್ಛೇದನ ಒಳ್ಳೆಯದು!

ಪರಸ್ಪರ ಕೂಡಿ ಜೀವನ ಮಾಡಲು ಸಾಧ್ಯವಾಗದದಿದ್ದಾಗ ವಿಚ್ಛೇದನ ತೆಗೆದುಕೊಳ್ಳುವುದೇ ಒಳ್ಳೆಯದು! ಆದರೆ ಈ ರೀತಿಯ ನಿರ್ಧಾರ ತೆಗೆದುಕೊಳ್ಳುವುದು ಎಲ್ಲರಿಂದ ಸಾಧ್ಯವಾಗುವುದು ಇಲ್ಲ. ಸಮಾಜದ ಕಟ್ಟುಪಾಡುಗಳಿಗೆ ಎದುರಿ ಅನೇಕರು ವಿಚ್ಛೇದನ ತೆಗೆದುಕೊಳ್ಳದೆ ನರಕದ ಜೀವನವನ್ನು ಅನುಭವಿಸುತ್ತಾರೆ. ಕೊನೆಗೆ ಆತ್ಮಹತ್ಯೆಯಂತಹ ಮುಠ್ಠಾಳ ತೀರ್ಮಾನ ಕೈಗೊಳ್ಳುತ್ತಾರೆ. ನರಕದ ಜೀವನ ಸಾಗಿಸುವುದು, ಆತ್ಮಹತ್ಯೆ ಮಾಡಿಕೊಳ್ಳುವುದಕ್ಕಿಂತ ವಿಚ್ಛೇದನ ತೆಗೆದುಕೊಳ್ಳುವುದು ಒಳ್ಳೆಯದು! ಭಾವನೆಗಳು ಸತ್ತ ಮೇಲೆ ಜೊತೆಗೆ ಬಾಳಿ ಪ್ರಯೋಜವೇನು?
ಬಾಳಸಂಗಾತಿಗೆ ನಮ್ಮೊಂದಿಗೆ ಬಾಳಲು ಇಷ್ಟವಿಲ್ಲದಿದ್ದರೆ ಅದನ್ನು ಅವರ ನಡುವಳಿಕೆಗಳಿಂದ ತಿಳಿದುಕೊಳ್ಳಬಹುದು. ದೈಹಿಕ ಹಿಂಸೆ ನೀಡುವುದು, ಸಣ್ಣ ಪುಟ್ಟ ವಿಷಯಕ್ಕೂ ವಾದ ಮಾಡುವುದು, ನಿಮ್ಮ ಭಾವನೆಗಳಿಗೆ ಬೆಲೆಯೆ ಕೊಡದಿರುವುದು, ಸಣ್ಣ-ಪುಟ್ಟ ವಿಷಯವನ್ನು ದೊಡ್ಡದು ಮಾಡಿ ಜಗಳವಾಡುವುದು ಅಂತಹವರ ಜೊತೆ ಬಾಳಿಯೂ ಪ್ರಯೋಜನವಿಲ್ಲ, ಯಾವಾಗ ಭಾವನೆಗಳು ಸಾಯುತ್ತವೆಯೊ ಆಗ ಸಂಬಂಧಗಳನ್ನು ಕೊನೆಗೊಳಿಸುವುದು ಒಳ್ಳೆಯದು.
ಏಕೆಂದರೆ ಜೊತೆಗೆ ಇದ್ದು ಪ್ರತಿಕ್ಷಣ ನರಕ ಅನುಭವಿಸುವ ಬದಲು ದೂರವಾದರೆ ಸ್ವಲ್ಪವಾದರೂ ಮಾನಸಿಕ ನೆಮ್ಮದಿ ದೊರೆಯುತ್ತದೆ.
ಈಗ ಸಾಕಷ್ಟು ಸಂಬಂಧಗಳು ಕೊನೆಗೊಳ್ಳುತ್ತಿರುವುದು ಅನೈತಿಕ ಸಂಬಂಧಗಳಿಂದ. ನಿಮ್ಮ ಜೀವನ ಸಂಗಾತಿ ಅನೈತಿಕ ಸಂಬಂಧ ಹೊಂದಿದ್ದರೆ ಯೋಚಿಸಲು ಹೋಗಲೇ ಬಾರದು. ಆ ಕ್ಷಣದಲ್ಲಿಯೆ ಅವರಿಂದ ದೂರವಾಗಿ ಬಿಡಬೇಕು. ಆದರೆ ಅನೇಕ ಹೆಣ್ಣು ಮಕ್ಕಳು ಗಂಡನಿಗೆ ಮತ್ತೊಂದು ಸಂಬಂಧಿವಿದ್ದರೂ ಕೂಡ ಸಹಿಸಿಕೊಂಡು ಇರುತ್ತಾರೆ. ಆದರೆ ಒಂದು ವಿಷಯ ಯೋಚಿಸಿ ನಿಮ್ಮ ಬಗ್ಗೆ ಕಿಂಚಿತ್ತು ಪ್ರೀತಿ ಅಥವಾ ನಿಮ್ಮ ಭಾವನೆಗಳಿಗೆ ಬೆಲೆಯಿದ್ದಿದ್ದರೆ ಅವನು ಬೇರೆ ಸಂಬಂಧ ನೋಡುತ್ತಿರಲಿಲ್ಲ. ನಿಮ್ಮ ವ್ಯಕ್ತಿತ್ವಕ್ಕೆ ಬೆಲೆಯಿಲ್ಲದ ಜಾಗದಲ್ಲಿ ನೀವು ಇರಬೇಕೆ?
ಸಣ್ಣ-ಪುಟ್ಟ ಕಾರಣಗಳಿಗೆ ಡಿವೋರ್ಸ್ ತೆಗೆದುಕೊಂಡರೆ ಬದುಕನ್ನು ನಮ್ಮ ಕೈಯಿಂದ ಒಡೆದುಕೊಂಡಂತೆ. ಜೀವನದಲ್ಲಿ ಹೊಂದಾಣಿಕೆ ಇರಬೇಕು. ಯಾವಾಗ ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ತಲುಪಿದಾಗ ಹಿಂಸೆ ಅನುಭವಿಸುವುದರಲ್ಲಿ ಯಾವುದೇ ಅರ್ಥವಿಲ್ಲ.



Click it and Unblock the Notifications