Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಈ 5 ಮಾತನಾಡಿದರೆ ಶ್ರುತಿ ತಪ್ಪುವುದು ಸಂಸಾರದಲ್ಲಿ

ಮದುವೆಯ ನಂತರ ಗಂಡ-ಹೆಂಡತಿ ನಡುವೆ ವಾದ-ವಿವಾದಗಳು ಹಣ, ಆಸ್ತಿ, ಮಾಜಿ ಸ್ನೇಹಿತ ಅಥವ ಸ್ನೇಹಿತೆ, ಮನೆ ಕೆಲಸ, ಪೋಷಕರು, ಜವಬ್ದಾರಿ ಹೀಗೆ ಇವುಗಳ ಸುತ್ತನೇ ಹೆಚ್ಚಾಗಿ ಇರುತ್ತದೆ. ಚಿಕ್ಕದಾಗಿ ಪ್ರಾರಂಭವಾಗುವ ನಂತರ ದೊಡ್ಡ ರಂಪಾಟಕ್ಕೆ ಕೂಡ ಕಾರಣವಾಗುವುದು. ಆಗ ಈ ಕೆಳಗಿನ ಅಂಶಗಳು ದೊಡ್ಡ ವಿಷಯವಾಗಿರುತ್ತದೆ.
ನೀನು ನನ್ನ ಪ್ರೀತಿಸುತ್ತಿಲ್ಲ: ಮದುವೆಯಾದ ಶುರುವಿನಲ್ಲಿ ಪ್ರಣಯ ಪಕ್ಷಿಗಳಂತೆ ಇರುತ್ತಾರೆ. ಹಾಗಂತ ಯಾವತ್ತೂ ಇರಲು ಸಾಧ್ಯವಿಲ್ಲ. ಅದರಲ್ಲೂ ಪುರುಷರಿಗೆ ಹೆಚ್ಚು ಜವಬ್ದಾರಿ ಹೆಚ್ಚಾಗುವುದರಿಂದ ಹೆಚ್ಚಿನ ಸಮಯವನ್ನು ಜೊತೆಯಲ್ಲಿ ಕಳೆಯಲು ಆಗದೇ ಹೋಗಬಹುದು. ಆದರೆ ಇದನ್ನೇ ತುಂಬಾ ಹೆಣ್ಣು ಮಕ್ಕಳು ಅಪಾರ್ಥ ಮಾಡಿಕೊಳ್ಳುತ್ತಾರೆ. ಅದರಲ್ಲೂ ಪ್ರೀತಿಸಿ ಮದುವೆಯಾದ ಹೆಣ್ಣು ಮಕ್ಕಳಂತೂ ಈ ವಿಷಯದಲ್ಲಿ ತುಂಬಾ ಕೊರಗುತ್ತರೆ. ಮದುವೆಗೆ ಮುಂಚೆ ನನ್ನ ನೋಡಲು ಬರಲು ಯಾವುದೇ ಬ್ಯೂಸಿ ಇರಲಿಲ್ಲ, ಸಿನಿಮಾ, ಪಾರ್ಕ್ ಅಂತ ಸಮಯ ಕಳಿಯುತ್ತಿದ್ದವು ಆದರೆ ಮದುವೆಯಾದ ಮೇಲೆ ಬದಲಾಗಿದ್ದಾರೆ. ಈಗ ನನ್ನ ಮುಂಚಿನಂತೆ ಪ್ರೀತಿಸುತ್ತಿಲ್ಲ ಅಂತ ಸುಮ್ಮನೆ ಕೊರಗುತ್ತಾರೆ. ನನ್ನ ನೀನು ಮುಂಚೆಯಷ್ಟು ಪ್ರೀತಿಸುತ್ತಿಲ್ಲ ಅಂತ ಹೇಳಿ ಗಂಡನಿಗೆ ಕೊಪ ಬರುವಂತೆ ಮಾಡುತ್ತಾರೆ. ಇದರಿಂದ ಇಬ್ಬರ ಮಾನಸಿಕ ನೆಮ್ಮದಿ ಹಾಳಾಗುವುದು.
ಆದರೆ ಈ ಸಮಯದಲ್ಲಿ ಹೆಣ್ಣು ಮಕ್ಕಳು ಸ್ವಲ್ಪ ಪ್ರಾಕ್ಟಿಕಲ್ ಆಗಿ ಯೋಚಿಸಬೇಕು. ಮುಂಚೆಯ ರೀತಿ ಮದುವೆಯ ನಂತರ ಕೂಡ ನಿಮ್ಮ ಹತ್ತಿರನೆ ಇದ್ದರೆ ಮುಂದಿನ ಜೀವನ ನಡೆಯ ಬೇಡ್ವೆ? ನೀವು ಅವರನ್ನು ಮೊದಲಿನಷ್ಟೆ, ಅದಕ್ಕಿಂತ ಹೆಚ್ಚೇ ಪ್ರೀತಿಸಿ. ಆಗ ಅವರಿಗೂ ನಿಮ್ಮ ಮೇಲೆ ಪ್ರೀತಿ ಹೆಚ್ಚಾಗುವುದು. ಏನೇ ವಿಷಯವಿದ್ದರೂ ಇಬ್ಬರೂ ಮುಕ್ತ ಮನಸ್ಸಿನಿಂದ ಚರ್ಚಿಸಬೇಕು. ಎಲ್ಲಾ ನಿರ್ಧಾರವನ್ನು ಇಬ್ಬರೂ ಜೊತೆಗೂಡಿ ಕೈಗೊಳ್ಳಬೇಕು. ಈ ರೀತಿ ಮಾಡಿದರೆ ಒಬ್ಬರನ್ನೊಬ್ಬರು ನಿರ್ಲಕ್ಷ್ಯ ಮಾಡಿದಂತಾಗುವುದಿಲ್ಲ, ಸಂಬಂಧ ಗಟ್ಟಿಯಾಗುವುದು.
ನಂಬಿಕೆ : ಸಂಸಾರ ಎಂಬ ದೋಣಿ ಸಾಗಲು ನಂಬಿಕೆ ಅನ್ನುವುದು ಮುಖ್ಯ. ನಂಬಿಕೆಯಿಲ್ಲದಿದ್ದರೆ ಆ ಸಂಬಂಧ ಮುರಿದು ಬೀಳುವುದು ಖಂಡಿತ. ಗಂಡ-ಹೆಂಡತಿ ನಡುವೆ ಯಾವುದೇ ಮುಚ್ಚುಮರೆ ಇರಬಾರದು. ಒಬ್ಬರ ಮೇಲೆ ತುಂಬಾ ನಂಬಿಕೆಯಿಟ್ಟರೆ ಅವರಿಗೆ ನಮ್ಮ ನಂಬಿಕೆಗೆ ದ್ರೋಹ ಬಗೆಯಲು ಮನಸ್ಸು ಬರುವುದಿಲ್ಲ. ಆದರೆ ಸಂಶಯ ಪಡುವ ಗುಣವಿದ್ದರೆ ಮುಂದೆ ನಿಮ್ಮ ಸಂಶಯ ನಿಜವಾಗುವುದು. ಏಕೆಂದರೆ ನೀವು ಅವರನ್ನು ಸಂಶಯ ಪಡುವಾಗ ಏಕೆ ಹಾಗೇ ಮಾಡಬಾರದು ಅನಿಸುತ್ತದೆ. ಅದು ಮನುಷ್ಯನ ಗುಣ. ಆದ್ದರಿಂದ ಸಂಸಾರದಲ್ಲಿ ಸಂಶಯ ಅನ್ನುವುದು ಬೇಡ.



Click it and Unblock the Notifications