Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಈ 5 ಮಾತನಾಡಿದರೆ ಶ್ರುತಿ ತಪ್ಪುವುದು ಸಂಸಾರದಲ್ಲಿ

ಮದುವೆಯ ನಂತರ ಗಂಡ-ಹೆಂಡತಿ ನಡುವೆ ವಾದ-ವಿವಾದಗಳು ಹಣ, ಆಸ್ತಿ, ಮಾಜಿ ಸ್ನೇಹಿತ ಅಥವ ಸ್ನೇಹಿತೆ, ಮನೆ ಕೆಲಸ, ಪೋಷಕರು, ಜವಬ್ದಾರಿ ಹೀಗೆ ಇವುಗಳ ಸುತ್ತನೇ ಹೆಚ್ಚಾಗಿ ಇರುತ್ತದೆ. ಚಿಕ್ಕದಾಗಿ ಪ್ರಾರಂಭವಾಗುವ ನಂತರ ದೊಡ್ಡ ರಂಪಾಟಕ್ಕೆ ಕೂಡ ಕಾರಣವಾಗುವುದು. ಆಗ ಈ ಕೆಳಗಿನ ಅಂಶಗಳು ದೊಡ್ಡ ವಿಷಯವಾಗಿರುತ್ತದೆ.
ನೀನು ನನ್ನ ಪ್ರೀತಿಸುತ್ತಿಲ್ಲ: ಮದುವೆಯಾದ ಶುರುವಿನಲ್ಲಿ ಪ್ರಣಯ ಪಕ್ಷಿಗಳಂತೆ ಇರುತ್ತಾರೆ. ಹಾಗಂತ ಯಾವತ್ತೂ ಇರಲು ಸಾಧ್ಯವಿಲ್ಲ. ಅದರಲ್ಲೂ ಪುರುಷರಿಗೆ ಹೆಚ್ಚು ಜವಬ್ದಾರಿ ಹೆಚ್ಚಾಗುವುದರಿಂದ ಹೆಚ್ಚಿನ ಸಮಯವನ್ನು ಜೊತೆಯಲ್ಲಿ ಕಳೆಯಲು ಆಗದೇ ಹೋಗಬಹುದು. ಆದರೆ ಇದನ್ನೇ ತುಂಬಾ ಹೆಣ್ಣು ಮಕ್ಕಳು ಅಪಾರ್ಥ ಮಾಡಿಕೊಳ್ಳುತ್ತಾರೆ. ಅದರಲ್ಲೂ ಪ್ರೀತಿಸಿ ಮದುವೆಯಾದ ಹೆಣ್ಣು ಮಕ್ಕಳಂತೂ ಈ ವಿಷಯದಲ್ಲಿ ತುಂಬಾ ಕೊರಗುತ್ತರೆ. ಮದುವೆಗೆ ಮುಂಚೆ ನನ್ನ ನೋಡಲು ಬರಲು ಯಾವುದೇ ಬ್ಯೂಸಿ ಇರಲಿಲ್ಲ, ಸಿನಿಮಾ, ಪಾರ್ಕ್ ಅಂತ ಸಮಯ ಕಳಿಯುತ್ತಿದ್ದವು ಆದರೆ ಮದುವೆಯಾದ ಮೇಲೆ ಬದಲಾಗಿದ್ದಾರೆ. ಈಗ ನನ್ನ ಮುಂಚಿನಂತೆ ಪ್ರೀತಿಸುತ್ತಿಲ್ಲ ಅಂತ ಸುಮ್ಮನೆ ಕೊರಗುತ್ತಾರೆ. ನನ್ನ ನೀನು ಮುಂಚೆಯಷ್ಟು ಪ್ರೀತಿಸುತ್ತಿಲ್ಲ ಅಂತ ಹೇಳಿ ಗಂಡನಿಗೆ ಕೊಪ ಬರುವಂತೆ ಮಾಡುತ್ತಾರೆ. ಇದರಿಂದ ಇಬ್ಬರ ಮಾನಸಿಕ ನೆಮ್ಮದಿ ಹಾಳಾಗುವುದು.
ಆದರೆ ಈ ಸಮಯದಲ್ಲಿ ಹೆಣ್ಣು ಮಕ್ಕಳು ಸ್ವಲ್ಪ ಪ್ರಾಕ್ಟಿಕಲ್ ಆಗಿ ಯೋಚಿಸಬೇಕು. ಮುಂಚೆಯ ರೀತಿ ಮದುವೆಯ ನಂತರ ಕೂಡ ನಿಮ್ಮ ಹತ್ತಿರನೆ ಇದ್ದರೆ ಮುಂದಿನ ಜೀವನ ನಡೆಯ ಬೇಡ್ವೆ? ನೀವು ಅವರನ್ನು ಮೊದಲಿನಷ್ಟೆ, ಅದಕ್ಕಿಂತ ಹೆಚ್ಚೇ ಪ್ರೀತಿಸಿ. ಆಗ ಅವರಿಗೂ ನಿಮ್ಮ ಮೇಲೆ ಪ್ರೀತಿ ಹೆಚ್ಚಾಗುವುದು. ಏನೇ ವಿಷಯವಿದ್ದರೂ ಇಬ್ಬರೂ ಮುಕ್ತ ಮನಸ್ಸಿನಿಂದ ಚರ್ಚಿಸಬೇಕು. ಎಲ್ಲಾ ನಿರ್ಧಾರವನ್ನು ಇಬ್ಬರೂ ಜೊತೆಗೂಡಿ ಕೈಗೊಳ್ಳಬೇಕು. ಈ ರೀತಿ ಮಾಡಿದರೆ ಒಬ್ಬರನ್ನೊಬ್ಬರು ನಿರ್ಲಕ್ಷ್ಯ ಮಾಡಿದಂತಾಗುವುದಿಲ್ಲ, ಸಂಬಂಧ ಗಟ್ಟಿಯಾಗುವುದು.
ನಂಬಿಕೆ : ಸಂಸಾರ ಎಂಬ ದೋಣಿ ಸಾಗಲು ನಂಬಿಕೆ ಅನ್ನುವುದು ಮುಖ್ಯ. ನಂಬಿಕೆಯಿಲ್ಲದಿದ್ದರೆ ಆ ಸಂಬಂಧ ಮುರಿದು ಬೀಳುವುದು ಖಂಡಿತ. ಗಂಡ-ಹೆಂಡತಿ ನಡುವೆ ಯಾವುದೇ ಮುಚ್ಚುಮರೆ ಇರಬಾರದು. ಒಬ್ಬರ ಮೇಲೆ ತುಂಬಾ ನಂಬಿಕೆಯಿಟ್ಟರೆ ಅವರಿಗೆ ನಮ್ಮ ನಂಬಿಕೆಗೆ ದ್ರೋಹ ಬಗೆಯಲು ಮನಸ್ಸು ಬರುವುದಿಲ್ಲ. ಆದರೆ ಸಂಶಯ ಪಡುವ ಗುಣವಿದ್ದರೆ ಮುಂದೆ ನಿಮ್ಮ ಸಂಶಯ ನಿಜವಾಗುವುದು. ಏಕೆಂದರೆ ನೀವು ಅವರನ್ನು ಸಂಶಯ ಪಡುವಾಗ ಏಕೆ ಹಾಗೇ ಮಾಡಬಾರದು ಅನಿಸುತ್ತದೆ. ಅದು ಮನುಷ್ಯನ ಗುಣ. ಆದ್ದರಿಂದ ಸಂಸಾರದಲ್ಲಿ ಸಂಶಯ ಅನ್ನುವುದು ಬೇಡ.



Click it and Unblock the Notifications
