Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ದಾಂಪತ್ಯ ಜೀವನದಲ್ಲಿ ಈ ಎರಡು ಮುಖಗಳು ಏಕೆ?

ಮದುವೆಯನ್ನು ನರಕ, ಸ್ವರ್ಗ ಎಂದು ಹೇಳುವವರಿಬ್ಬರೂ ಮದುವೆಯಾಗುವಾಗ ನೂರಾರು ಸುಂದರ ಕನಸ್ಸುಗಳಿಂದ ಹೊಸ ಬಾಳಿಗೆ ಕಾಲಿಟ್ಟಿರುತ್ತಾರೆ. ಆದರೆ ನಂತರ ಅವರು ರೂಪಿಸಿಕೊಂಡ ಜೀವನದಿಂದಾಗಿ ಅವರ ಜೀವನ ವಿಚಿತ್ರ ತಿರುವುಗಳನ್ನು ಪಡೆದಿರುತ್ತದೆ.
ಅದರಲ್ಲೂ ಇತ್ತೀಚಿಗೆ ವಿಚ್ಛೇದನ ಪಡೆಯುವವರ ಸಂಖ್ಯೆ ಕೂಡ ಹೆಚ್ಚಾಗುತ್ತದೆ. ಈ ರೀತಿ ವಿಚ್ಛೇದನಕ್ಕೆ ಕಾರಣಗಳೇನು ಎಂದು ನೋಡಿದಾಗ ಈ ಕೆಳಗಿನ ಪ್ರಮುಖ ಅಂಶಗಳು ಕಂಡುಬರುತ್ತವೆ.
ಯೋಚನೆಯಲ್ಲಿ ಹೊಂದಾಣಿಕೆಯಿಲ್ಲದಿರುವುದು: ಗುಣದಲ್ಲಿ ಒಬ್ಬರಿಗಿಂತ ಒಬ್ಬರು ಭಿನ್ನವಾಗಿರುವುದು ಸಹಜ. ಆದರೆ ಗುಣಗಳನ್ನು ಹೊಂದಾಣಿಕೆ ಮಾಡಿಕೊಂಡು ಹೋಗಬೇಕು. ಒಳ್ಳೆಯ ವಿಷಯಗಳಿಗೆ ಹಠ ಇರಬೇಕು. ಆದರೆ ಹಠದಿಂದಾಗಿ ಜೀವನ ಹಾಳಾಗಬಾರದು. ಮದುವೆಯ ನಂತರ ಸ್ವಭಾವವನ್ನು ಸ್ವಲ್ಪ ಬದಲಾಯಿಸಬೇಕಾಗುತ್ತದೆ. ಆದರೆ ಹೆಚ್ಚಿನ ದಂಪತಿಗಳಲ್ಲಿ ಆ ಹೊಂದಾಣಿಕೆಯ ಗುಣ ಇಲ್ಲದಿರುವುದು ವಿಚ್ಛೇದನಕ್ಕೆ ಪ್ರಮುಖ ಕಾರಣವಾಗಿದೆ.
ತಪ್ಪು ತಿಳಿಯುವುದು: ಒಬ್ಬರ ಬಗ್ಗೆ ಮತ್ತೊಬ್ಬರಲ್ಲಿ ತಪ್ಪು ಭಾವನೆ, ಅವರ ಬಗ್ಗೆ ಗೌರವ ಇಲ್ಲದಿರುವುದು ಈ ರೀತಿ ಇದ್ದರೆ ಸಂಸಾರ ನರಕನೇ ಆಗುವುದು!
ಮಾತುಕತೆ ಕಡಿಮೆ: ಎಷ್ಟೋ ಸಂಸಾರದಲ್ಲಿ ಗಂಡ-ಹೆಂಡತಿ ನಡುವೆ ಸರಿಯಾಗಿ ಮಾತುಕತೆನೇ ಇರುವುದಿಲ್ಲ. ಒಬ್ಬರ ಭಾವನೆಗಳನ್ನು ಮತ್ತೊಬ್ಬರು ಅರ್ಥೈಸಿಕೊಳ್ಳುವುದಿಲ್ಲ. ಈ ರೀತಿ ಇದ್ದರೆ ಇಬ್ಬರ ನಡುವೆ ಭಾಂದವ್ಯ ಗಟ್ಟಿಯಾಗಲು ಸಾಧ್ಯವಿಲ್ಲ.
ನಂಬಿಕೆ ಇಲ್ಲದಿರುವುದು: ನಂಬಿಕೆ ಎಂಬುದು ಇಲ್ಲದ ಮೇಲೆ ಸಂಸಾರ ನಡೆಸುವುದು ಕಷ್ಟವಾಗುತ್ತದೆ. ನಂಬಿಕೆ ಇದ್ದರೆ ಎಂತಹ ಸಮಸ್ಯೆಯನ್ನೂ ಸುಲಭವಾಗಿ ನಿವಾರಿಸಬಹುದು.
ಅದೇ ದಾಂಪತ್ಯ ಜೀವನ ಸ್ವರ್ಗ ಅನ್ನುವವರು 3 ಗುಣಗಳನ್ನು ತಮ್ಮ ದಾಂಪತ್ಯದ ಬದುಕಿನಲ್ಲಿ ಅಳವಡಿಸಿಕೊಂಡಿರುತ್ತಾರೆ.
1. ಸ್ನೇಹ
2. ಸ್ವಾತಂತ್ರ್ಯ
3. ಕ್ಷಮಿಸುವ ಗುಣ



Click it and Unblock the Notifications