Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ದಾಂಪತ್ಯ ಜೀವನದಲ್ಲಿ ಈ ಎರಡು ಮುಖಗಳು ಏಕೆ?

ಮದುವೆಯನ್ನು ನರಕ, ಸ್ವರ್ಗ ಎಂದು ಹೇಳುವವರಿಬ್ಬರೂ ಮದುವೆಯಾಗುವಾಗ ನೂರಾರು ಸುಂದರ ಕನಸ್ಸುಗಳಿಂದ ಹೊಸ ಬಾಳಿಗೆ ಕಾಲಿಟ್ಟಿರುತ್ತಾರೆ. ಆದರೆ ನಂತರ ಅವರು ರೂಪಿಸಿಕೊಂಡ ಜೀವನದಿಂದಾಗಿ ಅವರ ಜೀವನ ವಿಚಿತ್ರ ತಿರುವುಗಳನ್ನು ಪಡೆದಿರುತ್ತದೆ.
ಅದರಲ್ಲೂ ಇತ್ತೀಚಿಗೆ ವಿಚ್ಛೇದನ ಪಡೆಯುವವರ ಸಂಖ್ಯೆ ಕೂಡ ಹೆಚ್ಚಾಗುತ್ತದೆ. ಈ ರೀತಿ ವಿಚ್ಛೇದನಕ್ಕೆ ಕಾರಣಗಳೇನು ಎಂದು ನೋಡಿದಾಗ ಈ ಕೆಳಗಿನ ಪ್ರಮುಖ ಅಂಶಗಳು ಕಂಡುಬರುತ್ತವೆ.
ಯೋಚನೆಯಲ್ಲಿ ಹೊಂದಾಣಿಕೆಯಿಲ್ಲದಿರುವುದು: ಗುಣದಲ್ಲಿ ಒಬ್ಬರಿಗಿಂತ ಒಬ್ಬರು ಭಿನ್ನವಾಗಿರುವುದು ಸಹಜ. ಆದರೆ ಗುಣಗಳನ್ನು ಹೊಂದಾಣಿಕೆ ಮಾಡಿಕೊಂಡು ಹೋಗಬೇಕು. ಒಳ್ಳೆಯ ವಿಷಯಗಳಿಗೆ ಹಠ ಇರಬೇಕು. ಆದರೆ ಹಠದಿಂದಾಗಿ ಜೀವನ ಹಾಳಾಗಬಾರದು. ಮದುವೆಯ ನಂತರ ಸ್ವಭಾವವನ್ನು ಸ್ವಲ್ಪ ಬದಲಾಯಿಸಬೇಕಾಗುತ್ತದೆ. ಆದರೆ ಹೆಚ್ಚಿನ ದಂಪತಿಗಳಲ್ಲಿ ಆ ಹೊಂದಾಣಿಕೆಯ ಗುಣ ಇಲ್ಲದಿರುವುದು ವಿಚ್ಛೇದನಕ್ಕೆ ಪ್ರಮುಖ ಕಾರಣವಾಗಿದೆ.
ತಪ್ಪು ತಿಳಿಯುವುದು: ಒಬ್ಬರ ಬಗ್ಗೆ ಮತ್ತೊಬ್ಬರಲ್ಲಿ ತಪ್ಪು ಭಾವನೆ, ಅವರ ಬಗ್ಗೆ ಗೌರವ ಇಲ್ಲದಿರುವುದು ಈ ರೀತಿ ಇದ್ದರೆ ಸಂಸಾರ ನರಕನೇ ಆಗುವುದು!
ಮಾತುಕತೆ ಕಡಿಮೆ: ಎಷ್ಟೋ ಸಂಸಾರದಲ್ಲಿ ಗಂಡ-ಹೆಂಡತಿ ನಡುವೆ ಸರಿಯಾಗಿ ಮಾತುಕತೆನೇ ಇರುವುದಿಲ್ಲ. ಒಬ್ಬರ ಭಾವನೆಗಳನ್ನು ಮತ್ತೊಬ್ಬರು ಅರ್ಥೈಸಿಕೊಳ್ಳುವುದಿಲ್ಲ. ಈ ರೀತಿ ಇದ್ದರೆ ಇಬ್ಬರ ನಡುವೆ ಭಾಂದವ್ಯ ಗಟ್ಟಿಯಾಗಲು ಸಾಧ್ಯವಿಲ್ಲ.
ನಂಬಿಕೆ ಇಲ್ಲದಿರುವುದು: ನಂಬಿಕೆ ಎಂಬುದು ಇಲ್ಲದ ಮೇಲೆ ಸಂಸಾರ ನಡೆಸುವುದು ಕಷ್ಟವಾಗುತ್ತದೆ. ನಂಬಿಕೆ ಇದ್ದರೆ ಎಂತಹ ಸಮಸ್ಯೆಯನ್ನೂ ಸುಲಭವಾಗಿ ನಿವಾರಿಸಬಹುದು.
ಅದೇ ದಾಂಪತ್ಯ ಜೀವನ ಸ್ವರ್ಗ ಅನ್ನುವವರು 3 ಗುಣಗಳನ್ನು ತಮ್ಮ ದಾಂಪತ್ಯದ ಬದುಕಿನಲ್ಲಿ ಅಳವಡಿಸಿಕೊಂಡಿರುತ್ತಾರೆ.
1. ಸ್ನೇಹ
2. ಸ್ವಾತಂತ್ರ್ಯ
3. ಕ್ಷಮಿಸುವ ಗುಣ



Click it and Unblock the Notifications
