Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಪ್ರೀತಿ ಸೋತಾಗ ಕೊರಗಬೇಡಿ, ಇವರತ್ತ ಕಣ್ಣಾಯಿಸಿ
ಪರಸ್ಪರ ಒಬ್ಬರಿಗೊಬ್ಬರು ತುಂಬಾ ಇಷ್ಟಪಡುತ್ತಿರುತ್ತಾರೆ. ಯಾವುದೋ ಒಂದು ಕಾರಣಕ್ಕೆ ಇಬ್ಬರು ದೂರವಾಗಿ ಬಿಡುತ್ತಾರೆ. ಹೀಗೆ ದೂರವಾದ ಪ್ರೇಮಿಗಳಿಗೆ ದೂರವಾಗಲು ಯಾವುದೋ ಒಂದು ಕಾರಣವಿರುತ್ತದೆ, ಅವನ/ಅವಳ ಗುಣ ಇತ್ತೀಚಿಗೆ ಇಷ್ಟವಾಗುತ್ತಿಲ್ಲ, ಸಂಶಯ ಪಡುತ್ತಾಳೆ/ನೆ, ಮನೆಯವರಿಗೋಸ್ಕರ ದೂರವಾದೆವು, ಪ್ರೀತಿಯಲ್ಲಿ ಮೋಸ ಉಂಟಾಯಿತು ಹೀಗೆ ನೂರೆಂಟು ಕಾರಣಗಳಿರುತ್ತವೆ.
ದೂರವಾಗುವಾಗ ಈ ಸಂಬಂಧ ಬೇಡ ಎಂಬ ಮನಸ್ಥಿತಿ ಇರುತ್ತದೆ, ನಂತರ ಅದರ ಬಗ್ಗೆ ಯೋಚಿಸಿ ತುಂಬಾ ವೇದನೆ ಪಡುತ್ತಾರೆ. ಆ ಸಂದರ್ಭದಲ್ಲಿ ಜೀವನ ನರಕ ಅನಿಸಿಬಿಡುತ್ತದೆ. ಜನರನ್ನು ಫೇಸ್ ಮಾಡುವುದು ಕಷ್ಟವಾಗುತ್ತದೆ. ಯಾರಾದರೂ ಹಳೆಯ ಸಂಬಂಧದ ಬಗ್ಗೆ ಮಾತೆತ್ತಿದರೆ ತುಂಬಾ ನೋವಾಗುತ್ತದೆ. ಆ ಸಂದರ್ಭದಲ್ಲಿ ಮಾನಸಿಕ ಸಾಂತ್ವನ ಹೇಳಲು ಜನ ಬೇಕಾಗಿರುತ್ತದೆ.
ಪ್ರೀತಿಯಲ್ಲಿ ಸೋತು ಹೋದಾಗ ರೂಂನಲ್ಲಿ ಕುಳಿತು ಕೊರಗುವ ಬದಲು ಜನರ ಜೊತೆ ಬೆರೆಯಬೇಕು. ಅದರಲ್ಲೂ ಈ ಕೆಳಗಿನ ವ್ಯಕ್ತಿಗಳ ಜೊತೆ ಬೆರೆಯಿರಿ, ಮನಸ್ಸಿನ ನೋವು ಮರೆಯುವುದು, ನೆಮ್ಮದಿ ದೊರೆಯುವುದು.

ಸ್ನೇಹಿತರು:
ಈ ಸಂದರ್ಭದಲ್ಲಿ ಸ್ನೇಹಿತರ ಮಾರ್ಗದರ್ಶನ ಹಾಗೂ ಹಿತನುಡಿ ತುಂಬಾ ಬೇಕಾಗುತ್ತದೆ. ಸ್ನೇಹಿತರ ಜೊತೆ ಸಮಯ ಕಳೆದರೆ ಹಳೆಯ ಕಹಿ ನೆನಪುಗಳನ್ನು ಮರೆಯಲು ಸಾಧ್ಯವಾಗಿ, ಹೊಸ ಬದುಕಿನತ್ತು ಉತ್ಸಾಹದಿಂದ ಹೆಜ್ಜೆ ಹಾಕಬಹುದು.

ಅಪರಿಚಿತರು:
ಪ್ರೀತಿಸಿದ ವ್ಯಕ್ತಿಯಿಂದ ತುಂಬಾ ಬೇಜಾರಾದಾಗ ಅಪರಿಚಿತರ ಸ್ನೇಹ ತುಂಬಾ ಹಿತ ಅನಿಸುತ್ತದೆ. ಆದ್ದರಿಂದಲೇ ಕೆಲವರು ತಮ್ಮ ಬ್ರೇಕ್ ಅಪ್ ಸ್ಟೋರಿಗಳನ್ನು ರೇಡಿಯೋ ಜಾಕಿಗಳ ಜೊತೆ ಹೇಳಿಕೊಂಡು ಸಮಧಾನ ಪಟ್ಟುಕೊಳ್ಳುತ್ತಾರೆ.

ನಿಮ್ಮ ಮಾಜಿಯ ಶತ್ರು:
ಮಾಜಿ ಪ್ರೇಮಿಯನ್ನು ದ್ವೇಷಿಸುತ್ತಿರುವವರು ತುಂಬಾ ಆಪ್ತರಾಗಿ ಬಿಡುತ್ತಾರೆ. ಅವರು ನಿಮ್ಮ ಮಾಜಿಯನ್ನು ಬೈಯ್ಯುವಾಗ ಮನಸ್ಸಿಗೆ ಸ್ವಲ್ಪ ನೆಮ್ಮದಿ ಸಿಕ್ಕಂತೆ ಭಾಸವಾಗುವುದು.

ಕುಟುಂಬ:
ತನ್ನ ಬಾಳಸಂಗಾತಿಯಿಂದ ಅಥವಾ ಪ್ರೇಮಿಯಿಂದ ದೂರವಾಗಿ ಮಾನಸಿಕ ನೋವು ಅನುಭವಿಸುತ್ತಿರುವಾಗ ಕುಟುಂಬದವರು ಅವರಿಗೆ ಸಾಂತ್ವನ ಹೇಳಿದರೆ ಮನಸ್ಸಿಗೆ ಸ್ವಲ್ಪ ಧೈರ್ಯ ಬರುತ್ತದೆ.

ಹೊಸ ಬದುಕು:
ನಂಬಿದ ವ್ಯಕ್ತಿಯಿಂದ ನೋವಾಗಿ ದೂರವಾದರೆ ಮನಸ್ಸು ಹೊಸ ಸಂಗಾತಿಯನ್ನು ಬಯಸುತ್ತದೆ, ಹಾಗೂ ಅದು ನಿಮ್ಮ ಮನಸ್ಸಿಗ್ಎ ನೆಮ್ಮದಿ ಸಿಗುವ ವ್ಯಕ್ತಿಯ ಹುಡುಕಾಟದಲ್ಲಿರುತ್ತದೆ. ಆ ಸಂದರ್ಭದಲ್ಲಿ ಯಾರಾದರೂ ನಮ್ಮ ಬಗ್ಗೆ ಅಕ್ಕರೆ ತೋರಿಸಿದರೆ ನಮಗೆ ಅರಿವಿಲ್ಲದಂತೆಯೆ ಮನಸ್ಸು ಅವನನ್ನು/ ಅವಳನ್ನು ಪ್ರೀತಿಸಲಾರಂಭಿಸುತ್ತದೆ.



Click it and Unblock the Notifications