Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಪ್ರೀತಿ ಸೋತಾಗ ಕೊರಗಬೇಡಿ, ಇವರತ್ತ ಕಣ್ಣಾಯಿಸಿ
ಪರಸ್ಪರ ಒಬ್ಬರಿಗೊಬ್ಬರು ತುಂಬಾ ಇಷ್ಟಪಡುತ್ತಿರುತ್ತಾರೆ. ಯಾವುದೋ ಒಂದು ಕಾರಣಕ್ಕೆ ಇಬ್ಬರು ದೂರವಾಗಿ ಬಿಡುತ್ತಾರೆ. ಹೀಗೆ ದೂರವಾದ ಪ್ರೇಮಿಗಳಿಗೆ ದೂರವಾಗಲು ಯಾವುದೋ ಒಂದು ಕಾರಣವಿರುತ್ತದೆ, ಅವನ/ಅವಳ ಗುಣ ಇತ್ತೀಚಿಗೆ ಇಷ್ಟವಾಗುತ್ತಿಲ್ಲ, ಸಂಶಯ ಪಡುತ್ತಾಳೆ/ನೆ, ಮನೆಯವರಿಗೋಸ್ಕರ ದೂರವಾದೆವು, ಪ್ರೀತಿಯಲ್ಲಿ ಮೋಸ ಉಂಟಾಯಿತು ಹೀಗೆ ನೂರೆಂಟು ಕಾರಣಗಳಿರುತ್ತವೆ.
ದೂರವಾಗುವಾಗ ಈ ಸಂಬಂಧ ಬೇಡ ಎಂಬ ಮನಸ್ಥಿತಿ ಇರುತ್ತದೆ, ನಂತರ ಅದರ ಬಗ್ಗೆ ಯೋಚಿಸಿ ತುಂಬಾ ವೇದನೆ ಪಡುತ್ತಾರೆ. ಆ ಸಂದರ್ಭದಲ್ಲಿ ಜೀವನ ನರಕ ಅನಿಸಿಬಿಡುತ್ತದೆ. ಜನರನ್ನು ಫೇಸ್ ಮಾಡುವುದು ಕಷ್ಟವಾಗುತ್ತದೆ. ಯಾರಾದರೂ ಹಳೆಯ ಸಂಬಂಧದ ಬಗ್ಗೆ ಮಾತೆತ್ತಿದರೆ ತುಂಬಾ ನೋವಾಗುತ್ತದೆ. ಆ ಸಂದರ್ಭದಲ್ಲಿ ಮಾನಸಿಕ ಸಾಂತ್ವನ ಹೇಳಲು ಜನ ಬೇಕಾಗಿರುತ್ತದೆ.
ಪ್ರೀತಿಯಲ್ಲಿ ಸೋತು ಹೋದಾಗ ರೂಂನಲ್ಲಿ ಕುಳಿತು ಕೊರಗುವ ಬದಲು ಜನರ ಜೊತೆ ಬೆರೆಯಬೇಕು. ಅದರಲ್ಲೂ ಈ ಕೆಳಗಿನ ವ್ಯಕ್ತಿಗಳ ಜೊತೆ ಬೆರೆಯಿರಿ, ಮನಸ್ಸಿನ ನೋವು ಮರೆಯುವುದು, ನೆಮ್ಮದಿ ದೊರೆಯುವುದು.

ಸ್ನೇಹಿತರು:
ಈ ಸಂದರ್ಭದಲ್ಲಿ ಸ್ನೇಹಿತರ ಮಾರ್ಗದರ್ಶನ ಹಾಗೂ ಹಿತನುಡಿ ತುಂಬಾ ಬೇಕಾಗುತ್ತದೆ. ಸ್ನೇಹಿತರ ಜೊತೆ ಸಮಯ ಕಳೆದರೆ ಹಳೆಯ ಕಹಿ ನೆನಪುಗಳನ್ನು ಮರೆಯಲು ಸಾಧ್ಯವಾಗಿ, ಹೊಸ ಬದುಕಿನತ್ತು ಉತ್ಸಾಹದಿಂದ ಹೆಜ್ಜೆ ಹಾಕಬಹುದು.

ಅಪರಿಚಿತರು:
ಪ್ರೀತಿಸಿದ ವ್ಯಕ್ತಿಯಿಂದ ತುಂಬಾ ಬೇಜಾರಾದಾಗ ಅಪರಿಚಿತರ ಸ್ನೇಹ ತುಂಬಾ ಹಿತ ಅನಿಸುತ್ತದೆ. ಆದ್ದರಿಂದಲೇ ಕೆಲವರು ತಮ್ಮ ಬ್ರೇಕ್ ಅಪ್ ಸ್ಟೋರಿಗಳನ್ನು ರೇಡಿಯೋ ಜಾಕಿಗಳ ಜೊತೆ ಹೇಳಿಕೊಂಡು ಸಮಧಾನ ಪಟ್ಟುಕೊಳ್ಳುತ್ತಾರೆ.

ನಿಮ್ಮ ಮಾಜಿಯ ಶತ್ರು:
ಮಾಜಿ ಪ್ರೇಮಿಯನ್ನು ದ್ವೇಷಿಸುತ್ತಿರುವವರು ತುಂಬಾ ಆಪ್ತರಾಗಿ ಬಿಡುತ್ತಾರೆ. ಅವರು ನಿಮ್ಮ ಮಾಜಿಯನ್ನು ಬೈಯ್ಯುವಾಗ ಮನಸ್ಸಿಗೆ ಸ್ವಲ್ಪ ನೆಮ್ಮದಿ ಸಿಕ್ಕಂತೆ ಭಾಸವಾಗುವುದು.

ಕುಟುಂಬ:
ತನ್ನ ಬಾಳಸಂಗಾತಿಯಿಂದ ಅಥವಾ ಪ್ರೇಮಿಯಿಂದ ದೂರವಾಗಿ ಮಾನಸಿಕ ನೋವು ಅನುಭವಿಸುತ್ತಿರುವಾಗ ಕುಟುಂಬದವರು ಅವರಿಗೆ ಸಾಂತ್ವನ ಹೇಳಿದರೆ ಮನಸ್ಸಿಗೆ ಸ್ವಲ್ಪ ಧೈರ್ಯ ಬರುತ್ತದೆ.

ಹೊಸ ಬದುಕು:
ನಂಬಿದ ವ್ಯಕ್ತಿಯಿಂದ ನೋವಾಗಿ ದೂರವಾದರೆ ಮನಸ್ಸು ಹೊಸ ಸಂಗಾತಿಯನ್ನು ಬಯಸುತ್ತದೆ, ಹಾಗೂ ಅದು ನಿಮ್ಮ ಮನಸ್ಸಿಗ್ಎ ನೆಮ್ಮದಿ ಸಿಗುವ ವ್ಯಕ್ತಿಯ ಹುಡುಕಾಟದಲ್ಲಿರುತ್ತದೆ. ಆ ಸಂದರ್ಭದಲ್ಲಿ ಯಾರಾದರೂ ನಮ್ಮ ಬಗ್ಗೆ ಅಕ್ಕರೆ ತೋರಿಸಿದರೆ ನಮಗೆ ಅರಿವಿಲ್ಲದಂತೆಯೆ ಮನಸ್ಸು ಅವನನ್ನು/ ಅವಳನ್ನು ಪ್ರೀತಿಸಲಾರಂಭಿಸುತ್ತದೆ.



Click it and Unblock the Notifications











