Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಪ್ರೀತಿ ಸೋತಾಗ ಕೊರಗಬೇಡಿ, ಇವರತ್ತ ಕಣ್ಣಾಯಿಸಿ
ಪರಸ್ಪರ ಒಬ್ಬರಿಗೊಬ್ಬರು ತುಂಬಾ ಇಷ್ಟಪಡುತ್ತಿರುತ್ತಾರೆ. ಯಾವುದೋ ಒಂದು ಕಾರಣಕ್ಕೆ ಇಬ್ಬರು ದೂರವಾಗಿ ಬಿಡುತ್ತಾರೆ. ಹೀಗೆ ದೂರವಾದ ಪ್ರೇಮಿಗಳಿಗೆ ದೂರವಾಗಲು ಯಾವುದೋ ಒಂದು ಕಾರಣವಿರುತ್ತದೆ, ಅವನ/ಅವಳ ಗುಣ ಇತ್ತೀಚಿಗೆ ಇಷ್ಟವಾಗುತ್ತಿಲ್ಲ, ಸಂಶಯ ಪಡುತ್ತಾಳೆ/ನೆ, ಮನೆಯವರಿಗೋಸ್ಕರ ದೂರವಾದೆವು, ಪ್ರೀತಿಯಲ್ಲಿ ಮೋಸ ಉಂಟಾಯಿತು ಹೀಗೆ ನೂರೆಂಟು ಕಾರಣಗಳಿರುತ್ತವೆ.
ದೂರವಾಗುವಾಗ ಈ ಸಂಬಂಧ ಬೇಡ ಎಂಬ ಮನಸ್ಥಿತಿ ಇರುತ್ತದೆ, ನಂತರ ಅದರ ಬಗ್ಗೆ ಯೋಚಿಸಿ ತುಂಬಾ ವೇದನೆ ಪಡುತ್ತಾರೆ. ಆ ಸಂದರ್ಭದಲ್ಲಿ ಜೀವನ ನರಕ ಅನಿಸಿಬಿಡುತ್ತದೆ. ಜನರನ್ನು ಫೇಸ್ ಮಾಡುವುದು ಕಷ್ಟವಾಗುತ್ತದೆ. ಯಾರಾದರೂ ಹಳೆಯ ಸಂಬಂಧದ ಬಗ್ಗೆ ಮಾತೆತ್ತಿದರೆ ತುಂಬಾ ನೋವಾಗುತ್ತದೆ. ಆ ಸಂದರ್ಭದಲ್ಲಿ ಮಾನಸಿಕ ಸಾಂತ್ವನ ಹೇಳಲು ಜನ ಬೇಕಾಗಿರುತ್ತದೆ.
ಪ್ರೀತಿಯಲ್ಲಿ ಸೋತು ಹೋದಾಗ ರೂಂನಲ್ಲಿ ಕುಳಿತು ಕೊರಗುವ ಬದಲು ಜನರ ಜೊತೆ ಬೆರೆಯಬೇಕು. ಅದರಲ್ಲೂ ಈ ಕೆಳಗಿನ ವ್ಯಕ್ತಿಗಳ ಜೊತೆ ಬೆರೆಯಿರಿ, ಮನಸ್ಸಿನ ನೋವು ಮರೆಯುವುದು, ನೆಮ್ಮದಿ ದೊರೆಯುವುದು.

ಸ್ನೇಹಿತರು:
ಈ ಸಂದರ್ಭದಲ್ಲಿ ಸ್ನೇಹಿತರ ಮಾರ್ಗದರ್ಶನ ಹಾಗೂ ಹಿತನುಡಿ ತುಂಬಾ ಬೇಕಾಗುತ್ತದೆ. ಸ್ನೇಹಿತರ ಜೊತೆ ಸಮಯ ಕಳೆದರೆ ಹಳೆಯ ಕಹಿ ನೆನಪುಗಳನ್ನು ಮರೆಯಲು ಸಾಧ್ಯವಾಗಿ, ಹೊಸ ಬದುಕಿನತ್ತು ಉತ್ಸಾಹದಿಂದ ಹೆಜ್ಜೆ ಹಾಕಬಹುದು.

ಅಪರಿಚಿತರು:
ಪ್ರೀತಿಸಿದ ವ್ಯಕ್ತಿಯಿಂದ ತುಂಬಾ ಬೇಜಾರಾದಾಗ ಅಪರಿಚಿತರ ಸ್ನೇಹ ತುಂಬಾ ಹಿತ ಅನಿಸುತ್ತದೆ. ಆದ್ದರಿಂದಲೇ ಕೆಲವರು ತಮ್ಮ ಬ್ರೇಕ್ ಅಪ್ ಸ್ಟೋರಿಗಳನ್ನು ರೇಡಿಯೋ ಜಾಕಿಗಳ ಜೊತೆ ಹೇಳಿಕೊಂಡು ಸಮಧಾನ ಪಟ್ಟುಕೊಳ್ಳುತ್ತಾರೆ.

ನಿಮ್ಮ ಮಾಜಿಯ ಶತ್ರು:
ಮಾಜಿ ಪ್ರೇಮಿಯನ್ನು ದ್ವೇಷಿಸುತ್ತಿರುವವರು ತುಂಬಾ ಆಪ್ತರಾಗಿ ಬಿಡುತ್ತಾರೆ. ಅವರು ನಿಮ್ಮ ಮಾಜಿಯನ್ನು ಬೈಯ್ಯುವಾಗ ಮನಸ್ಸಿಗೆ ಸ್ವಲ್ಪ ನೆಮ್ಮದಿ ಸಿಕ್ಕಂತೆ ಭಾಸವಾಗುವುದು.

ಕುಟುಂಬ:
ತನ್ನ ಬಾಳಸಂಗಾತಿಯಿಂದ ಅಥವಾ ಪ್ರೇಮಿಯಿಂದ ದೂರವಾಗಿ ಮಾನಸಿಕ ನೋವು ಅನುಭವಿಸುತ್ತಿರುವಾಗ ಕುಟುಂಬದವರು ಅವರಿಗೆ ಸಾಂತ್ವನ ಹೇಳಿದರೆ ಮನಸ್ಸಿಗೆ ಸ್ವಲ್ಪ ಧೈರ್ಯ ಬರುತ್ತದೆ.

ಹೊಸ ಬದುಕು:
ನಂಬಿದ ವ್ಯಕ್ತಿಯಿಂದ ನೋವಾಗಿ ದೂರವಾದರೆ ಮನಸ್ಸು ಹೊಸ ಸಂಗಾತಿಯನ್ನು ಬಯಸುತ್ತದೆ, ಹಾಗೂ ಅದು ನಿಮ್ಮ ಮನಸ್ಸಿಗ್ಎ ನೆಮ್ಮದಿ ಸಿಗುವ ವ್ಯಕ್ತಿಯ ಹುಡುಕಾಟದಲ್ಲಿರುತ್ತದೆ. ಆ ಸಂದರ್ಭದಲ್ಲಿ ಯಾರಾದರೂ ನಮ್ಮ ಬಗ್ಗೆ ಅಕ್ಕರೆ ತೋರಿಸಿದರೆ ನಮಗೆ ಅರಿವಿಲ್ಲದಂತೆಯೆ ಮನಸ್ಸು ಅವನನ್ನು/ ಅವಳನ್ನು ಪ್ರೀತಿಸಲಾರಂಭಿಸುತ್ತದೆ.



Click it and Unblock the Notifications
