Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಕಾಲು ಉಂಗುರದ ಬಗ್ಗೆ ವೈಜ್ಞಾನಿಕ ದೃಷ್ಟಿಕೋನವೇನು?
ಭಾರತದಲ್ಲಿ ಸ್ತ್ರೀಯರು ಕಾಲುಂಗರ ಧರಿಸಿದರೆ ಅವರನ್ನು ವಿವಾಹಿತರು ಎಂದು ಗುರುತಿಸುತ್ತಾರೆ. ಬಹುತೇಕ ಭಾರತೀಯ ನಾರಿಯರು, ವಿವಾಹವಾದ ಬಳಿಕ ಕಾಲುಂಗುರವನ್ನು ಧರಿಸುತ್ತಾರೆ. ಇದು ಕೇವಲ ಸ್ತ್ರೀಯೋರ್ವಳು ವಿವಾಹಿತೆ ಎಂಬುದರ ಸೂಚಕವಷ್ಟೇ ಅಲ್ಲ, ಇದಕ್ಕೆ ವೈಜ್ಞಾನಿಕ ಕಾರಣವೂ ಕೂಡ ಇದೆ.
ಭಾರತೀಯ ವೇದಶಾಸ್ತ್ರಗಳ ಪ್ರಕಾರ (Vedham, ಅಥವಾ vedam), ಎರಡೂ ಪಾದಗಳಲ್ಲಿ ಕಾಲುಂಗುರಗಳನ್ನು ಧರಿಸುವುದರಿಂದ, ಸ್ತ್ರೀಯರ ಋತುಚಕ್ರವು ನಿಯಮಿತಗೊಂಡು, ಸಮರ್ಪಕವಾದ ಅಂತರದಲ್ಲಿ ಉಂಟಾಗುತ್ತದೆ ಎಂಬ ನಂಬಿಕೆಯಿದೆ.

ಇದು ವಿವಾಹಿತ ಸ್ತ್ರೀಯರಿಗೆ, ಗರ್ಭ ಧರಿಸಲು ಉತ್ತಮ ವೇದಿಕೆಯನ್ನುಂಟು ಮಾಡುತ್ತದೆ. ಮಾತ್ರವಲ್ಲದೇ, ನಿರ್ದಿಷ್ಟ ನರವೊಂದು ಕಾಲಿನ ಎರಡನೆಯ ಬೆರಳನ್ನು ಗರ್ಭಾಶಯಕ್ಕೆ ಸಂಪರ್ಕಿಸುವಾಗ, ಅದು ಹೃದಯದ ಮೂಲಕ ಹಾದುಹೋಗುತ್ತದೆ ಎಂದು ಹೇಳಲಾಗುತ್ತದೆ. ಅದ್ದರಿಂದ, ಕಾಲುಂಗುರಗಳನ್ನು ಯಾವಾಗಲೂ ಬಲ ಮತ್ತು ಎಡ ಪಾದಗಳ ಎರಡನೆಯ ಬೆರಳುಗಳಿಗೇ ಧರಿಸಿರುವುದನ್ನು ನೀವು ಗಮನಿಸಿರಬಹುದು. ಇದು ಗರ್ಭಾಶಯವನ್ನು ನಿಯಂತ್ರಿಸುತ್ತದೆ ಮತ್ತು ಗರ್ಭಾಶಯಕ್ಕೆ ಸಮಪ್ರಮಾಣದ, ಸಂತುಲಿತ ರಕ್ತದೊತ್ತಡವನ್ನು ನಿರ್ವಹಿಸುವುದರ ಮೂಲಕ ಅದರ ಆರೋಗ್ಯವನ್ನು ಕಾಪಾಡುತ್ತದೆ.
ಬೆಳ್ಳಿಯು ಒಂದು ಉತ್ತಮ ವಾಹಕವಾಗಿದ್ದು, ಅದರಿಂದ ಮಾಡಲ್ಪಟ್ಟ ಕಾಲುಂಗುರಗಳು, ಭೂಮಿಯ ಧ್ರುವ ಶಕ್ತಿಗಳನ್ನು ಹೀರಿ ಶರೀರಕ್ಕೆ ವರ್ಗಾಯಿಸುತ್ತವೆ ಹಾಗೂ ತನ್ಮೂಲಕ ಸಂಪೂರ್ಣ ದೈಹಿಕ ವ್ಯವಸ್ಥೆಗೆ ಹೊಸ ಚೈತನ್ಯವನ್ನು ಒದಗಿಸುತ್ತವೆ.
ಮಹಾನ್ ಭಾರತೀಯ ಕಾವ್ಯವಾದ ರಾಮಾಯಣದಲ್ಲಿ ಕಾಲುಂಗುರವು ಮಹತ್ವದ ಪಾತ್ರವಹಿಸುತ್ತದೆ. ಸೀತೆಯು ರಾವಣನಿಂದ ಅಪಹರಿಸಲ್ಪಟ್ಟಾಗ, ಆಕೆಯು ಕಾಲುಂಗುರಗಳನ್ನು (kaniazhi) ಮಾರ್ಗದ ಮೇಲೆ, ಭಗವಾನ್ ಶ್ರೀರಾಮನ ಅವಗಾಹನೆಗಾಗಿ, ಅಪಹರಣಕ್ಕೆ ತಾನು ಗುರಿಯಾಗಿ ಈ ಮಾರ್ಗದ ಮೂಲಕ ಒಯ್ಯಲ್ಪಟ್ಟಿರುವೆನೆಂದು ಶ್ರೀರಾಮನು ಗುರುತಿಸಲೆಂದು ಎಸೆಯುತ್ತಾಳೆ. ಕಾಲುಂಗುರಗಳು ಅತಿ ಪ್ರಾಚೀನ ಕಾಲದಿಂದಲೂ ಬಳಕೆಯಲ್ಲಿದ್ದವು ಎಂಬುದನ್ನು ಇದು ಸೂಚಿಸುತ್ತದೆ.



Click it and Unblock the Notifications