Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಕಾಲು ಉಂಗುರದ ಬಗ್ಗೆ ವೈಜ್ಞಾನಿಕ ದೃಷ್ಟಿಕೋನವೇನು?
ಭಾರತದಲ್ಲಿ ಸ್ತ್ರೀಯರು ಕಾಲುಂಗರ ಧರಿಸಿದರೆ ಅವರನ್ನು ವಿವಾಹಿತರು ಎಂದು ಗುರುತಿಸುತ್ತಾರೆ. ಬಹುತೇಕ ಭಾರತೀಯ ನಾರಿಯರು, ವಿವಾಹವಾದ ಬಳಿಕ ಕಾಲುಂಗುರವನ್ನು ಧರಿಸುತ್ತಾರೆ. ಇದು ಕೇವಲ ಸ್ತ್ರೀಯೋರ್ವಳು ವಿವಾಹಿತೆ ಎಂಬುದರ ಸೂಚಕವಷ್ಟೇ ಅಲ್ಲ, ಇದಕ್ಕೆ ವೈಜ್ಞಾನಿಕ ಕಾರಣವೂ ಕೂಡ ಇದೆ.
ಭಾರತೀಯ ವೇದಶಾಸ್ತ್ರಗಳ ಪ್ರಕಾರ (Vedham, ಅಥವಾ vedam), ಎರಡೂ ಪಾದಗಳಲ್ಲಿ ಕಾಲುಂಗುರಗಳನ್ನು ಧರಿಸುವುದರಿಂದ, ಸ್ತ್ರೀಯರ ಋತುಚಕ್ರವು ನಿಯಮಿತಗೊಂಡು, ಸಮರ್ಪಕವಾದ ಅಂತರದಲ್ಲಿ ಉಂಟಾಗುತ್ತದೆ ಎಂಬ ನಂಬಿಕೆಯಿದೆ.

ಇದು ವಿವಾಹಿತ ಸ್ತ್ರೀಯರಿಗೆ, ಗರ್ಭ ಧರಿಸಲು ಉತ್ತಮ ವೇದಿಕೆಯನ್ನುಂಟು ಮಾಡುತ್ತದೆ. ಮಾತ್ರವಲ್ಲದೇ, ನಿರ್ದಿಷ್ಟ ನರವೊಂದು ಕಾಲಿನ ಎರಡನೆಯ ಬೆರಳನ್ನು ಗರ್ಭಾಶಯಕ್ಕೆ ಸಂಪರ್ಕಿಸುವಾಗ, ಅದು ಹೃದಯದ ಮೂಲಕ ಹಾದುಹೋಗುತ್ತದೆ ಎಂದು ಹೇಳಲಾಗುತ್ತದೆ. ಅದ್ದರಿಂದ, ಕಾಲುಂಗುರಗಳನ್ನು ಯಾವಾಗಲೂ ಬಲ ಮತ್ತು ಎಡ ಪಾದಗಳ ಎರಡನೆಯ ಬೆರಳುಗಳಿಗೇ ಧರಿಸಿರುವುದನ್ನು ನೀವು ಗಮನಿಸಿರಬಹುದು. ಇದು ಗರ್ಭಾಶಯವನ್ನು ನಿಯಂತ್ರಿಸುತ್ತದೆ ಮತ್ತು ಗರ್ಭಾಶಯಕ್ಕೆ ಸಮಪ್ರಮಾಣದ, ಸಂತುಲಿತ ರಕ್ತದೊತ್ತಡವನ್ನು ನಿರ್ವಹಿಸುವುದರ ಮೂಲಕ ಅದರ ಆರೋಗ್ಯವನ್ನು ಕಾಪಾಡುತ್ತದೆ.
ಬೆಳ್ಳಿಯು ಒಂದು ಉತ್ತಮ ವಾಹಕವಾಗಿದ್ದು, ಅದರಿಂದ ಮಾಡಲ್ಪಟ್ಟ ಕಾಲುಂಗುರಗಳು, ಭೂಮಿಯ ಧ್ರುವ ಶಕ್ತಿಗಳನ್ನು ಹೀರಿ ಶರೀರಕ್ಕೆ ವರ್ಗಾಯಿಸುತ್ತವೆ ಹಾಗೂ ತನ್ಮೂಲಕ ಸಂಪೂರ್ಣ ದೈಹಿಕ ವ್ಯವಸ್ಥೆಗೆ ಹೊಸ ಚೈತನ್ಯವನ್ನು ಒದಗಿಸುತ್ತವೆ.
ಮಹಾನ್ ಭಾರತೀಯ ಕಾವ್ಯವಾದ ರಾಮಾಯಣದಲ್ಲಿ ಕಾಲುಂಗುರವು ಮಹತ್ವದ ಪಾತ್ರವಹಿಸುತ್ತದೆ. ಸೀತೆಯು ರಾವಣನಿಂದ ಅಪಹರಿಸಲ್ಪಟ್ಟಾಗ, ಆಕೆಯು ಕಾಲುಂಗುರಗಳನ್ನು (kaniazhi) ಮಾರ್ಗದ ಮೇಲೆ, ಭಗವಾನ್ ಶ್ರೀರಾಮನ ಅವಗಾಹನೆಗಾಗಿ, ಅಪಹರಣಕ್ಕೆ ತಾನು ಗುರಿಯಾಗಿ ಈ ಮಾರ್ಗದ ಮೂಲಕ ಒಯ್ಯಲ್ಪಟ್ಟಿರುವೆನೆಂದು ಶ್ರೀರಾಮನು ಗುರುತಿಸಲೆಂದು ಎಸೆಯುತ್ತಾಳೆ. ಕಾಲುಂಗುರಗಳು ಅತಿ ಪ್ರಾಚೀನ ಕಾಲದಿಂದಲೂ ಬಳಕೆಯಲ್ಲಿದ್ದವು ಎಂಬುದನ್ನು ಇದು ಸೂಚಿಸುತ್ತದೆ.



Click it and Unblock the Notifications