Latest Updates
-
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು
70ರ ವೃದ್ಧನಿಗೆ ಹುಡುಗಿ ಬೇಕಾಗಿದ್ದಾಳೆ..! ಪ್ರತಿ ವಾರ 30 ಸಾವಿರ ಖರ್ಚು ಮಾಡಿ ಜಾಹೀರಾತು..!
ಮದುವೆಯಾಗದೆ ಬಾಳಸಂಗಾತಿ ಇಲ್ಲದೆ ವಯಸ್ಸಿನಲ್ಲಿ ದಿನ ಕೆಳೆಯಬಹುದಂತೆ ಆದರೆ ವೃದ್ಧಾಪ್ಯದಲ್ಲಿ ಕಾಡುವ ಒಂಟಿತನ ಹತ್ತಾರು ಸಮಸ್ಯೆಗೆ ದಾರಿಯಾಗುತ್ತದೆ. ಮದುವೆಯಾಗಿದ್ದರು ಒಂದು ವೇಳೆ ಮಡದಿ ಕೆಲ ವರ್ಷದಲ್ಲಿ ತೀರಿ ಹೋಗಿದ್ದರು ಸಹ ವೃದ್ಧಾಪ್ಯದಲ್ಲಿ ಒಂಟಿತನ ಕಾಡಲಿದೆಯಂತೆ.
ಇಲ್ಲಿಯು ಸಹ ಓರ್ವ ವೃದ್ಧ ಮದುವೆಯಾಗದೆ 70 ವರ್ಷ ದಾಟಿದ್ದು, ಈಗ ಒಂಟಿತನ ಕಾಡಲಾರಂಭಿಸಿದೆ. ಹೀಗಾಗಿ ಆತ ಈಗ ಜೊತೆಗೆ ಯಾರಾದರು ಇರಬೇಕು ಎನಿಸಿ ಗೆಳತಿಯ ಹುಡುಕಲು ಮುಂದಾಗಿದ್ದಾನೆ. ಆತನಿಗೆ 70 ವರ್ಷ ವಯಸ್ಸಾಗಿದ್ದು, ಜೊತೆಗಿರಲು ಸಂಗಾತಿ ಬೇಕು ಎಂದು ಜಾಹೀತಾತು ನೀಡುತ್ತಿದ್ದಾನೆ.

ಹೌದು ಆತ ಈಗ ಏಕಾಂಗಿಯಾಗಿ ಬದುಕಲು ಇಷ್ಟಪಡದೆ ಸಂಗಾತಿ ಬೇಕು ಎಂದು ವಾರಕ್ಕೆ 30 ಸಾವಿರ ರೂಪಾಯಿ ನೀಡಿ ಜಾಹೀರಾತು ನೀಡುತ್ತಿದ್ದಾನೆ. ಅಚ್ಚರಿ ಎಂದರೆ ಆತನಿಗೆ ಪ್ರತ್ಯುತ್ತರದ ಕರೆಗಳು ಹಾಗೂ ಈ ಮೇಲ್ಗಳು ಸಹ ಬಂದಿವೆಯಂತೆ. ಸುಮಾರು 400ಕ್ಕೂ ಹೆಚ್ಚು ಕರೆಗಳು ಹಾಗೂ 50ಕ್ಕೂ ಹೆಚ್ಚು ಈ ಮೇಲ್ಗಳು ಆತನಿಗೆ ಬಂದಿದೆಯಂತೆ.
ಗಿಲ್ಬರ್ಟ್ ಎಂಬಾತ ಅಮೆರಿಕದ ಟೆಕ್ಸಾಸ್ನ ಸ್ವೀಟ್ ವಾಟರ್ ಸಿಟಿಯಲ್ಲಿ ವಾಸವಿದ್ದು, 20 ಅಡಿ ಬಿಲ್ ಬೋರ್ಡ್ ಹಾಕಿಸಿ ಪ್ರತಿ ವಾರ $400 ನೀಡುತ್ತಿದ್ದಾನೆ. ಒಂಟಿಯಾಗಿರುವ ತನಗೆ ಸಂಗಾತಿ ಹುಡುಕುತ್ತಿರುವುದಾಗಿ ಜಾಹೀರಾತಿನಲ್ಲಿ ಹೇಳಲಾಗಿದೆ. ಜೊತೆಗೆ ಆತ ಆಕೆ ಕರೆದ ಕಡೆ ರಿಲೊಕೇಟ್ ಆಗಲು ಸಹ ಸಿದ್ಧನಿದ್ದನಂತೆ. ಆಕೆಗೆ ಇಲ್ಲಿ ಇರಲು ಇಷ್ಟವಿಲ್ಲದಿದ್ದರೆ ಎಲ್ಲಿ ಬೇಕಾದರು ರಿ ಲೊಕೇಟ್ ಆಗಲು ಸಿದ್ಧ ಎಂದು ಬರೆದುಕೊಂಡಿದ್ದಾರೆ.
''ನಾನು ಬಿಲ್ಬೋರ್ಡ್ ಜಾಹೀರಾತು ಹಾಕಿಸಿದ್ದು ಕಂಡು ನೂರಾರು ಮಂದಿ ಕರೆ ಮಾಡುತ್ತಿದ್ದಾರೆ. ಆದರೆ ಅದರಲ್ಲಿ ಬಹುತೇಕರು ಹಣ ಮಾತ್ರ ಕೇಳುತ್ತಿದ್ದಾರೆ. ನಾನು ಜಾಹೀರಾತು ನೀಡಿದ್ದು ಕಂಡು ಅವರು ನಾನು ಶ್ರೀಮಂತ ಎಂದುಕೊಂಡಿದ್ದಾರೆ. ಹೀಗಾಗಿ ನನಗೆ ಬರುವ ಕರೆಗಳನ್ನು ಪರಿಶೀಲಿಸಲು ನಾನು ನನ್ನ ಸ್ನೇಹಿತರಿಗೆ ವರ್ಗಾಯಿಸುತ್ತೇನೆ ಅವರು ವಿಚಾರಣೆ ನಡೆಸುತ್ತಾರೆ'' ಎಂದು ಗಿಲ್ಬರ್ಟ್ ಹೇಳಿಕೊಂಡಿದ್ದಾರೆ.
''ನನಗೆ ಸರಿಯಾದ ವ್ತಕ್ತಿ ಸಿಕ್ಕರೆ ನಾನು ಎಲ್ಲಿಗೆ ಬೇಕಾದರು ಪ್ರಯಾಣಿಸುತ್ತೇನೆ. ನಾನು ಸರಿಯಾದ ವ್ಯಕ್ತಿಯನ್ನು ಭೇಟಿಯಾದರೆ ಅವರ ಕಣ್ಣುಗಳನ್ನು ನೋಡಲು ಮತ್ತು ಅವರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡಲು ನಾನು ಬಯಸುತ್ತೇನೆ. ಯಾರನ್ನಾದರೂ ಭೇಟಿಯಾಗಲು ಯುರೋಪಿಗೆ ಬೇಕಾದರು ನಾನು ಹೋಗುತ್ತೇನೆ'' ಎಂದಿದ್ದಾರೆ. ಆತ 2015 ರಿಂದ ಒಂಟಿಯಾಗಿ ಬದುಕುತ್ತಿರುವುದಾಗಿ ಹೇಳಿಕೊಂಡಿದ್ದಾರೆ.
ಇತ್ತ ಜಾಹೀರಾತು ನೋಡಿ ಕರೆ ಮಾಡುವವರು ಮೊದಲಿಗೆ ಹಣ ಮತ್ತು ಆಸ್ತಿ ಕುರಿತು ವಿಚಾರಣೆ ನಡೆಸುತ್ತಾರಂತೆ. ಅಲ್ಲದೆ ಆಸ್ತಿಯನ್ನ ತಮ್ಮ ಹೆಸರಿಗೆ ವರ್ಗಾಯಿಸಿದರೆ ಮಾತ್ರ ಆತನ ಜೊತೆ ಇರಲು ಬಯಸಿರುವುದಾಗಿಯೂ ಕೆಲವರು ಹೇಳಿಕೊಂಡರಂತೆ. ಆದರೆ ತಾನು ಆಸ್ತಿ, ಹಣದ ಹಿಂದೆ ಬಿದ್ದು ಈ ರೀತಿ ಜಾಹೀರಾತು ನೀಡಿಲ್ಲ, ಕೊನೆಯ ದಿನಗಳಲ್ಲಿ ನನ್ನ ಜೊತೆ ಇರುವವರು ಬೇಕಾಗಿದ್ದಾರೆ ಅಂತವರು ಸಿಗುವವರೆಗೆ ಹುಡುಕುತ್ತೇವೆ ಎಂದಿದ್ದಾರೆ.
ಅಲ್ಲದೆ ಜಾಹೀರಾತು ನೋಡಿ ಆ ಮೂಲಕ ಸಂಪರ್ಕಿಸುವವರು ಹೆಚ್ಚಿನವರು ಕುಟುಂಬ, ಮದುವೆಯಾಗಿ ಮಕ್ಕಳು ಇದ್ದವರು ಆಗಿದ್ದಾರಂತೆ. ಅವರಲ್ಲಿ ಕೆಲವರು ಹಣ ನೀಡಿದರೆ ಅವರ ಜೊತೆ ಮನೆಯಲ್ಲಿ ಬಿಟ್ಟುಕೊಳ್ಳುವುದಾಗಿಯೂ ಆಫರ್ ನೀಡಿದ್ದರಂತೆ. ಇದನ್ನು ತಿರಸ್ಕರಿಸಿರುವುದಾಗಿ ಗಿಲ್ಬರ್ಟ್ ಹೇಳಿಕೊಂಡಿದ್ದಾರೆ.
ನನ್ನ ಬಳಿ ಯಾವ ಆಸ್ತಿ ಇಲ್ಲ. ವಯಸ್ಸಿನಲ್ಲಿ ದುಡಿದ ಹಣ, ಒಂದು ಮನೆ ಇದೆ, ಹಣ ಮಾಡುವ ವಯಸ್ಸು ಸಹ ನನಗಿಲ್ಲ. ನಾನು ಶ್ರೀಮಂತನಲ್ಲ. ಜಾಹೀರಾತು ನೀಡಿದ್ದು ನೋಡಿ ಎಲ್ಲರು ನಾನು ಶ್ರೀಮಂತ ಎಂದುಕೊಂಡು ಕರೆ ಮಾಡುತ್ತಿದ್ದಾರೆ. ಹಣವಿಲ್ಲ ಎಂದು ತಿಳಿದ ತಕ್ಷಣ ಕರೆ ಬಂದ್ ಮಾಡುತ್ತಾರೆ ಎಂದು ಗಿಲ್ಬರ್ಟ್ ಹೇಳಿಕೊಂಡಿದ್ದಾರೆ.



Click it and Unblock the Notifications