Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಎರಡು ವರ್ಷದ ಬಳಿಕ ಅಧಿಕೃತವಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಧನುಷ್ ಜೋಡಿ
ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್ ಮತ್ತು ನಟ-ನಿರ್ದೇಶಕ ಧನುಷ್ ಅಧಿಕೃತವಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಎರಡು ವರ್ಷದ ಹಿಂದೆ ಇಬ್ಬರೂ ಬೇರೆ ಬೇರೆ ಆಗುವ ಕುರಿತು ಮಾಹಿತಿ ಹಂಚಿಕೊಂಡಿದ್ದ ಅವರು ಇತ್ತೀಚಿಗೆ ಅಧಿಕೃತ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಚೆನ್ನೈ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ - ಸೆಕ್ಷನ್ 13 ಬಿ ಅಡಿಯಲ್ಲಿ ಅವರು ಅರ್ಜಿ ಸಲ್ಲಿಸಿದ್ದಾರೆ ತಿಳಿದುಬಂದಿದೆ. 2022ರ ಜನವರಿಯಲ್ಲಿ ಇಬ್ಬರೂ ಬೇರೆಯಾಗುವ ನಿರ್ಧಾರವನ್ನು ಪ್ರಕಟಿಸಿದ್ದರು.

ಸುಮಾರು ಒಂದೂವರೆ ವರ್ಷದ ನಂತರ ಇಬ್ಬರೂ ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರು. ಶೀಘ್ರದಲ್ಲೇ ಅವರ ಪ್ರಕರಣದ ವಿಚಾರಣೆ ನಡೆಯಲಿದೆ. ಕಳೆದ ಎರಡು ವರ್ಷಗಳಿಂದ ಇಬ್ಬರೂ ಬೇರೆ ಬೇರೆಯಾಗಿ ವಾಸವಾಗಿದ್ದರು. ಆದರೆ ಇಬ್ಬರು ಒಟ್ಟಿಗೆ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ.
ಒಮ್ಮೆ ಇಬ್ಬರು ತಮ್ಮ ಇಬ್ಬರು ಮಕ್ಕಳಾದ ಯಾತ್ರಾ ಹಾಗೂ ಲಿಂಗಾ ಅವರ ಶಾಲಾ ಕಾರ್ಯಕ್ರಮವೊಂದರಲ್ಲಿ ಮುಖಾಮುಖಿಯಾಗಿದ್ದರು. ಇದನ್ನು ಹೊರತುಪಡಿಸಿ ಇಬ್ಬರು ಎಲ್ಲಿಯೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರಲಿಲ್ಲ. ಜನವರಿ 17, 2022 ರಂದು ಧನುಷ್, ತಾವಿಬ್ಬರು ಬೇರೆ ಬೇರೆ ಆಗುತ್ತಿರುವ ಕುರಿತು ಆಗಿನ ಟ್ವಿಟರ್ನಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದರು.
"18 ವರ್ಷಗಳ ಒಟ್ಟಿಗೆ ಸ್ನೇಹಿತರು, ದಂಪತಿ, ಪೋಷಕರು ಮತ್ತು ಪರಸ್ಪರ ಹಿತೈಷಿಗಳು. ಪ್ರಯಾಣವು ಬೆಳವಣಿಗೆ, ತಿಳುವಳಿಕೆ, ಹೊಂದಾಣಿಕೆ ಮತ್ತು ಹೊಂದಿಕೊಳ್ಳುವಿಕೆಯಿಂದ ಕೂಡಿತ್ತು. ಇಂದು ನಾವು ನಮ್ಮ ಮಾರ್ಗಗಳು ಪ್ರತ್ಯೇಕಗೊಳ್ಳುವ ಸ್ಥಳದಲ್ಲಿ ನಿಂತಿದ್ದೇವೆ. ಐಶ್ವರ್ಯ ಮತ್ತು ನಾನು ನಾವು ದಂಪತಿಗಳಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ'' ಎಂದು ಬರೆದುಕೊಂಡಿದ್ದರು.
ಇದೇ ರೀತಿಯ ಪೋಸ್ಟ್ ಅನ್ನು ಐಶ್ವರ್ಯಾ ತಮ್ಮ ಸಾಮಾಜಿಕ ಮಾಧ್ಯಮ ಪುಟದಲ್ಲಿ ಹಂಚಿಕೊಂಡಿದ್ದರು. ಧನುಷ್ ಮತ್ತು ಐಶ್ವರ್ಯ ಅವರು ಕ್ರಮವಾಗಿ 21 ಮತ್ತು 23 ವರ್ಷದವರಾಗಿದ್ದಾಗ 2004 ರಲ್ಲಿ ಅದ್ಧೂರಿ ವಿವಾಹವಾದರು. ಇಬ್ಬರೂ ಈಗ ಯಾತ್ರಾ ಮತ್ತು ಲಿಂಗ ಎಂಬ ಇಬ್ಬರು ಗಂಡುಮಕ್ಕಳಿಗೆ ತಂದೆ ತಾಯಿಯಾಗಿದ್ದಾರೆ.
ಅವರ ಪ್ರತ್ಯೇಕತೆಯ ನಂತರ, ಧನುಷ್ ಮತ್ತು ಐಶ್ವರ್ಯಾ ತಮ್ಮ ವೃತ್ತಿಜೀವನದ ಮೇಲೆ ಕೇಂದ್ರೀಕರಿಸಿದ್ದಾರೆ. ಐಶ್ವರ್ಯ ಅವರು 'ಲಾಲ್ ಸಲಾಮ್' ಮೂಲಕ ನಿರ್ದೇಶಕಿಯಾಗಿ ಮೊದಲ ಸಿನಿಮಾ ನಿರ್ದೇಶಿಸಿದರು. ರಜನಿಕಾಂತ್ ಈ ಸಿನಿಮಾದಲ್ಲಿ ಕಾಣಿಸಿಕೊಂಡರು. ಈ ಚಿತ್ರದ ಕುರಿತು ನಟ ಧನುಷ್ ಸಹ ಪ್ರತಿಕ್ರಿಯಿಸಿದ್ದರು.
ಇತ್ತೀಚೆಗೆ ಅನಿರುದ್ಧ್ ರವಿಚಂದರ್ ವಿಚಾರದ ಬಗ್ಗೆ ಮಾತನಾಡುತ್ತಾ ಧನುಷ್ ಹೆಸರನ್ನು ಐಶ್ವರ್ಯ ಪ್ರಸ್ತಾಪಿಸಿದ್ದರು. ಅನಿರುದ್ಧ್ನ ಸಕ್ಸಸ್ ಜರ್ನಿ ನೋಡಿದಾಗ, ನನಗೆ ತುಂಬ ಖುಷಿಯಾಗುತ್ತದೆ. ಆತ ನನ್ನ ಸಂಬಂಧಿ. ಆದರೂ ಆತ ಮ್ಯೂಸಿಕ್ ಡೈರೆಕ್ಟರ್ ಆಗುವುದಕ್ಕೆ ನಾನು ಕಾರಣಳಲ್ಲ. ಅನಿರುದ್ಧ್ ಸಿನಿಮಾರಂಗಕ್ಕೆ ಬಂದಿದ್ದೇ ಧನುಷ್ ಕಡೆಯಿಂದ. ಧನುಷ್ಗೆ ಪ್ರತಿಭೆಗಳನ್ನು ಗುರುತಿಸುವುದು ಗೊತ್ತಿದೆ ಎಂದು ಹೊಗಳಿದ್ದರು. ಹೀಗಾಗಿ ಇಬ್ಬರೂ ಮತ್ತೆ ಒಂದಾಗಬೇಕು ಎಂದು ಆಪ್ತರು, ಅಭಿಮಾನಿಗಳು ಬಯಸಿದ್ದರು. ಆದರೆ ಈಗ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವ ಮಾಹಿತಿ ಬಹಿರಂಗವಾಗಿದೆ.
ಎರಡು ವರ್ಷದಿಂದ ಬೇರೆಯಾಗಿಯೇ ವಾಸವಿದ್ದ ಇವರು ಮತ್ತೆ ಒಂದಾಗುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿದ್ದವು. ಆದರೆ ಅಂತಿಮವಾಗಿ ಇಬ್ಬರೂ ಬೇರೆಯಾಗುವ ನಿರ್ಧಾರ ಮಾಡಿದ್ದಾರೆ.
ಇನ್ನು ಲೇಡಿ ಸೂಪರ್ ಸ್ಟಾರ್ ನಯನತಾರ ಮತ್ತು ವಿಘ್ನೇಶ್ ಶಿವನ್ ಮದುವೆಯಾಗಲು ಸಹ ನಟ ಧನುಷ್ ಕಾರಣವಂತೆ. ನಿರ್ದೇಶಕ ವಿಘ್ನೇಶ್ಗೆ ರೌಡಿ ಧಾನ್ ಸಿನಿಮಾ ಕಥೆಯನ್ನು ನಯನತಾರಾ ಅವರಿಗೆ ಹೇಳುವಂತೆ ಧನುಷ್ ಹೇಳಿದ್ದರಂತೆ. ಇಲ್ಲಿಂದಲೇ ಅವರಲ್ಲಿ ಪ್ರೀತಿ ಮೂಡಿ ಇಬ್ಬರು ಬಳಿಕ ಮದುವೆಯಾಗಿದ್ದರು.



Click it and Unblock the Notifications
