Latest Updates
-
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು
ಕ್ಷುಲ್ಲಕ ವಿಷಯಗಳಿಗೆ ಮುರಿಯದಿರಲಿ ಮಧುರ ಸಂಬಂಧ!
ಹೌದು, ನಿಮ್ಮ ದಾಂಪತ್ಯ ಕೆಲವೊಮ್ಮೆ ಸಮಸ್ಯೆಗೆ ಸಿಕ್ಕಿಕೊಂಡಾಗ ಕೆಲವೊಂದು ಪ್ರಶ್ನೆಗಳನ್ನು ನಾವು ಕೇಳಿಕೊಳ್ಳಬೇಕಾಗುತ್ತದೆ. ಏಕೆಂದರೆ ಇದು ನಾವು ಸಮಸ್ಯೆಯನ್ನು ಪರಿಪೂರ್ಣವಾಗಿ ನೋಡಬೇಕಾದ ಸಮಯವಾಗಿರುತ್ತದೆ. ದಾಂಪತ್ಯ ಎನ್ನುವುದು ಒಂದು ಭಾವನಾತ್ಮಕ ಬಂಡವಾಳವಾಗಿರುತ್ತದೆ. ಆದರೆ ಯಾವಾಗ ಇದು ಬಂಡವಾಳವನ್ನು ತಿರುಗಿ ನೀಡಲಿಲ್ಲವಾದರೆ, ಆಗ ಯಾರನ್ನು ನಿಂದಿಸಿ ಪ್ರಯೋಜನವಿಲ್ಲ.
ಅದರ ಜೊತೆಗೆ ಯಾವ ಸಂಬಂಧವು ಸಹ ಏರು-ಪೇರುಗಳಿಂದ ಮುಕ್ತವಾಗಿಲ್ಲ ಎಂಬುದನ್ನು ನೀವು ತಿಳಿದುಕೊಳ್ಳಬೇಕು. ಒಂದು ಉತ್ತಮ ಸಂಬಂಧವು ಸಹ ಇದಕ್ಕೆ ಹೊರತಲ್ಲ. ನಿಮ್ಮ ಸಂಬಂಧ ಪರಿಪೂರ್ಣವಾಗಿರಬೇಕು ಎಂದು ಕೋರಿಕೊಳ್ಳುವುದು ಈ ನಿಟ್ಟಿನಲ್ಲಿ ಅತಿಯಾಸೆಯಾಗುತ್ತದೆ! ಆದರೆ ನಿಮ್ಮ ಸಂಬಂಧವನ್ನು ಕಾಲಕ್ರಮೇಣ ಒಳ್ಳೆಯ ದಾರಿಯಲ್ಲಿ ಸಾಗುವಂತೆ ಮಾಡಲು ನೀವು ಪ್ರಯತ್ನಿಸಬಹುದು. ಹಾಗಾದರೆ ನಿಮ್ಮ ದಾಂಪತ್ಯ ಸಮಸ್ಯೆಯಲ್ಲಿ ಸಿಕ್ಕಿಕೊಂಡಾಗ ನೀವು ಯಾವ ಪ್ರಶ್ನೆಗಳನ್ನು ಕೇಳಿಕೊಳ್ಳಬೇಕಾಗುತ್ತದೆ? ಕಪಿ ಚೇಷ್ಟೆ ಮೂಲಕ ಮನದ ಕನ್ಯೆಗೆ ಭಯ ಹುಟ್ಟಿಸಬೇಡಿ!

ಹೌದು ನಿಮ್ಮ ಸಂಬಂಧದಲ್ಲಿ ಎಲ್ಲವೂ ಸರಿಯಾಗಿಲ್ಲವೆಂದಾದರೆ, ಆಗ ನೀವು ಪರಿಸ್ಥಿತಿಯನ್ನು ವಿಶ್ಲೇಷಣೆ ಮಾಡಬೇಕು ಮತ್ತು ಅಲ್ಲಿರುವ ಕೊರತೆಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು. ಎಲ್ಲಿ ನಿಮ್ಮ ಸಂಬಂಧ ಶಿಥಿಲವಾಗಿದೆಯೋ, ಆ ಭಾಗವನ್ನು ಸರಿಪಡಿಸಲು ನೀವು ತುರ್ತು ಕ್ರಮ ಕೈಗೊಳ್ಳಬೇಕಾಗುತ್ತದೆ. ಆಗ ನಿಮ್ಮ ಮದುವೆ ದೀರ್ಘಾಯಸ್ಸನ್ನು ಹೊಂದುತ್ತದೆ. ಒಂದು ವಿಚಾರ ನೆನಪಿಡಿ ಪ್ರಪಂಚದಲ್ಲಿ ಪ್ರಯತ್ನ ಪಡದೆ ಯಾವುದೇ ಅಂಶಗಳು ಸರಿಹೋಗುವುದಿಲ್ಲ. ಅದಕ್ಕೆ ದಾಂಪತ್ಯವು ಸಹ ಹೊರತಲ್ಲ.
ನಿಮ್ಮ ದಾಂಪತ್ಯ ಸಮಸ್ಯೆಯಲ್ಲಿದ್ದಾಗ ಕೇಳಿಕೊಳ್ಳಬೇಕಾದ ಪ್ರಶ್ನೆಗಳು ಯಾವುವು?
ನಾನು ದಾಂಪತ್ಯಕ್ಕಾಗಿ ಅಗತ್ಯ ಸಮಯವನ್ನು ನೀಡುತ್ತಿದ್ದೀನಾ? ಇದು ಮದುವೆ ಆದ ಪ್ರತಿಯೊಬ್ಬರು ಕೇಳಿಕೊಳ್ಳಬೇಕಾದ ಒಂದು ಪ್ರಶ್ನೆಯಾಗಿರುತ್ತದೆ. ಹೌದು, ದಾಂಪತ್ಯದಲ್ಲಿ ಸಮಯಕ್ಕೆ ತುಂಬಾ ಮಹತ್ವವಿದೆ. ನೀವು ನಿಮ್ಮ ಸಂಗಾತಿಯ ಜೊತೆಗೆ ಅಗತ್ಯ ಸಮಯವನ್ನು ಕಳೆಯುತ್ತಿಲ್ಲ ಎಂದಾದಲ್ಲಿ, ನಿಮ್ಮ ನಡುವೆ ಭಿನ್ನಾಭಿಪ್ರಾಯಗಳು ಹೆಚ್ಚು ತಲೆದೋರುತ್ತವೆ. ಆಗ ನಿಮ್ಮ ನಡುವೆ ಅಂತರ ಹೆಚ್ಚಾಗುತ್ತ ಹೋಗುತ್ತದೆ ಎಂಬುದನ್ನು ತಿಳಿದುಕೊಳ್ಳಿ. ಮಾತು ಬೆಳ್ಳಿ ಮೌನ ಬಂಗಾರ, ಇದು ಸುಖಿ ಸಂಸಾರಕ್ಕೆ ರಹದಾರಿ!
ನಾನು ಗಮನಹರಿಸುತ್ತಿದ್ದೇನೆಯೇ ಮತ್ತು ಆಸಕ್ತಿ ತೋರುತ್ತಿದ್ದೀನಾ?
ನೀವು ಅತ್ಯಂತ ಪ್ರಮುಖವಾದ ಘಟನೆಗಳನ್ನು ಮತ್ತು ದಿನಗಳನ್ನು ನೆನಪಿನಲ್ಲಿಟ್ಟುಕೊಂಡಿರುವಿರಾ? ವಿಶೇಷ ಸಂದರ್ಭಗಳಲ್ಲಿ ನಿಮ್ಮ ಸಂಗಾತಿಗಾಗಿ ನೀವು ಕೆಲವೊಂದು ಉಡುಗೊರೆಗಳನ್ನು ತಂದು ಕೊಟ್ಟಿರುವಿರಾ? ನಿಮ್ಮ ಸಂಗಾತಿಯ ಬಯಕೆಗಳ ಕುರಿತಾಗಿ ನೀವು ಆಸಕ್ತಿಯನ್ನು ತೋರಿಸುತ್ತಿರುವಿರಾ? ನಿಮ್ಮ ಸಂಗಾತಿಯ ಸಾಧನೆಗಗಳನ್ನು ನೀವು ಅಭಿನಂದಿಸುತ್ತಿದ್ದೀರಾ? ಈ ಎಲ್ಲಾ ಪ್ರಶ್ನೆಗಳಿಗೆ ನಿಮ್ಮ ಉತ್ತರ ಇಲ್ಲಾ ಎಂದಾದಲ್ಲಿ, ನಿಮ್ಮ ದಾಂಪತ್ಯವನ್ನು ನೀವೇ ನಿಮ್ಮ ಕೈಯಾರೆ ಹಾಳು ಮಾಡಿಕೊಳ್ಳುತ್ತಿದ್ದೀರಾ ಎಂದು ಅರ್ಥ. ಇದು ನಿಮ್ಮ ಮತ್ತು ನಿಮ್ಮ ಸಂಗಾತಿಯ ನಡುವೆ ಅಂತರವನ್ನು ಹೆಚ್ಚಿಸುತ್ತದೆ ಎಚ್ಚರ. ವಿಚ್ಛೇದನದ ವಿಷಯ ಬಂದಾಗ ದಂಪತಿಗಳು ಅದೇಕೆ ಹಿಂಜರಿಯುತ್ತಾರೆ?
ನೀವು ನಿಮ್ಮ ಸಂಗಾತಿಯನ್ನು ಇತರರ ಜೊತೆ ಹೋಲಿಕೆ ಮಾಡುತ್ತಿದ್ದೀರಾ?
ಇದು ಸಹ ದಾಂಪತ್ಯದಲ್ಲಿರುವವರು ಕೇಳಿಕೊಳ್ಳಬೇಕಾದ ಪ್ರಶ್ನೆಗಳಲ್ಲಿ ಒಂದಾಗಿದೆ. ನೀವು ಅವರನ್ನು ಇತರರೊಂದಿಗೆ ಅಥವಾ ನಿಮ್ಮ ಮಾಜಿ... ಜೊತೆಗೆ ಹೋಲಿಕೆ ಮಾಡುತ್ತಿದ್ದಲ್ಲಿ ಖಂಡಿತ ಇದರಿಂದ ನಿಮ್ಮ ಸಂಗಾತಿ ನೊಂದು ಕೊಳ್ಳುತ್ತಾರೆ. ಅದು ಖಂಡಿತ ಅವರನ್ನು ಘಾಸಿಗೊಳಿಸುತ್ತದೆ. ಪ್ರತಿಯೊಬ್ಬರು ಜೀವನದಲ್ಲಿ ಅನನ್ಯ. ಅವರ ರೀತಿ ಇನ್ನೊಬ್ಬರಿಲ್ಲ ಎಂಬುದನ್ನು ತಿಳಿದುಕೊಳ್ಳಿ. ಪ್ರತಿಯೊಬ್ಬರು ತಮ್ಮನ್ನು ಯಾರಾದರು ಹೊಗಳಲಿ ಎಂದು ಭಾವಿಸುತ್ತಾರೆ, ಟೀಕೆ ಮಾಡಲಿ ಎಂದು ಬಯಸುವುದಿಲ್ಲ. ಆದ್ದರಿಂದ ನೀವು ನಿಮ್ಮ ಸಂಗಾತಿಯನ್ನು ನೋಯಿಸಿದ್ದೀರಾ ಎಂದು ಒಮ್ಮೆ ನಿಮ್ಮನ್ನು ನೀವೇ ಕೇಳಿಕೊಳ್ಳಿ.



Click it and Unblock the Notifications


