Latest Updates
-
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್!
ಪ್ರೀತಿಸಿದ ಹುಡುಗಿಯ ಶವಕ್ಕೆ ತಾಳಿ ಕಟ್ಟಿದ ಅಸ್ಸಾಂ ಯುವಕ: ಮನಮಿಡಿಯುವ ಲವ್ ಸ್ಟೋರಿ
ಕೆಲವೊಂದು ಘಟನೆ ನೋಡುವಾಗ ಛೇ, ವಿಧಿಯೇ ನೀನೆಷ್ಟು ಕ್ರೂರಿ ಎಂದನಿಸುವುದು. ಅಂಥದ್ದೇ ಮನಕಲುಕುವ ವೀಡಿಯೋ ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದೆ. ಆ ಪ್ರೇಮಿ ತನ್ನ ಗೆಳತಿಯ ಕೊನೆಯಾಸೆ ನೆರವೇರಿಸಲು ಆಕೆಯ ಪಾರ್ಥೀವ ಶರೀರಕ್ಕೆ ತಾಳಿ ಕಟ್ಟಿ, ಆಕೆಗೆ ಮುತ್ತೈದೆ ಬೀಳ್ಗೊಡೆಗೆ ನೀಡಿರುವ ಘಟನೆ ಮನಕಲುಕುವಂತಿದೆ. '
ಪ್ರೀತಿಯೆಂದರೆ ಬರೀ ಆಕರ್ಷಣೆಯಲ್ಲ, ನಿಜವಾದ ಪ್ರೀತಿಗೆ ಸಾವಿಲ್ಲ, ಸಾವಿನಿಂದಲೂ ಪ್ರೀತಿಯನ್ನು ದೂರ ಮಾಡಲು ಸಾಧ್ಯವಿಲ್ಲ ಎಂಬುವುದಕ್ಕೆ ಉದಾಹರಣೆ ಈ ಜೋಡಿ...

ಇದನ್ನು ಅಸ್ಸಾಂನಲ್ಲಿ ನಡೆದಿರುವ ಸುಂದರ ಪ್ರೇಮ ಕಾವ್ಯ ಅಂತ ಹೇಳುವುದೋ, ವಿಧಿಯ ಕ್ರೂರ ಆಟ ಅನ್ನುವುದೋ ಗೊತ್ತಾಗಲ್ಲ.. ಹೇ ದೇವ.... ಈ ಜೋಡಿಯನ್ನು ಬೇರೆ ಮಾಡಿ ನಿನಗೇನು ಸಿಕ್ತು? ಎಂದು ಕೇಳುವಿರಿ.
ಮೊಯಿರ್ಗಾಂವ್ ಆತನ ಹೆಸರು ಬಿಟುಪಾನ್ ತಮುಲಿ, ಆಕೆ ಕೊಸುವಾದ ಪ್ರಾರ್ಥನಾ ಬೋರಾ. ಇಬ್ಬರು ತುಂಬಾನೇ ಪ್ರೀತಿಸುತ್ತಿದ್ದರು, ಇವರ ಪ್ರೀತಿ ವಿಷಯ ಮನೆಯವರಿಗೂ ತಿಳಿದಿತ್ತು. ಇಬ್ಬರು ಮದುವೆಯಾಗಲೂ ಕೂಡ ತೀರ್ಮಾನ ಕೂಡ ಮಾಡಿದ್ದರು. ಆದರೆ ವಿಧಿ ಅವರ ಬದುಕಿನಲ್ಲಿ ಬೇರೆಯದ್ದೇ ತೀರ್ಮಾನಿಸಿತ್ತು. ಇದ್ದಕ್ಕಿದ್ದಂತೆ ಪ್ರಾರ್ಥನಾಗೆ ಅನಾರೋಗ್ಯ ಉಂಟಾಯ್ತು. ಗುವಾಹಟಿಯ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗಲಿಲ್ಲ.
ಆಕೆಯ ಅಂತ್ಯಕ್ರಿಯೆಗೆ ಬಂದ ಪ್ರೇಮಿ ಬಿಟುಪಾನ್ ಆಕೆಯನ್ನು ಮದುವೆಯಾಗುವುದಾಗಿ ಹೇಳುತ್ತಾನೆ, ಅದನ್ನು ಕೇಳಿದವರಿಗೆ ಆಶ್ಚರ್ಯವಾಗುತ್ತೆ. ಆತ ಆಕೆ ನನ್ನನ್ನು ಮದುವೆಯಾಗಬೇಕೆಂದು ಬಯಸಿದ್ದಳು, ಅವಳ ಕೊನೆಯಾಸೆ ಈಡೇರದೆ ನಾನು ಕಳುಹಿಸಲ್ಲ ಅಂತ ಹಠ ಹಿಡಿಯುತ್ತಾನೆ. ಈ ಪ್ರೇಮಿಯ ನೋವು ನೋಡಿ ಮನೆಯವರೂ ಒಪ್ಪಿಗೆ ಸೂಚಿಸುತ್ತಾರೆ, ಆತ ಆಕೆಯ ದೇಹಕ್ಕೆ ತಾಳಿ ಕಟ್ಟಿದ್ದಾನೆ. ಅವಳ ಹಣೆಗೆ ಸಿಂಧೂರ ಇಟ್ಟು ಮುತ್ತೈದೆಯಂತೆ ಕಳುಹಿಸಿಕೊಟ್ಟಿದ್ದಾನೆ.
ಅಷ್ಟು ಮಾತ್ರವಲ್ಲ ಎಂದೆಂದಿಗೂ ಆಕೆಯೇ ನನ್ನ ಹೆಂಡತಿ, ನಾನು ಬೇರೆ ಮದುವೆಯಾಗುವುದಿಲ್ಲ ಎಂದಿದ್ದಾನೆ..... ಅವನಂಥ ಪ್ರೇಮಿ ಪಡೆದ ಅವಳೇ ಅದೃಷ್ಟವಂತಳು....



Click it and Unblock the Notifications
