Latest Updates
-
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು
ಪತಿ-ಪತ್ನಿ ಅನುಬಂಧ - ಮುರಿಯದಿರಲಿ ಬಾಂಧವ್ಯ
ಮನುಷ್ಯನ ಜೀವನದಲ್ಲಿ ಸಂಬಂಧಕ್ಕೆ ಅದರದೇ ಆದ ಅರ್ಥವಿದೆ. ತಂದೆ ತಾಯಿ ಹಾಗೂ ಮಕ್ಕಳ ನಡುವಿನ ಸಂಬಂಧ, ಒಡನಾಡಿಗಳ ಸ್ನೇಹವೆಂಬ ಪವಿತ್ರ ಸಂಬಂಧ, ಪ್ರೇಮಿಗಳ ಪ್ರೀತಿಯ ಸಂಬಂಧ, ಗಂಡ ಹೆಂಡತಿಯರ ನಡುವಿನ ಅನುಬಂಧ ಹೀಗೆ ನಮ್ಮ ಜೀವನದಲ್ಲಿ ಸಂಬಂಧಗಳು ಬಹು ಮುಖ್ಯ ಪಾತ್ರವನ್ನು ವಹಿಸುತ್ತವೆ. ಇವೆಲ್ಲಕ್ಕಿಂತಲೂ ಮಿಗಿಲಾಗಿ ಸಂಬಂಧವನ್ನು ಬೆಳೆಸುವುದಕ್ಕಿಂತ ಅದನ್ನು ಉಳಿಸುವುದು ಅತೀ ಮುಖ್ಯವಾದದು.
ಅದರಲ್ಲೂ ದಾಂಪತ್ಯ ಎನ್ನುವುದು ಸುಂದರ ಕಾವ್ಯ. ಇಲ್ಲಿ ಗಂಡ ಹೆಂಡತಿ ಪದಗಳಿದ್ದಂತೆ. ಸರಿಯಾಗಿ ಒಂದೊಂದು ಪದವನ್ನು ಜೋಡಿಸಿದಾಗ ಸುಂದರ ಕಾವ್ಯವಾಗಲು ಸಾಧ್ಯ. ಆದರೆ ಗಂಡ ಹೆಂಡತಿಯರ ನಡುವೆಯೇ ನಂಬಿಕೆ ದ್ರೋಹವಾದರೆ ದಾಂಪತ್ಯಕ್ಕೆ ಅರ್ಥವೆಲ್ಲಿ ಅಲ್ಲವೇ? ಹೌದು ದೀರ್ಘಾವಧಿಯ ಸಂಬಂಧಗಳನ್ನು ಕಾಯ್ದುಕೊಳ್ಳುವಲ್ಲಿ ಇಬ್ಬರು ಸಂಗಾತಿಗಳು ನಿರಂತರ ಪ್ರಯತ್ನ ಮತ್ತು ಹೊಂದಾಣಿಕೆಯನ್ನು ತೋರಬೇಕಾಗುತ್ತದೆ, ಅದರಲ್ಲಿಯೂ ತಮ್ಮ ಸಂಗಾತಿಯನ್ನು ಅರ್ಥಮಾಡಿಕೊಂಡು ಜೀವನ ನಡೆಸುವುದೇ ಇಲ್ಲಿ ಮುಖ್ಯಪಾತ್ರವಹಿಸುತ್ತದೆ

ಪ್ರಾಮಾಣಿಕತೆ
ಸಂಬಂಧದಲ್ಲಿ ಪ್ರಾಮಾಣಿಕತೆಯನ್ನು ಹೊಂದಿರುವ ನಿಮ್ಮ ಸಂಗಾತಿಯ ಬಗ್ಗೆ ಇನ್ನೇನು ತಾನೇ ಹೇಳಲಾದೀತು. ಸಂಬಂಧದ ಬುನಾದಿಯೇ ಪ್ರಾಮಾಣಿಕತೆ. ನಿಮ್ಮ ಸಂಬಂಧವನ್ನು ಶಾಶ್ವತಗೊಳಿಸುವ ಮೊದಲು ಆತ ಅಥವಾ ಆಕೆಯು ನಿಮ್ಮೆಡೆಗೆ ಪ್ರಾಮಾಣಿಕತೆಯನ್ನು ಹೊಂದಿದ್ದಾರೆಯೇ ಎಂಬುದನ್ನು ಅರಿತುಕೊಳ್ಳಿ.
ಸಂಶಯ
ಸಂಶಯ ಎನ್ನುವುದು ಸಂಬಂಧದಲ್ಲಿ ಹುಳಿ ಹಿಂಡಿದಂತೆ. ನಿಮ್ಮ ಸಂಗಾತಿಯನ್ನು ನೀವು ಹೆಚ್ಚು ಸಂಶಯಿಸುತ್ತಿದ್ದೀರಿ ಎಂದಾದಲ್ಲಿ ಇದು ಸಂಬಂಧವನ್ನು ಹಾಳುಮಾಡುತ್ತದೆ ಮತ್ತು ಮಾನಸಿಕ ನೆಮ್ಮದಿಯನ್ನು ಹಾಳುಗೆಡವುತ್ತದೆ. ಆದ್ದರಿಂದ ಸಂಶಯ ಆದಷ್ಟು ನಿಮ್ಮ ಸಂಬಂಧದಲ್ಲಿ ಬರದಂತೆ ನೋಡಿಕೊಳ್ಳಿ. ನಿಮ್ಮ ಪತ್ನಿ ಎದುರು ಇಂತಹ ಗುಟ್ಟುಗಳನ್ನು ರಟ್ಟುಮಾಡದಿರಿ!
ವಾದ, ಪ್ರತಿವಾದಗಳಿಗೆ ಆಸ್ಪದ ನೀಡಬೇಡಿ
ಪ್ರತಿಯೊಂದು ಸಂಬಂಧದಲ್ಲಿ ಏರಿಳಿತಗಳು ಇರುವುದು ಸಹಜ. ವಾದ ಮತ್ತು ಪ್ರತಿ ವಾದಗಳು ಇಲ್ಲದಿದ್ದಲ್ಲಿ ಸಂಬಂಧದಲ್ಲಿ ಸ್ವಾರಸ್ಯವೇ ಇರುವುದಿಲ್ಲ. ಎರಡು ಭಿನ್ನ ವಾತಾವರಣದಲ್ಲಿ ಬೆಳೆದ ಗಂಡು- ಹೆಣ್ಣುಗಳು ಒಟ್ಟಿಗೆ ಜೀವಿಸುವಾಗ ಇಂತಹ ಸನ್ನಿವೇಶಗಳು ಉದ್ಭವಿಸುವುದು ಸಹಜ. ಈ ವಾದ ಪ್ರತಿವಾದಗಳು ಯಾವಾಗ ತಮ್ಮ ಗಡಿಯನ್ನು ದಾಟುತ್ತವೆಯೋ, ಆಗ ನೊಂದ ಮನಸ್ಸೊಂದು ಇದರಿಂದ ನೋವನ್ನು ಅನುಭವಿಸುತ್ತದೆ. ಆಗ ಸಹಜವಾಗಿ ಆ ಸಂಬಂಧ ತನ್ನ ಜೀವವನ್ನು ಕಳೆದುಕೊಳ್ಳುವ ಹಂತಕ್ಕೆ ಬಂದು ನಿಲ್ಲುತ್ತದೆ. ಹಾಗಾಗಿ ಇಂತಹ ವಾದ ಪ್ರತಿ ವಾದಗಳಿಗೆ ಆಸ್ಪದ ನೀಡಬೇಡಿ
ಸುಳ್ಳು
ಕೆಲವೊಂದು ಸಂಕಷ್ಟ ಪರಿಸ್ಥಿತಿಗಳಿಂದ ಬಿಡುಗಡೆ ಹೊಂದಲು ಜೋಡಿಗಳು ಸುಳ್ಳು ಹೇಳುತ್ತಾರೆ. ಆದರೆ ಈ ಸುಳ್ಳುಗಳೇ ಮುಂದೆ ಯುದ್ಧಕ್ಕೆ ಕಾರಣವಾಗುವುದು ಮತ್ತು ಒಂದು ಮಧುರವಾದ ದಾಂಪತ್ಯ ಜೀವನ ಕೊನೆಗೊಳ್ಳಲು ಕಾರಣವಾಗುವುದು. ಹಾಗಾಗಿ ಸಂಗಾತಿ ಜೊತೆ ಸುಳ್ಳಿಗೆ ಅವಕಾಶ ಮಾಡಿಕೊಡಬೇಡಿ.



Click it and Unblock the Notifications
