Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಸಂಗಾತಿಯ ಮೋಸ ನೆನೆದು ನೋವು ಪಡುವುದಕ್ಕಿಂತ ಹೀಗೆ ಮಾಡುವುದೇ ವಾಸಿ
ನಾವು ನಿಂತಿರುವ ನೆಲ ಇದ್ದಕ್ಕಿದ್ದಂತೆ ನಡುಗಲಾರಂಭಿಸಿದರೆ ಎಲ್ಲಿಗೆ ಓಡುವುದು, ಏನು ಮಾಡುವುದು ಎಂದು ದಿಕ್ಕೇ ತೋಚುವುದಿಲ್ಲ ಅಲ್ವಾ? ಅದೇ ರೀತಿ ವೈವಾಹಿಕ ಜೀವನದಲ್ಲಿ ಸಂಗಾತಿ ಮೋಸ ಮಾಡಿದರೆ ದಿಕ್ಕೇ ತೋಚಲ್ಲ.

ಅಷ್ಟೊಂದು ನಂಬಿದ, ನಾನು ಅಷ್ಟೊಂದು ಪ್ರೀತಿಸುತ್ತಿರುವ ವ್ಯಕ್ತಿ ನನಗೆ ಮೋಸ ಮಾಡುತ್ತಾರಾ? ಎಂದು ಒಂದು ಕ್ಷಣ ಅನಿಸಿ ನಾನು ಕೇಳಿದ್ದು, ಕಂಡದ್ದು ಎಲ್ಲಾ ಸುಳ್ಳಾಗಲಿ ದೇವರೇ ಎಂದು ಪ್ರಾರ್ಥಿಸುತ್ತೇವೆ.
ಆದರೆ ಕಟು ಸತ್ಯ ಒಪ್ಪಿಕೊಳ್ಳಲೇಬೇಕಾಗುತ್ತದೆ, ನನ್ನವನು/ನನ್ನವಳು ನನಗೆ ಮೋಸ ಮಾಡಿ ಬೇರೆ ಕಡೆ ಆಕರ್ಷಿತರಾಗಿದ್ದಾನೆ/ಳೆ ಎಂದು ತಿಳಿದಾಗ ಮನಸ್ಸಿಗೆ ನೋವು ಎನ್ನುವುದಕ್ಕಿಂತ ದೊಡ್ಡ ಆಘಾತವೇ ಉಂಟಾಗುವುದು. ಬೇರೆ ವ್ಯಕ್ತಿಗಾಗಿ ನನ್ನ ಬಿಟ್ಟು ಹೋಗುತ್ತಾರಾ?
ನನ್ನ ಸಂಸಾರದಿಂದ ಆ ವ್ಯಕ್ತಿ ದೂರಾಗುತ್ತಾರಾ ಎಂದು ನೆನಸಿಕೊಂಡಷ್ಟು ತುಂಬಾನೇ ಭಯಾನಕ ಅನಿಸುವುದು. ಇನ್ನು ಯಾರಿಗೋಸ್ಕರ ಬದುಕಬೇಕು? ಹೇಗೆ ಬದುಕಬೇಕು? ನನ್ನ ಬದುಕಿಗೆ ಅರ್ಥವೇನು ಎಂದೆಲ್ಲಾ ಅನಿಸಲಾರಂಭಿಸುತ್ತದೆ. ಕೆಲವರು ಈ ಕಾರಣಕ್ಕೆ ಖಿನ್ನತೆಗೆ ಜಾರುತ್ತಾರೆ.
ಆದರೆ ಒಂದು ವಿಷಯ ನೆನಪಿಟ್ಟುಕೊಳ್ಳಿ ನೀವು ಕುಗ್ಗಿದಷ್ಟೂ ನಿಮ್ಮನ್ನು ಬಿಟ್ಟು ಹೋದ, ನಿಮಗೆ ಮೋಸ ಮಾಡಿದ ವ್ಯಕ್ತಿ ಅವರು ಮಾಡಿದ್ದು ಎಂದು ಸರಿ ಅನಿಸುವುದು.
ಅದರ ಬದಲಿಗೆ ನಿಮ್ಮತ್ತ ನೀವು ಗಮನ ನೀಡಿ, ಈ ಟಿಪ್ಸ್ ನಿಮ್ಮ ನೋವು ಮರೆಯಲು ಹಾಗೂ ಆತ್ಮವಿಶ್ವಾಸ ಹೆಚ್ಚಲು ಸಹಕಾರಿಯಾದೀತು ನೋಡಿ:

ನಿಮ್ಮನ್ನು ಪ್ರೀತಿಸಿ
ನಿಮ್ಮನ್ನು ನೀವು ಪ್ರೀತಿಸಿ, ಕಳೆದ ಹೋದ ಬಗ್ಗೆ ಚಿಂತೆ ಮಾಡದೆ ಭವಿಷ್ಯ ಬಗ್ಗೆ ಚಿಂತಿಸಿ, ಏನು ಮಾಡಬೇಕೆಂದು ಆಲೋಚಿಸಿ, ನಿಮ್ಮಲ್ಲಿ ಒಂದು ಬಗೆಯ ಆತ್ಮವಿಶ್ವಾಸ ಮೂಡುತ್ತದೆ. ಇಷ್ಟು ಆ ವ್ಯಕ್ತಿಗಾಗಿ ನಿಮ್ಮ ಎಷ್ಟೋ ಖುಷಿಗಳನ್ನು ಮರೆತಿರುತ್ತೀರಿ. ಈಗ ಅವುಗಳನ್ನು ನೆನಪಿಸಿಕೊಂಡು ನಿಮ್ಮ ಖುಷಿಯಾಗುವಂತೆ ಬದುಕಿ.
ಯಾರು ಏನು ಹೇಳುತ್ತಾರೆ ಎಂಬ ಚಿಂತೆ ಬಿಡಿ, ನಿಮಗೆ ಖುಷಿಯಾಗುವಂತೆ ಬದುಕಿ.

ನಿಮ್ಮ ಆರೈಕೆ ಕಡೆ ಗಮನ ನೀಡಿ
ನಿಮ್ಮ ಶರೀರ ಹಾಗೂ ಮನಸ್ಸು ಎರಡೂ ಕಹಿ ಘಟನೆಗಳಿಂದ ಬಳಲಿರುತ್ತದೆ. ಆದ್ದರಿಂದ ನಿಮ್ಮ ಆರೈಕೆಯತ್ತ ಗಮನ ನೀಡಿ. ಧ್ಯಾನ ಮಾಡಿ. ಅಲ್ಲದೆ ಸುಮ್ಮನಿದ್ದರೆ ಚಿಂತೆ ಬರುತ್ತದೆ, ನಿಮ್ಮನ್ನು ನೀವು ಮರೆಯುವಷ್ಟು ಬ್ಯುಸಿಯಾಗಿ, ಇದರಿಂದ ಆರ್ಥಿಕವಾಗಿ ಬೆಳೆಯುವಿರಿ ಜೊತೆಗೆ ನಿಮ್ಮ ಆತ್ಮವಿಶ್ವಾಸ ತುಂಬಾ ಹೆಚ್ಚಾಗುವುದು.

ಅಗ್ಯತ ಬಿದ್ದರೆ ಮ್ಯಾರೇಜ್ ಕೌನ್ಸಿಲರ್ ಸಲಹೆ ಪಡೆಯಿರಿ
ನಿಮ್ಮ ಮನಸ್ಸಿಗಾದ ಅಘಾತ, ನೋವಿನಿಂದ ಹೊರಬರಲು ಸಾಧ್ಯವಿಲ್ಲ ಎಂದಾದರೆ ನೀವು ಮ್ಯಾರೇಜ್ ಕೌನ್ಸಿಲರ್ ಭೇಟಿಯಾಗಿ, ಅವರು ನಿಮಗೆ ಸರಿಯಾದ ಸಲಹೆ ನೀಡುತ್ತಾರೆ.

ಮೋಸ ಮಾಡಿವರು ತಿರುಗಿ ಬಂದರೆ?
ಕೆಲವರು ಮೋಸ ಮಾಡುವಾಗ ಏನೂ ಯೋಚಿಸುವುದಿಲ್ಲ ಆ ಕ್ಷಣದ ಆಕರ್ಷಣೆಗೆ ಒಳಗಾಗಿ ಹೋಗಿ ಬಿಡುತ್ತಾರೆ, ನಂತರ ಅವರಿಗೆ ಅಲ್ಲಿ ಜೀವನ ನರಕವಾದಾಗ ನಿಮ್ಮ ನೆನಪಾಗುವುದು, ಆ ರೀತಿ ಬಂದರೆ ಅವರನ್ನು ನಿಮ್ಮ ಜೀವನದಲ್ಲಿ ಮತ್ತೆ ಸೇರಿಸಿಕೊಂಡರೆ ನೀವು ಕಟ್ಟಿಕೊಂಡ ಸುಂದರ ಜೀವನವನ್ನು ನಿಮ್ಮ ಕೈಯಾರೆ ಹಾಳು ಮಾಡಿದಂತೆ ನೆನಪಿರಲಿ.



Click it and Unblock the Notifications