Latest Updates
-
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು!
ಇಬ್ಬರನ್ನು ಕೊನೆಗೆ ವಿಚ್ಛೇದನಕ್ಕೆ ತಂದು ನಿಲ್ಲಿಸುವ ಸೈಲೆಂಟ್ ಕಿಲ್ಲರ್ಗಳಿವು
ಇತ್ತೀಚಿಗೆ ಡಿವೋರ್ಸ್ ಹೆಚ್ಚಾಗಿ ಕೇಳಿ ಬರುತ್ತಿದೆ, ಕೆಲವೊಂದು ಡಿವೋರ್ಸ್ ಪ್ರಕರಣಕ್ಕೆ ಕಾರಣಗಳನ್ನು ಕೇಳಿದಾಗ ತುಂಬಾನೇ ಅಚ್ಚರಿ ಉಂಟಾಗುವುದು. ಗಂಡ-ಹೆಂಡತಿ ನಡುವೆ ಪ್ರತಿದಿನ ಜಗಳ ಉಂಟಾಗುತ್ತಿದ್ದರೆ ವಿಚ್ಛೇದನ ಉಂಟಾಗುತ್ತದೆ ಎಂದು ಭಾವಿಸುತ್ತಾರೆ. ಆದರೆ ಜಗಳವಾಡುವ ದಂಪತಿಗಳಿಗಿಂತ ಜಗಳ ಆಡದೇ ಇರುವ ದಂಪತಿಗಳು ವಿಚ್ಛೇದನದ ಹಾದಿ ಹಿಡಿಯುತ್ತಿದ್ದಾರೆ.
ಹೌದು ಸಂಬಂಧದಲ್ಲಿ ಕೆಲವೊಂದು ವಿಷಯವಿರುತ್ತದೆ, ಅವು ದಾಂಪತ್ಯ ಒಡೆದು ಹಾಕುವ ಸೈಲೆಂಟ್ ಕಿಲ್ಲರ್ಗಳು. ಅವುಗಳನ್ನು ಆರಂಭದಲ್ಲಿ ನಿರ್ಲಕ್ಷ್ಯ ಮಾಡುತ್ತಾ ಹೋದರೆ ಮುಂದೆ ದೊಡ್ಡ ಸಮಸ್ಯೆ ಉಂಟಾಗುವುದು. ಆದ್ದರಿಂದ ಸಂಸಾರದಲ್ಲಿ ಈ ಬಗ್ಗೆ ಸೂಚನೆಗಳು ಕಂಡು ಬಂದರೆ ನಿರ್ಲಕ್ಷ್ಯ ಬೇಡ್ವೆ ಬೇಡ, ಜಾಗ್ರತೆವಹಿಸಿ:

ಸಮಸ್ಯೆಗಳನ್ನು ಮಾತನಾಡಿ ಬಗೆಹರಿಸಲು ಯೋಚಿಸದೇ ಇರುವುದು
ಸಂಸಾರದಲ್ಲಿ ತುಂಬಾ ಮುಖ್ಯವಾಗಿ ಬೇಕಾಗಿರುವುದು ಸಂವಹನ, ಅದು ಇಲ್ಲದೆ ಇದ್ದರೆ ಆ ಸಂಬಂಧ ಬಡಕಲು ಆಗುವುದು. ಇಬ್ಬರ ನಡುವೆ ಮಾತಿಕತೆ ಇಲ್ಲ ಎಂದ ಮೇಲೆ ಆ ಸಂಸಾರದಲ್ಲಿ ಏನೇ ಸಮಸ್ಯೆ ಇದ್ದರೂ ಮಾತಿನ ಮೂಲಕ ಬಗೆಹರಿಯುವುದಿಲ್ಲ, ಬೂದಿ ಮುಚ್ಚಿದ ಕೆಂಡದಂತೆ ಇದ್ದು ಒಂದು ದಿನ ಮನೆ ಹೊತ್ತಿ ಉರಿಯುವುದು.
ಇಬ್ಬರ ನಡುವಿನ ಜೀವನ ಶೈಲಿ, ಆಚಾರಗಳು ಎಲ್ಲವೂ ಭಿನ್ನವಾದಾಗ
ಗಂಡ-ಹೆಂಡತಿ ಇಬ್ಬರು ಒಂದೇ ರೀತಿ ಯೋಚಿಸಿದರೆ ಮಾತ್ರ ಸಂಸಾರ ಚೆನ್ನಾಗಿರುತ್ತೆ ಎಂದು ಹೇಳುತ್ತಿಲ್ಲ ಅಂಥ ಸಂಸಾರವೂ ಇರಲ್ಲ. ಇಬ್ಬರ ನಡುವೆ ಯೋಚನೆ ತುಂಬಾನೇ ಭಿನ್ನವಾಗಿರುತ್ತದೆ, ಜೀವನಶೈಲಿ ಭಿನ್ನವಾಗಿರುತ್ತದೆ. ಆದರೆ ಆ ಭಿನ್ನತೆ ನಡುವೆ ಹೊಂದಾಣಿಕೆ ಇರಬೇಕು, ಆವಾಗ ಯಾವ ಸಮಸ್ಯೆಯೂ ಇರಲ್ಲ. ಆ ಹೊಂದಾಣಿಕೆ ಆಗುತ್ತಿಲ್ಲ ಎಂದಾದರೆ ಇಬ್ಬರ ನಡುವಿನ ಭಿನ್ನಾಭಿಪ್ರಾಯ ತುಂಬಾ ಹೆಚ್ಚಾಗುತ್ತಲೇ ಹೋಗುತ್ತದೆ.
ಸಂಗಾತಿಯ ಭಾವನೆಗಳನ್ನು ಗಮನಿಸುವುದೇ ಇಲ್ಲ
ಬಹುತೇಕ ಸಂಸಾರದಲ್ಲಿ ಈ ರೀತಿ ಇರುತ್ತದೆ. ನನ್ನ ಸಂಗಾತಿ ಮೊದಲಿದ್ದ ರೀತಿಯಲ್ಲಿ ಈಗ ನನ್ನ ಜೊತೆ ಇಲ್ಲ ಎಂಬ ಭಾವನೆ ಮೂಡುತ್ತದೆ, ಅವರಲ್ಲಿ ತುಂಬಾನೇ ಬದಲಾವಣೆ ಕಂಡು ಬರುವುದು. ಮೊದಲೆಲ್ಲಾ ಅಷ್ಟೊಂದು ಕಾಳಜಿ ವಹಿಸುತ್ತಿದ್ದ, ನನ್ನ ಜೊತೆ ಎಲ್ಲಾ ವಿಷಯವನ್ನು ಹಂಚಿಕೊಳ್ಳುತ್ತಿದ್ದ ವ್ಯಕ್ತಿ ಬದಲಾದಂತೆ ಕಂಡು ಬರುವುದು. ಈ ರೀತಿ ಅನಿಸಿದಾಗ ಆ ಸಂಬಂಧದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತಲೇ ಹೋಗುವುದು, ಇಬ್ಬರ ನಡುವಿನ ಅಂತರ ಹೆಚ್ಚಾಗುವುದು.
ಬಂದು ಹೋಗುವ ಸಂಬಂಧ
ಅದು ಪ್ರೀತಿಯಲ್ಲಿ ಆದರೂ ಆಗಬಹುದು, ದಾಂಪತ್ಯದಲ್ಲಿ ಆಗಬಹುದು. ಕೆಲವು ಸಮಯ ಇಬ್ಬರು ಚೆನ್ನಾಗಿ ಇರುತ್ತಾರೆ ನಂತರ ಬ್ರೇಕಪ್ ಮಾಡಿ ಹೋಗುವುದು ಅಥವಾ ಸಂಗಾತಿ ಜೊತೆ ಜಗಳವಾಡಿ ಹೋಗುವುದು, ಮತ್ತೆ ಪ್ಯಾಚ್ ಆಗುವುದು, ಅದಾಗಿ ಮತ್ತೆ ಆ ರೀತಿ ನಮ್ಮನ್ನು ಒಂಟಿಯಾಗಿ ಬಿಟ್ಟು ಹೋಗುವುದು ಮಾಡುತ್ತಿದ್ದರೆ ಆ ಸಂಬಂಧದ ಬಗ್ಗೆ ತುಂಬಾನೇ ಜಾಗ್ರತೆವಹಿಸಬೇಕು. ಏಕೆಂದರೆ ಅವರು ಅವರಿಗೆ ಬೇಕಾದಾಗ ನಮ್ಮನ್ನು ಬಳಸಿ ನಂತರ ನಮ್ಮ ಬಗ್ಗೆ ಒಂದಿಷ್ಟೂ ಕಾಳಜಿವಹಿಸದೆ ಬಿಟ್ಟು ಹೋಗುತ್ತಾರೆ.
ನಿಮ್ಮ ಸಂಬಂಧದಲ್ಲಿ ಅಹಂ ಪ್ರಾಬಲ್ಯ ಬೀರಿದಾಗ
ಸಂಬಂಧದಲ್ಲಿ ಅಹಂ ಹೆಚ್ಚಾಗುತ್ತಿದ್ದಂತೆ ಸಮಸ್ಯೆಯೂ ಹೆಚ್ಚಾಗುವುದು. ನಾನು ಹೇಳಿದಂತೆ ನಡೆಯಬೇಕೆಂದು ಇವನು ಬಯಸಿದರೆ ಅವಳು ಹೇಳಿದಂತೆ ನಡೆಯಬೇಕೆಂಬ ಹಠ ಅವಳಾದರೆ, ಇಬ್ಬರಿಗೂ ಅವರವರದ್ದೇ ಸರಿ ಅಂತಾದರೆ ಸಂಬಂಧವನ್ನೇ ಕೊಂದು ಹಾಕುವುದು.
ಸಂಗಾತಿ ಎಂದರೆ ಒಂದಿಷ್ಟೂ ಗೌರವ ಇಲ್ಲದಿರುವುದು
ಏಕೆ ಅವಳ ಅಥವಾ ಅವನ ಅಭಿಪ್ರಾಯ ಕೇಳಬೇಕು? ಇದರಿಂದ ಆಗಬೇಕಾಗಿರುವುದೇನು? ಅವಳಿಗೇನು ಗೊತ್ತು ಇಂಥ ನಿರ್ಲಕ್ಷ್ಯ ಭಾವನೆ ಸಂಬಂಧದ ಮೇಲೆ ತುಂಬಾನೇ ಪ್ರಭಾವ ಬೀರುವುದು, ಆದ್ದರಿಂದ ಈ ಬಗ್ಗೆ ಜಾಗ್ರತೆವಹಿಸಿ.



Click it and Unblock the Notifications