Latest Updates
-
ಬೆಳಗ್ಗೆ ಮಾಡಿದ ರೊಟ್ಟಿ ಸಂಜೆಯಾದರೂ ಫ್ರೆಶ್ & ಸಾಫ್ಟ್ ಆಗಿರುತ್ತೆ! ಅಮ್ಮನ ಸೂಪರ್ ಕಿಚನ್ ಟಿಪ್ಸ್ ಇಲ್ಲಿದೆ -
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ? ಯಾರಿಗೆ ಸಂಕಷ್ಟ? ನಿಮ್ಮ ರಾಶಿ ಫಲ ಇಲ್ಲಿದೆ -
ಉಳಿದ ಅನ್ನದಿಂದ ಮಾಡಿ ಗರಿಗರಿಯಾದ ಕುರ್ಕುರೆ! ಹೊರಗಿನ ಸ್ನ್ಯಾಕ್ಗೂ ಮೀರಿದ ರುಚಿ.. ಮಾಡೋದು ಹೇಗೆ? -
30 ವರ್ಷ ದಾಟಿದ್ರಾ? ಈ 5 ಅಭ್ಯಾಸಗಳನ್ನು ತಕ್ಷಣ ಬದಲಿಸಿ.. ಜೀವನಪೂರ್ತಿ ಫಿಟ್ ಆಗಿರಿ! -
Happy Holi 2026: ನಿಮ್ಮ ಪ್ರೀತಿಪಾತ್ರರಿಗೆ ಕಳಿಸಿ ಈ ಸ್ಪೆಷಲ್ ಶುಭಾಶಯಗಳು! ಸ್ನೇಹ, ಪ್ರೀತಿ, ಸಂತೋಷ ತುಂಬಿದ ಮೆಸೇಜ್ ಇಲ್ಲಿವೆ -
ಹಸಿ ಬಟಾಣಿ ಬಳಸಿ ಖಸ್ತ ಪೂರಿ ಹೀಗೆ ಮಾಡಿ.. ಪ್ರತಿ ಪುರಿಯೂ ಹೂವಿನಂತೆ ಉಬ್ಬಿ ಬರುತ್ತೆ! ಸೂಪರ್ ರುಚಿ, 15 ನಿಮಿಷಗಳಲ್ಲಿ ರೆಡಿ! -
ಈ ದಿನ ಕೌಟುಂಬಿಕ ಸುಖ ಪ್ರಾಪ್ತಿ! ಪ್ರೇಮ ಜೀವನದಲ್ಲಿ ತೊಂದರೆಗಳು -
March 02 Horoscope: ಸಾಲದ ಕುರಿತಾದ ಚಿಂತೆಯೊಂದು ದೂರಾಗಲಿದೆ! -
ಮಾರ್ಚ್ನಲ್ಲಿ ಸೂರ್ಯ-ಕೇತು ಸಮನ್ವಯ ಚಲನೆ: ಮೂರು ರಾಶಿಯವರ ಬದುಕಲ್ಲಿ ಅದೃಷ್ಟ! -
Weekly Horoscope: ಮಾರ್ಚ್ 01 ರಿಂದ ಮಾರ್ಚ್ 07ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ!
ಈಗ ನಡೆದಿರುವುದು ಬರೀ ಪ್ರೀವೆಡ್ಡಿಂಗ್, ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ಮದುವೆ ಯಾವಾಗ?
ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಪ್ರೀವೆಡ್ಡಿಂಗ್ ಕಾರ್ಯಕ್ರಮ ಎಷ್ಟು ಗ್ರ್ಯಾಂಡ್ ಆಗಿ ನಡೆಯಿತು ಎಂಬುವುದನ್ನು ಭಾರತ ಮಾತ್ರವಲ್ಲ ಇಡೀ ಜಗತ್ತು ಗಮನಿಸಿದೆ, ವಿಶ್ವದ ರಾಯಲ್ ವೆಡ್ಡಿಂಗ್ಗಳಲ್ಲಿ ಇದು ಕೂಡ ಒಂದಾಗಿದೆ.
ಇವರ ಪ್ರೀವೆಡ್ಡಿಂಗ್ ಕಾರ್ಯಕ್ರಮಕ್ಕೆ ವಿದೇಶದಿಂದಲೂ ದೊಡ್ಡ-ದೊಡ್ಡ ಸ್ಟಾರ್ಗಳು ಆಗಮಿಸಿದ್ದರು. ರೆಹನಾಗೆ ಪ್ರೀವೆಡ್ಡಿಂಗ್ ಕಾರ್ಯಕ್ರಮಕ್ಕೆ ಕೊಟ್ಟಿದ್ದ ಬರೋಬರಿ 53 ಕೋಟಿಯಂತೆ, ಅಲ್ಲದೆ ಈ ಕಾರ್ಯಕ್ರಮಕ್ಕೆ ಬಾಲಿವುಡ್ ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಬಂದು ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿದ್ದರು, ಅವರಿಗೂ ಕೋಟ್ಯಾಂತರ ರುಪಾಯಿ ನೀಡಲಾಗಿದೆ.

ಈ ಪ್ರೀವೆಡ್ಡಿಂಗ್ ಕಾರ್ಯಕ್ರಮ ನೋಡಿದಾಗ ಸ್ವರ್ಗವೇ ಧರೆಗೆ ಇಳಿದು ಬಂದಂತೆ ಅರೇಂಜ್ಮೆಂಟ್ ಮಾಡಲಾಗಿತ್ತು, ದೇಶದ ಆಗರ್ಭ ಶ್ರೀಮಂತನ ಮಗನ ಮದುವೆಯೆಂದರೆ ಕಮ್ಮಿಯೇ, ಅದರಲ್ಲೂ ಮುಖೇಶ್ ಅಂಬಾನಿಯ ಕೊನೆಯ ಮಗ.
ಅಲ್ಲದೆ ಅಂಬಾನಿ ಕುಟುಂಬದವರ ಮುದ್ದಿನ ಕಣ್ಮಣಿ ಅನಂತ್ ಅಂಬಾನಿ, ಕಿರಿಯ ಮಗ ಎಂದರೆ ಸ್ವಲ್ಪ ಪ್ರೀತಿ ಹೆಚ್ಚೇ ಇರುತ್ತದೆ, ಈ ಮುದ್ದಿನ ಮಗನ ಫ್ರೀವೆಡ್ಡಿಂಗ್ ಕಾರ್ಯಕ್ರಮ ಧಾಮ್ ಧೂಮ್ ನಡೆಸಲಾಯ್ತು. ಆದರೆ ಹೆಚ್ಚಿನವರು ಇವರ ಮದುವೆನೇ ಆಯ್ತು ಎಂದು ಯೋಚಿಸುತ್ತಿದ್ದಾರೆ, ಆದರೆ ಅವರಿಬ್ಬರ ಮದುವೆ ಆಗಿಲ್ಲ, ನಡೆದಿರುವುದು ಪ್ರೀವೆಡ್ಡಿಂಗ್ ಕಾರ್ಯಕ್ರಮವಷ್ಟೆ....
ಹೌದು ಮದುವೆ ಇರುವುದು ಜುಲೈನಲ್ಲಿ
ಹೌದು ಅನಂತ್ ಅಮಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ಮದುವೆ ಇರುವುದು ಜುಲೈ 12ಕ್ಕೆ, ಪ್ರೀವೆಡ್ಡಿಂಗ್ ಇಷ್ಟೊಂದು ಅದ್ಧೂರಿಯಾಗಿ ಇರುವಾಗ ಇನ್ನು ಮದುವೆ ಹೇಗಿರಬೇಡ. ಅತ್ಯಂತ ಶುಭ ಮುಹೂರ್ತ ನೋಡಿ ಇಬ್ಬರ ಮದುವೆ ಗೊತ್ತು ಮಾಡಿದೆ. ಈ ದಿನ ರವಿಯೋಗವಿದೆ, ಈ ಯೋಗದಲ್ಲಿ ಮದುವೆಯಾದರೆ ಅವರ ಬದುಕು ಚೆನ್ನಾಗಿರುತ್ತದೆ ಎಂಬುವುದು ನಂಬಿಕೆ.
ಅನಂತ್ ಅಂಬಾನಿ ಧಾರ್ಮಕ ನಂಬಿಕೆಗಳನ್ನು ಹೊಂದಿರುವ ವ್ಯಕ್ತಿ
ಅಂಬಾನಿ ಕುಟುಂಬ ಶ್ರೀರಾಮನ ಭಕ್ತ, ನಮ್ಮ ಕುಟುಂಬದ ಏಳಿಗೆ , ಸಂತೋಷಕ್ಕೆ ಶ್ರೀರಾಮನ ಕಾರಣ ಎಂದು ನಂಬಿರುವ ಕುಟುಂಬ, ಅಲ್ಲದೆ ತಮ್ಮ ಪ್ರೀವೆಡ್ಡಿಂಗ್ ಕಾರ್ಯಕ್ರಮದಲ್ಲಿಯೂ ಜೈಶ್ರೀರಾಮ್ ಅಂತ ಜೋರಾಗಿ ಹೇಳಿದ್ದರು, ಇವರು ಹೇಳಿದ್ದನ್ನು ಕೇಳಿ ಶಾರೂಖ್ ಖಾನ್ ಕೂಡ ಜೈ ಶ್ರೀರಾಮ್ ಎಂದಿದ್ದರು, ಅಲ್ಲದೆ ಮುಖೇಶ್ ಅಂಬಾನಿ ಆಹಾರ ಬಡಿಸುವಾಗ ಜೈ ಕೃಷ್ಣ, ಕೈ ಶ್ರೀರಾಮ್ ಹೇಳುತ್ತಿದ್ದರು.
ಭಾರತೀಯ ಸಂಸ್ಕೃತಿಯನ್ನು ಬಿಂಬಿಸಿದ ಪ್ರೀವೆಡ್ಡಿಂಗ್
ಸಾಮಾನ್ಯ ಜನರು ಕೂಡ ಈಗ ವಿದೇಶ ಸಂಸ್ಕೃತಿಗೆ ಮಾರಿ ಹೋಗುತ್ತಿರುವಾಗ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ರೀತಿಯಲ್ಲಿ ಪ್ರೀವೆಡ್ಡಿಂಗ್ ಕಾರ್ಯಕ್ರಮ ಮಾಡಿ ಗಮನ ಸೆಳೆದರು. ಇವರ ಪ್ರೀವೆಡ್ಡಿಂಗ್ ಕಾರ್ಯಕ್ರಮಕ್ಕೆ ಬಂದ ವಿದೇಶಿ ಗೆಸ್ಟ್ಗಳು ಕೂಡ ಭಾರತೀಯ ಉಡುಗೆಯಲ್ಲಿ ಮಿಂಚಿದ್ದು ಇನ್ನೂ ವಿಶೇಷ.
ಮದುವೆ ಎಲ್ಲಿ ನಡೆಯಲಿದೆ?
ಮದುವೆ ದಿನಾಂಕ ಗೊತ್ತಾಗಿದೆ, ಆದರೆ ಮದುವೆ ಎಲ್ಲಿ ನಡೆಯಲಿದೆ ಎಂಬುವುದನ್ನು ಕುಟುಂಬ ಇನ್ನೂ ಗುಟ್ಟಾಗಿಯೇ ಇಟ್ಟಿದೆ. ಪ್ರೀವೆಡ್ಡಿಂಗ್ಗೆ ಕಳೆದ 6 ತಿಂಗಳಿನಿಂದ ತ ಯಾರಿ ನಡೆದಿತ್ತು, ಆದರೆ ಜಾಮ್ನಗರದಲ್ಲಿ ಇಷ್ಟೊಂದು ದೊಡ್ಡ ಕಾರ್ಯಕ್ರಮ ನಡೆಯುತ್ತೆ ಎಂದು ತಿಳಿದಿದ್ದೇ ಇತ್ತೀಚೆಗೆ. ಮದುವೆಗೆ ಕೂಡ ತಯಾರಿ ಆಗಿರುತ್ತದೆ, ಆದರೆ ಎಲ್ಲಿ ನಡೆಯಲಿದೆ ಎಂಬುವುದನ್ನು ಕುಟುಂಬ ಇನ್ನೂ ತಿಳಿಸಿಲ್ಲ.
ಅನಂತ್ ಅಂಬಾನಿ ಈ ಕಾರಣಕ್ಕೆ ಜನ ಹೊಗಳುತ್ತಿದ್ದಾರೆ
ಕುಬೇರನ ಮಗ ಆಗಿರುವ ಅನಂತ್ ಅಂಬಾನಿಗೆ ಏನು ಬೇಕಾದರೂ ಮಾಡಬಹುದು, ತಮ್ಮ ಸಾಮ್ರಾಜ್ಯ ಕಟ್ಟುವುದರ ಜೊತೆಗೆ ಪ್ರಾಣಿಗಳನ್ನು ಕಾಳಜಿ ಮಾಡುತ್ತಿದ್ದಾರೆ, ಅವರು ಪ್ರಾರಂಭಿಸಿರುವ ವಂತಾರದಲ್ಲಿ 1000ಕ್ಕೂ ಅಧಿಕ ಪ್ರಾಣಿಗಳಿಗೆ ಆಹಾರ ನೀಡಿ, ಇರಲು ಉತ್ತಮ ಸ್ಥಳ ನೀಡಿ ಕಾಳಜಿ ಮಾಡುತ್ತಿದ್ದಾರೆ.



Click it and Unblock the Notifications











