Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಪತಿ ಹಾಲಿಗೆ ನೀರು ಬೆರೆಸುತ್ತಾನೆ ಎಂದು ವಿಚ್ಛೇದನಕ್ಕೆ ಮುಂದಾದ ಪತ್ನಿ..!
ಮದುವೆ ಅನ್ನೋದು ಏಳೇಳು ಜನ್ಮದ ಬಂಧ ಎನ್ನಲಾಗುತ್ತೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಮದುವೆ, ವಿಚ್ಛೇದನ ಹೆಚ್ಚಾಗುತ್ತಿದೆ. ಸಣ್ಣ ಪುಟ್ಟ ವಿಚಾರಕ್ಕೂ ಈಗ ವಿಚ್ಛೇದನ ಪಡೆಯವುದು ನಡೆಯುತ್ತಲೇ ಇದೆ. ಪತ್ನಿ ಹೆಚ್ಚು ಮೊಬೈಲ್ ಬಳಸುತ್ತಾಳೆ ಎಂದು ವಿಚ್ಚೇದನ ಪಡೆಯುವುದು, ಗಂಡ ತಡವಾಗಿ ಮನೆಗೆ ಬರುತ್ತಾನೆ ಎಂದು ವಿಚ್ಛೇದನ ಪಡೆಯುವುದು, ಪತ್ನಿ ಕೋಳಿ ಸಾರು ಮಾಡಲಿಲ್ಲ ಎಂದು ವಿಚ್ಛೇದನ ಪಡೆದ ಚಿತ್ರ ವಿಚಿತ್ರ ಪ್ರಸಂಗಗಳ ಕೇಳಿದ್ದೇವೆ.
ಆಧುನಿಕ ಯುಗದಲ್ಲಿ ಇದು ಸಾಮಾನ್ಯ ಎನ್ನುವಂತಾಗಿದೆ. ಹಿಂದೆಲ್ಲಾ ವಿಚ್ಛೇದನ ಪ್ರಸಂಗಗಳು ಬೆರಳೆಣಿಕೆಯಷ್ಟು ಮಾತ್ರ ನಡೆಯುತ್ತಿದ್ದವು. ಎಂತಹ ಸಮಸ್ಯೆ ಇದ್ದರೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುತ್ತಿದ್ದರು. ಇಂದು ಕೋರ್ಟ್ ಮೂಲಕವೇ ಚಿಕ್ಕ ಪುಟ್ಟ ವಿಚಾರಳು ವಿಚಾರಣೆ ನಡೆಯುತ್ತವೆ, ಅದರಲ್ಲಿ ಕೆಲವೇ ಕೆಲವು ರಾಜಿಯಾದರೆ ಬಹುಪಾಲು ಕೇಸ್ಗಳು ವಿಚ್ಛೇದನದಲ್ಲಿ ಅಂತ್ಯವಾಗುತ್ತವೆ.

ಇಲ್ಲೊಂದು ವಿಚಿತ್ರ ಹಾಗೂ ಕ್ಷುಲ್ಲಕ ಘಟನೆ ಸಹ ಹೀಗೆ ವಿಚ್ಛೇದನಕ್ಕೆ ಕಾರಣವಾಗಿದೆ. ಪತಿ ಹಾಲಿಗೆ ಹೆಚ್ಚು ನೀರು ಬೆರೆಸುತ್ತಾನೆ ಎಂದು ಪತ್ನಿ ವಿಚ್ಛೇದನ ಪಡೆಯಲು ಮುಂದಾಗಿರುವ ಘಟನೆ ವರದಿಯಾಗಿದೆ. ಈ ಸುದ್ದಿ ಅಚ್ಚರಿ ಎನಿಸಬಹುದು. ಆದರೆ ಆಕೆ ಇದೇ ವಿಚಾರವಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದಾಳೆ.
ರಾಜಸ್ಥಾನದ ರಾಜ್ಖೇರಾದ ಯುವಕನಾದ ಪತಿ ಎರಡು ವರ್ಷಗಳ ಹಿಂದೆ ಆಗ್ರಾದ ರಾಜ್ಪುರ ಚುಂಗಿ ಮೂಲದ ಯುವತಿಯನ್ನು ವಿವಾಹವಾಗಿದ್ದ. ಹಾಲು ಮಾರುವ ಮೂಲಕ ಜೀವನ ಸಾಗಿಸುತ್ತಿದ್ದ ಪತಿ, ಅದರ ಪ್ರಮಾಣ ಮತ್ತು ಲಾಭವನ್ನು ಹೆಚ್ಚಿಸಲು ನಗರದಲ್ಲಿ ಮಾರಾಟ ಮಾಡುವ ಮೊದಲು ಹಾಲಿನ ಕ್ಯಾನ್ಗೆ ನೀರು ಮಿಶ್ರಣ ಮಾಡುತ್ತಿದ್ದ ಎಂಬುದು ಪತ್ನಿಯ ಆರೋಪವಾಗಿದೆ. ಈ ಅಭ್ಯಾಸವು ದಂಪತಿ ನಡುವೆ ನಿತ್ಯ ಗಲಾಟೆಗೆ ಕಾರಣವಾಗಿತ್ತು, ಇದರ ಪರಿಣಾಮವಾಗಿ ಹೆಂಡತಿ ತನ್ನ ಗಂಡನ ಮನೆಯನ್ನು ತೊರೆದು ತನ್ನ ತಾಯಿಯ ಮನೆ ಸೇರಿದ್ದಳು.
ಗಂಡ ಹಾಲಿಗೆ ನೀರು ಬೆರೆಸಿ ಅದನ್ನು ಮಾರಾಟ ಮಾಡುವುದು ಪತ್ನಿಗೆ ಇಷ್ಟವಿರಲಿಲ್ಲವಂತೆ. ನಿತ್ಯ ಇದೇ ವಿಚಾರಕ್ಕೆ ಆಕೆ ಗಲಾಟೆ ಮಾಡುತ್ತಿದ್ದಳು. ಕಲಬೆರೆಕೆ ಹಾಲಿನ ಮೂಲಕ ಗಳಿಸಿದ ಆದಾಯದಿಂದ ಜೀವನ ನಡೆಸಬೇಡಿ ಎಂದು ಗಂಡನಿಗೆ ಬುದ್ದಿ ಹೇಳುತ್ತಿದ್ದಳಂತೆ.
ಆದರೆ ಪತಿಯ ಕಾರ್ಯ ನಿತ್ಯ ಮುಂದುವರೆದಿತ್ತು. ಗಂಡನನ್ನು ತಡೆಯಲು ಮುಂದಾದಾಗ ನಿತ್ಯ ಜಗಳವಾಗುತ್ತಿತ್ತಂತೆ. ಇದರಿಂದ ಬೇಸತ್ತ ಆಕೆ ನೇರವಾಗಿ ಪೊಲೀಸ್ ಠಾಣೆಗೆ ತಲುಪಿದ್ದಳು, ಅಲ್ಲಿಯೂ ಬಗೆಹರಿಯದಾಗ ಈಗ ವಿಚ್ಛೇದನ ಪಡೆಯಲು ಮುಂದಾಗಿದ್ದಾಳೆ ಎಂದು ತಿಳಿದುಬಂದಿದೆ.
ಆಪ್ತಸಮಾಲೋಚನೆ ವೇಳೆ ಪತಿ, ತನ್ನ ವ್ಯಾಪಾರದಲ್ಲಿ ನಷ್ಟವಾಗುವುದನ್ನು ತಪ್ಪಿಸಲು ಹಾಲಿನಲ್ಲಿ ನೀರು ಬೆರೆಸಿ ನೀಡುವುದಾಗಿ ವಿವರಿಸಿದ್ದಾನೆ. ಆದರೆ ಆಕೆ ಪತಿ ಬೇರೆ ಉದ್ಯೋಗ ಹುಡುಕಲಿ ಅಥವಾ ಹಾಲಿಗೆ ನೀರು ಬೆರೆಸಿ ಮಾರಾಟ ಮಾಡುವುದನ್ನು ನಿಲ್ಲಿಸುವವರೆಗೂ ಮನೆಗೆ ವಾಪಾಸು ಬರುವುದಿಲ್ಲ ಎಂದು ಹಠ ಹಿಡಿದಿದ್ದಾಳಂತೆ.
ಇತ್ತ ಹಾಲಿನ ಪ್ರಮಾಣ ಹಚ್ಚಿಸಲು ಬರೀ ನೀರು ಮಾತ್ರವಲ್ಲ, ಅದಕ್ಕೆ ಮಾರ್ಜಕ, ಯೂರಿಯಾ ಸಹ ಬೆರೆಸುತ್ತಾರೆ ಎಂಬುದು ಪತ್ನಿಯ ಗಮನದಲ್ಲಿತ್ತಂತೆ. ಆದರೆ ಪತಿ ಈ ರೀತಿ ಮಾಡಿಲ್ಲ ಬರೀ ನೀರನ್ನೇ ಬೆರೆಸುತ್ತಾರೆ. ಆದರೂ ಇದರಿಂದ ಬೇರೆಯವರಿಗೆ ನಷ್ಟವಾಗುತ್ತದೆ ಎಂಬುದು ಆಕೆಯ ಕಾಳಜಿಯಂತೆ. ಅಲ್ಲದೆ ಪತಿ ಹಾಲು ನೀಡಿ ಬಂದ ಬಳಿಕ ಮನೆಯವರು ಹಾಲಿಗೆ ನೀರು ಬೆರೆಸಿರುವುದು ತಿಳಿದರೆ ಬೈಯ್ಯುತ್ತಾರೆ, ಶಾಪ ಹಾಕುತ್ತಾರೆ ಎಂಬುದು ಆಕೆಯ ಕಳಕಳಿಯಾಗಿತ್ತಂತೆ.
ಆದ್ರೆ ಈ ಜಗಳ ಅವರೇ ಕುಳಿತು ಬಗೆಹರಿಸಿಕೊಳ್ಳಬಹುದಿತ್ತು, ಆದರೆ ನ್ಯಾಯಾಲಯದ ವರೆಗೆ ತೆಗೆದುಕೊಂಡು ಹೋಗಿದ್ದು ಮಾತ್ರವಲ್ಲ ವಿಚ್ಛೇದನಕ್ಕೆ ಮುಂದಾಗಿದ್ದು ವಿಪರ್ಯಾಸ.



Click it and Unblock the Notifications