Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಪತಿ ಹಾಲಿಗೆ ನೀರು ಬೆರೆಸುತ್ತಾನೆ ಎಂದು ವಿಚ್ಛೇದನಕ್ಕೆ ಮುಂದಾದ ಪತ್ನಿ..!
ಮದುವೆ ಅನ್ನೋದು ಏಳೇಳು ಜನ್ಮದ ಬಂಧ ಎನ್ನಲಾಗುತ್ತೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಮದುವೆ, ವಿಚ್ಛೇದನ ಹೆಚ್ಚಾಗುತ್ತಿದೆ. ಸಣ್ಣ ಪುಟ್ಟ ವಿಚಾರಕ್ಕೂ ಈಗ ವಿಚ್ಛೇದನ ಪಡೆಯವುದು ನಡೆಯುತ್ತಲೇ ಇದೆ. ಪತ್ನಿ ಹೆಚ್ಚು ಮೊಬೈಲ್ ಬಳಸುತ್ತಾಳೆ ಎಂದು ವಿಚ್ಚೇದನ ಪಡೆಯುವುದು, ಗಂಡ ತಡವಾಗಿ ಮನೆಗೆ ಬರುತ್ತಾನೆ ಎಂದು ವಿಚ್ಛೇದನ ಪಡೆಯುವುದು, ಪತ್ನಿ ಕೋಳಿ ಸಾರು ಮಾಡಲಿಲ್ಲ ಎಂದು ವಿಚ್ಛೇದನ ಪಡೆದ ಚಿತ್ರ ವಿಚಿತ್ರ ಪ್ರಸಂಗಗಳ ಕೇಳಿದ್ದೇವೆ.
ಆಧುನಿಕ ಯುಗದಲ್ಲಿ ಇದು ಸಾಮಾನ್ಯ ಎನ್ನುವಂತಾಗಿದೆ. ಹಿಂದೆಲ್ಲಾ ವಿಚ್ಛೇದನ ಪ್ರಸಂಗಗಳು ಬೆರಳೆಣಿಕೆಯಷ್ಟು ಮಾತ್ರ ನಡೆಯುತ್ತಿದ್ದವು. ಎಂತಹ ಸಮಸ್ಯೆ ಇದ್ದರೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುತ್ತಿದ್ದರು. ಇಂದು ಕೋರ್ಟ್ ಮೂಲಕವೇ ಚಿಕ್ಕ ಪುಟ್ಟ ವಿಚಾರಳು ವಿಚಾರಣೆ ನಡೆಯುತ್ತವೆ, ಅದರಲ್ಲಿ ಕೆಲವೇ ಕೆಲವು ರಾಜಿಯಾದರೆ ಬಹುಪಾಲು ಕೇಸ್ಗಳು ವಿಚ್ಛೇದನದಲ್ಲಿ ಅಂತ್ಯವಾಗುತ್ತವೆ.

ಇಲ್ಲೊಂದು ವಿಚಿತ್ರ ಹಾಗೂ ಕ್ಷುಲ್ಲಕ ಘಟನೆ ಸಹ ಹೀಗೆ ವಿಚ್ಛೇದನಕ್ಕೆ ಕಾರಣವಾಗಿದೆ. ಪತಿ ಹಾಲಿಗೆ ಹೆಚ್ಚು ನೀರು ಬೆರೆಸುತ್ತಾನೆ ಎಂದು ಪತ್ನಿ ವಿಚ್ಛೇದನ ಪಡೆಯಲು ಮುಂದಾಗಿರುವ ಘಟನೆ ವರದಿಯಾಗಿದೆ. ಈ ಸುದ್ದಿ ಅಚ್ಚರಿ ಎನಿಸಬಹುದು. ಆದರೆ ಆಕೆ ಇದೇ ವಿಚಾರವಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದಾಳೆ.
ರಾಜಸ್ಥಾನದ ರಾಜ್ಖೇರಾದ ಯುವಕನಾದ ಪತಿ ಎರಡು ವರ್ಷಗಳ ಹಿಂದೆ ಆಗ್ರಾದ ರಾಜ್ಪುರ ಚುಂಗಿ ಮೂಲದ ಯುವತಿಯನ್ನು ವಿವಾಹವಾಗಿದ್ದ. ಹಾಲು ಮಾರುವ ಮೂಲಕ ಜೀವನ ಸಾಗಿಸುತ್ತಿದ್ದ ಪತಿ, ಅದರ ಪ್ರಮಾಣ ಮತ್ತು ಲಾಭವನ್ನು ಹೆಚ್ಚಿಸಲು ನಗರದಲ್ಲಿ ಮಾರಾಟ ಮಾಡುವ ಮೊದಲು ಹಾಲಿನ ಕ್ಯಾನ್ಗೆ ನೀರು ಮಿಶ್ರಣ ಮಾಡುತ್ತಿದ್ದ ಎಂಬುದು ಪತ್ನಿಯ ಆರೋಪವಾಗಿದೆ. ಈ ಅಭ್ಯಾಸವು ದಂಪತಿ ನಡುವೆ ನಿತ್ಯ ಗಲಾಟೆಗೆ ಕಾರಣವಾಗಿತ್ತು, ಇದರ ಪರಿಣಾಮವಾಗಿ ಹೆಂಡತಿ ತನ್ನ ಗಂಡನ ಮನೆಯನ್ನು ತೊರೆದು ತನ್ನ ತಾಯಿಯ ಮನೆ ಸೇರಿದ್ದಳು.
ಗಂಡ ಹಾಲಿಗೆ ನೀರು ಬೆರೆಸಿ ಅದನ್ನು ಮಾರಾಟ ಮಾಡುವುದು ಪತ್ನಿಗೆ ಇಷ್ಟವಿರಲಿಲ್ಲವಂತೆ. ನಿತ್ಯ ಇದೇ ವಿಚಾರಕ್ಕೆ ಆಕೆ ಗಲಾಟೆ ಮಾಡುತ್ತಿದ್ದಳು. ಕಲಬೆರೆಕೆ ಹಾಲಿನ ಮೂಲಕ ಗಳಿಸಿದ ಆದಾಯದಿಂದ ಜೀವನ ನಡೆಸಬೇಡಿ ಎಂದು ಗಂಡನಿಗೆ ಬುದ್ದಿ ಹೇಳುತ್ತಿದ್ದಳಂತೆ.
ಆದರೆ ಪತಿಯ ಕಾರ್ಯ ನಿತ್ಯ ಮುಂದುವರೆದಿತ್ತು. ಗಂಡನನ್ನು ತಡೆಯಲು ಮುಂದಾದಾಗ ನಿತ್ಯ ಜಗಳವಾಗುತ್ತಿತ್ತಂತೆ. ಇದರಿಂದ ಬೇಸತ್ತ ಆಕೆ ನೇರವಾಗಿ ಪೊಲೀಸ್ ಠಾಣೆಗೆ ತಲುಪಿದ್ದಳು, ಅಲ್ಲಿಯೂ ಬಗೆಹರಿಯದಾಗ ಈಗ ವಿಚ್ಛೇದನ ಪಡೆಯಲು ಮುಂದಾಗಿದ್ದಾಳೆ ಎಂದು ತಿಳಿದುಬಂದಿದೆ.
ಆಪ್ತಸಮಾಲೋಚನೆ ವೇಳೆ ಪತಿ, ತನ್ನ ವ್ಯಾಪಾರದಲ್ಲಿ ನಷ್ಟವಾಗುವುದನ್ನು ತಪ್ಪಿಸಲು ಹಾಲಿನಲ್ಲಿ ನೀರು ಬೆರೆಸಿ ನೀಡುವುದಾಗಿ ವಿವರಿಸಿದ್ದಾನೆ. ಆದರೆ ಆಕೆ ಪತಿ ಬೇರೆ ಉದ್ಯೋಗ ಹುಡುಕಲಿ ಅಥವಾ ಹಾಲಿಗೆ ನೀರು ಬೆರೆಸಿ ಮಾರಾಟ ಮಾಡುವುದನ್ನು ನಿಲ್ಲಿಸುವವರೆಗೂ ಮನೆಗೆ ವಾಪಾಸು ಬರುವುದಿಲ್ಲ ಎಂದು ಹಠ ಹಿಡಿದಿದ್ದಾಳಂತೆ.
ಇತ್ತ ಹಾಲಿನ ಪ್ರಮಾಣ ಹಚ್ಚಿಸಲು ಬರೀ ನೀರು ಮಾತ್ರವಲ್ಲ, ಅದಕ್ಕೆ ಮಾರ್ಜಕ, ಯೂರಿಯಾ ಸಹ ಬೆರೆಸುತ್ತಾರೆ ಎಂಬುದು ಪತ್ನಿಯ ಗಮನದಲ್ಲಿತ್ತಂತೆ. ಆದರೆ ಪತಿ ಈ ರೀತಿ ಮಾಡಿಲ್ಲ ಬರೀ ನೀರನ್ನೇ ಬೆರೆಸುತ್ತಾರೆ. ಆದರೂ ಇದರಿಂದ ಬೇರೆಯವರಿಗೆ ನಷ್ಟವಾಗುತ್ತದೆ ಎಂಬುದು ಆಕೆಯ ಕಾಳಜಿಯಂತೆ. ಅಲ್ಲದೆ ಪತಿ ಹಾಲು ನೀಡಿ ಬಂದ ಬಳಿಕ ಮನೆಯವರು ಹಾಲಿಗೆ ನೀರು ಬೆರೆಸಿರುವುದು ತಿಳಿದರೆ ಬೈಯ್ಯುತ್ತಾರೆ, ಶಾಪ ಹಾಕುತ್ತಾರೆ ಎಂಬುದು ಆಕೆಯ ಕಳಕಳಿಯಾಗಿತ್ತಂತೆ.
ಆದ್ರೆ ಈ ಜಗಳ ಅವರೇ ಕುಳಿತು ಬಗೆಹರಿಸಿಕೊಳ್ಳಬಹುದಿತ್ತು, ಆದರೆ ನ್ಯಾಯಾಲಯದ ವರೆಗೆ ತೆಗೆದುಕೊಂಡು ಹೋಗಿದ್ದು ಮಾತ್ರವಲ್ಲ ವಿಚ್ಛೇದನಕ್ಕೆ ಮುಂದಾಗಿದ್ದು ವಿಪರ್ಯಾಸ.



Click it and Unblock the Notifications