Latest Updates
-
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ!
ಯುವ ರಾಜ್ಕುಮಾರ್ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನಕ್ಕೆ ಅರ್ಜಿ ಹಾಕಿದ್ಯಾಕೆ ಯುವ..?
ರಾಜ್ಕುಮಾರ್ ಕುಟುಂಬದ ಕುಡಿ ಇತ್ತೀಚಿಗಷ್ಟೇ ಸಿನಿಮಾ ರಂಗದಲ್ಲೂ ಪ್ರವೇಶ ಪಡೆದಿದ್ದ ಯುವ ರಾಜ್ಕುಮಾರ್ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂದು ವರದಿಯಾಗಿದೆ. ನಟ ರಾಘವೇಂದ್ರ ರಾಜಕುಮಾರ್ ಪುತ್ರ ನಟ ಯುವ ರಾಜಕುಮಾರ್ ಅವರು 2019ರಲ್ಲಿ ಶ್ರೀದೇವಿ ಅವರೊಂದಿಗೆ ಮದುವೆ ಆಗಿದ್ದರು. ವೈಯಕ್ತಿಕ ಕಾರಣಗಳಿಂದ ಅವರ ಐದು ವರ್ಷಗಳ ದಾಂಪತ್ಯ ಜೀವನ ಮುರಿದು ಬಿದ್ದಿದೆ ಎನ್ನಲಾಗುತ್ತಿದೆ.
ಅವರು ವಿಚ್ಛದನ ಪಡೆಯಲು ಯುವ ಮತ್ತು ಅವರ ಪತ್ನಿ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಯುವ ರಾಜ್ ಕುಮಾರ್ ಪತ್ನಿ ಶ್ರೀದೇವಿಯವರು ವಿದೇಶದಲ್ಲಿದ್ದಾರೆ. ಆರು ತಿಂಗಳ ಹಿಂದೆ ಶ್ರೀದೇವಿಯಿಂದ ವಿಚ್ಛೇದನಕ್ಕೆ ಕೋರಿ ಯುವ ರಾಜಕುಮಾರ್ ಅವರು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ.

ಇತ್ತೀಚಿನ ವರ್ಷಗಳಲ್ಲಿ ಇವರಿಬ್ಬರ ನಡುವಿನ ಸಂಬಂಧ ಉತ್ತಮವಾಗಿರಲಿಲ್ಲ ಎಂದು ತಿಳಿದುಬಂದಿದೆ. ಪತ್ನಿ ವಿದೇಶದಲ್ಲೇ ಇರುತ್ತಿದ್ದರು, ಹೀಗಾಗಿ ಇಬ್ಬರಲ್ಲೂ ಹೊಂದಾಣಿಕೆ ಇರಲಿಲ್ಲ ಎಂದು ವರದಿಯಾಗಿದೆ. ಇದೇ ಕಾರಣಕ್ಕೆ ಇಬ್ಬರೂ ದೂರವಾಗಲು ಬಯಸಿದ್ದಾರೆ ಎಂದು ವರದಿಗಳು ತಿಳಿಸಿವೆ. ದಂಪತಿ ನಡುವೆ ಇತ್ತೀಚಿನ ದಿನಗಳಲ್ಲಿ ಸಂಬಂಧ ಹದಗೆಟ್ಟಿತ್ತು. ಹೀಗಾಗಿ ಯುವ ರಾಜ್ಕುಮಾರ್ ವಿವಾಹ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವಿವಾಹ ವಿಚ್ಚೇದನದ ಕುರಿತು ಶ್ರೀದೇವಿ ಭೈರಪ್ಪ ನಿರ್ಧಾರ ತಿಳಿದಿಲ್ಲ. ಯುವ ಸಿನಿಮಾದ ಮುಹೂರ್ತ ಸಮಯದಲ್ಲಿ ಯುವ ರಾಜ್ಕುಮಾರ್ ಮತ್ತು ಶ್ರೀದೇವಿ ಭೈರಪ್ಪ ಜತೆಯಾಗಿ ಕಾಣಿಸಿಕೊಂಡಿದ್ದರು. ಆದರೆ ಇದಾದ ಬಳಿಕ ಎಲ್ಲಿಯೂ ಅವರು ಕಾಣಿಸಿಕೊಂಡಿರಲಿಲ್ಲ.
ರಾಜ್ಕುಮಾರ್ ಕುಟುಂಬದಲ್ಲೇ ಮೊದಲ ವಿಚ್ಛೇದನ
ನಟ ರಾಜ್ಕುಮಾರ್ ಕುಟುಂಬವನ್ನ ದೊಡ್ಮನೆ ಎಂದು ಕರೆಯಲಾಗುತ್ತದೆ. ಇದೊಂದು ತುಂಬಿದ ಕುಟುಂಬವಾಗಿತ್ತು, ಆದರೆ ಯುವ ಹಾಗೂ ಶ್ರೀದೇವಿ ನಡುವಿನ ವಿಚ್ಛೇದನ ಕುಟುಂಬದಲ್ಲೇ ನಡೆಯುತ್ತಿರುವ ಮೊದಲ ವಿಚ್ಛೇದನ ಪ್ರಕರಣವಾಗಿದೆ. ಸದ್ಯ ಯುವ ಜೋಡಿ ಬೇರೆಯಾಗುತ್ತಿರುವ ಸುದ್ದಿ ಗಾಂಧಿ ನಗರದಲ್ಲಿ ಭಾರೀ ಸದ್ದು ಮಾಡುತ್ತಿದೆ. ಜೊತೆಗೆ ಅವರ ಅಭಿಮಾನಿಗಳಿಗೆ ಭರಸಿಡಿಲು ಬಡಿದಂತಾಗಿದೆ.
ನಟ ಯುವರಾಜ್ ಕುಮಾರ್ ಹಾಗೂ ಪತ್ನಿ ಶ್ರೀದೇವಿ ಭೈರಪ್ಪ ಅವರು ಪರಸ್ಪರ ಪ್ರೀತಿಸಿ ಮದುವೆ ಆಗಿದ್ದರು. ಮೇ 25 2019ರಲ್ಲಿ ಇವರಿಬ್ಬರು ಅದ್ಧೂರಿಯಾಗಿ ವಿವಾಹವಾಗಿದ್ದರು. ಅವರ ವಿವಾಹ ಮಹೋತ್ಸವಕ್ಕೆ ಇಡೀ ಚಿತ್ರರಂಗ ಸಾಕ್ಷಿಯಾಗಿತ್ತು. ಆದರೆ ಈಗ ಬೇರೆ ಬೇರೆ ಆರ್ಧಾರಕ್ಕೆ ಬಂದಿದ್ದಾರೆ.
ಯಾರು ಈ ಶ್ರೀದೇವಿ ಭೈರಪ್ಪ?
ಶ್ರೀದೇವಿ ಭೈರಪ್ಪ ಮೂಲತಃ ಮೈಸೂರಿನವರು. ಮೈಸೂರಿನಲ್ಲೇ ಹುಟ್ಟಿ ಬೆಳೆದವರು. ಡಾ ರಾಜ್ಕುಮಾರ್ ಸಿವಿಲ್ ಸರ್ವೀಸ್ ಅಕಾಡೆಮಿ ಉಸ್ತುವಾರಿ ವಹಿಸಿಕೊಂಡಿದ್ದ ಅವರು ಯುವ ರಾಜ್ಕುಮಾರ್ ಅವರನ್ನು ಪ್ರೀತಿ ಸಿ ಮದುವೆಯಾಗಿದ್ದರು. ಇದಕ್ಕೂ ಮೊದಲು ಸುಮಾರು 7 ರಿಂದ 8 ವರ್ಷಗಳ ಅವರು ಒಳ್ಳೆಯ ಸ್ನೇಹಿತರಾಗಿದ್ದರು. ಬಳಿಕ 2019ರಲ್ಲಿ ಮದುವೆಯಾಗಿ 5 ವರ್ಷಗಳ ದಾಂಪತ್ಯ ಜೀವನ ಕೊನೆಯಾಗಿಸಲು ಮುಂದಾಗಿದ್ದಾರೆ.
ಯುವರಾಜ್ಕುಮಾರ್ ಜೊತೆಗೆ ದೊಡ್ಮನೆಯವರ ಪ್ರೀತಿ ವಿಶ್ವಾಸ ಗಳಿಸಿದ್ದ ಅವರು ಕಳೆದ ಆರು ತಿಂಗಳಿನಿಂದ ಅಮೆರಿಕಾದಲ್ಲಿದ್ದಾರೆ. ಇನ್ನು ಪತ್ನಿ ಶ್ರೀದೇವಿಗೆ ಡಿವೋರ್ಸ್ ನೀಡಲು ಜೂನ್ 6ರಂದು ಬೆಂಗಳೂರಿನ ಫ್ಯಾಮಿಲಿ ಕೋರ್ಟ್ಗೆ ಯುವ ರಾಜ್ಕುಮಾರ್ ಅರ್ಜಿ ಸಲ್ಲಿಸಿದ್ದಾರೆ. ಶ್ರೀದೇವಿಗೆ ಡಿವೋರ್ಸ್ ನೋಟಿಸ್ ಕೂಡ ಕಳುಹಿಸಲಾಗಿದೆ.
ಇತ್ತ ಸ್ಯಾಂಡಲ್ವುಡ್ನಲ್ಲಿ ಒಂದು ವಾರದ ಒಳಗೆ ಕೇಳಿಬರುತ್ತಿರುವ ಎರಡನೇ ವಿಚ್ಛೇದನ ಪ್ರಕರಣ ಇದಾಗಿದೆ. ಈ ಮೊದಲು ಸಿಂಗರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ನಡುವಿನ ವಿಚ್ಛೇದನ ಸುದ್ದಿ ಬಾರೀ ಸದ್ದು ಮಾಡಿತ್ತು. ಈಗ ಯುವ ರಾಜ್ಕುಮಾರ್ ವಿಚ್ಛೇದನ ಸುದ್ದಿ ಶಾಕ್ ನೀಡಿದೆ.



Click it and Unblock the Notifications











