Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಶೋಭಾ ಮಾರಕ ಬೌಲಿಂಗ್ಗೆ ಯಡ್ಡಿ ಕ್ಲೀನ್ ಬೋಲ್ಡ್

ರಾಜಕೀಯದಲ್ಲಿ ಸಿಕ್ಸರ್, ಬೌಂಡರಿಗಳನ್ನು ಸಿಡಿಸಿದ ಅನುಭವ ಇರುವ ಯಡಿಯೂರಪ್ಪ ಆಟ ಇಲ್ಲಿ ನಡೆಯಲಿಲ್ಲ. ಶೋಭಾ ಬೌಲಿಂಗಿಗೆ ಕ್ಲೀನ್ ಬೌಲ್ಡ್ ಆದರು. ಯಡಿಯೂಪ್ಪ ಅವರ ಬ್ಯಾಟಿಂಗ್ಗಿಂತಲೂ ಶೋಭಾ ಅವರ ಮಾರಕ ಬೌಲಿಂಗ್ ಆಕರ್ಷಕವಾಗಿತ್ತು. ದೊಡ್ಡಕೆರೆ ಮೈದಾನದಲ್ಲಿ ರಾಜ್ಯ ಸಚಿವರ ಈ ಕ್ರಿಕೆಟ್ ಆಟ ಮೈಸೂರಿಗರಿಗೆ ರಸದೌತಣ ನೀಡಿತು.
ಮೈತ್ರಾದೇವಿ ಯಡಿಯೂರಪ್ಪ ಟ್ರಸ್ಟ್ ಆಯೋಜಿಸಿದ್ದ ದಿವಂಗತ ವರನಟ ಡಾ.ರಾಜ್ ಕುಮಾರ್ ಸವಿನೆನಪಿಗಾಗಿ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳವಾರ ಮೈಸೂರಿಗೆ ಆಗಮಿಸಿದ್ದರು. ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಪಂದ್ಯಾವಳಿ ನಡೆಯಲಿದೆ. ಈ ಸಂದರ್ಭದಲ್ಲಿ ಅವರು ಅರೆ ಕ್ಷಣ ರಾಜಕೀಯ ಮರೆತು ಬ್ಯಾಟು ಹಿಡಿದು ಮೈದಾನಕ್ಕೆ ಇಳಿದದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮದಾಸ್, ಅಬಕಾರಿ ಸಚಿವ ರೇಣುಕಾಚಾರ್ಯ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಮೂಡಾ ಅಧ್ಯಕ್ಷ ನಾಗೇಂದ್ರ, ಗೃಹ ಮಂಡಳಿ ಅಧ್ಯಕ್ಷ ಜಿ ಟಿ ದೇವೇಗೌಡ, ಮೇಯರ್ ಸಂದೇಶ್ ಸ್ವಾಮಿ ಸೇರಿದಂತೆ ಹಲವಾರು ಮುಖಂಡರು ಭಾಗಹಿಸಿದ್ದರು. ಅದೆಲ್ಲಾ ಸರಿ ಸಫಾರಿಯನ್ನು ಒಂಚೂರು ಒಳಗೆ ಸಿಗಿಸಿಕೊಂಡು, ಪ್ಯಾಡ್ ತೊಟ್ಟು ತಲೆಗೆ ಹೆಲ್ಮೆಟ್ ಹಾಕಿಕೊಂಡು ಬಂದಿದ್ದಿದ್ದರೆ ಥೇಟ್ ಆರಂಭಿಕ ಬ್ಯಾಟ್ಸ್ಮನ್ರಂತೆ ಕಂಗೊಳಿಸುತ್ತಿದ್ದರು ಎಂಬ ಮಾತುಗಳು ಕೇಳಿಬಂದಿವೆ.



Click it and Unblock the Notifications