Latest Updates
-
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್
ಶೋಭಾ ಮಾರಕ ಬೌಲಿಂಗ್ಗೆ ಯಡ್ಡಿ ಕ್ಲೀನ್ ಬೋಲ್ಡ್

ರಾಜಕೀಯದಲ್ಲಿ ಸಿಕ್ಸರ್, ಬೌಂಡರಿಗಳನ್ನು ಸಿಡಿಸಿದ ಅನುಭವ ಇರುವ ಯಡಿಯೂರಪ್ಪ ಆಟ ಇಲ್ಲಿ ನಡೆಯಲಿಲ್ಲ. ಶೋಭಾ ಬೌಲಿಂಗಿಗೆ ಕ್ಲೀನ್ ಬೌಲ್ಡ್ ಆದರು. ಯಡಿಯೂಪ್ಪ ಅವರ ಬ್ಯಾಟಿಂಗ್ಗಿಂತಲೂ ಶೋಭಾ ಅವರ ಮಾರಕ ಬೌಲಿಂಗ್ ಆಕರ್ಷಕವಾಗಿತ್ತು. ದೊಡ್ಡಕೆರೆ ಮೈದಾನದಲ್ಲಿ ರಾಜ್ಯ ಸಚಿವರ ಈ ಕ್ರಿಕೆಟ್ ಆಟ ಮೈಸೂರಿಗರಿಗೆ ರಸದೌತಣ ನೀಡಿತು.
ಮೈತ್ರಾದೇವಿ ಯಡಿಯೂರಪ್ಪ ಟ್ರಸ್ಟ್ ಆಯೋಜಿಸಿದ್ದ ದಿವಂಗತ ವರನಟ ಡಾ.ರಾಜ್ ಕುಮಾರ್ ಸವಿನೆನಪಿಗಾಗಿ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳವಾರ ಮೈಸೂರಿಗೆ ಆಗಮಿಸಿದ್ದರು. ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಪಂದ್ಯಾವಳಿ ನಡೆಯಲಿದೆ. ಈ ಸಂದರ್ಭದಲ್ಲಿ ಅವರು ಅರೆ ಕ್ಷಣ ರಾಜಕೀಯ ಮರೆತು ಬ್ಯಾಟು ಹಿಡಿದು ಮೈದಾನಕ್ಕೆ ಇಳಿದದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮದಾಸ್, ಅಬಕಾರಿ ಸಚಿವ ರೇಣುಕಾಚಾರ್ಯ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಮೂಡಾ ಅಧ್ಯಕ್ಷ ನಾಗೇಂದ್ರ, ಗೃಹ ಮಂಡಳಿ ಅಧ್ಯಕ್ಷ ಜಿ ಟಿ ದೇವೇಗೌಡ, ಮೇಯರ್ ಸಂದೇಶ್ ಸ್ವಾಮಿ ಸೇರಿದಂತೆ ಹಲವಾರು ಮುಖಂಡರು ಭಾಗಹಿಸಿದ್ದರು. ಅದೆಲ್ಲಾ ಸರಿ ಸಫಾರಿಯನ್ನು ಒಂಚೂರು ಒಳಗೆ ಸಿಗಿಸಿಕೊಂಡು, ಪ್ಯಾಡ್ ತೊಟ್ಟು ತಲೆಗೆ ಹೆಲ್ಮೆಟ್ ಹಾಕಿಕೊಂಡು ಬಂದಿದ್ದಿದ್ದರೆ ಥೇಟ್ ಆರಂಭಿಕ ಬ್ಯಾಟ್ಸ್ಮನ್ರಂತೆ ಕಂಗೊಳಿಸುತ್ತಿದ್ದರು ಎಂಬ ಮಾತುಗಳು ಕೇಳಿಬಂದಿವೆ.



Click it and Unblock the Notifications