Latest Updates
-
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!!
ಶೋಭಾ ಮಾರಕ ಬೌಲಿಂಗ್ಗೆ ಯಡ್ಡಿ ಕ್ಲೀನ್ ಬೋಲ್ಡ್

ರಾಜಕೀಯದಲ್ಲಿ ಸಿಕ್ಸರ್, ಬೌಂಡರಿಗಳನ್ನು ಸಿಡಿಸಿದ ಅನುಭವ ಇರುವ ಯಡಿಯೂರಪ್ಪ ಆಟ ಇಲ್ಲಿ ನಡೆಯಲಿಲ್ಲ. ಶೋಭಾ ಬೌಲಿಂಗಿಗೆ ಕ್ಲೀನ್ ಬೌಲ್ಡ್ ಆದರು. ಯಡಿಯೂಪ್ಪ ಅವರ ಬ್ಯಾಟಿಂಗ್ಗಿಂತಲೂ ಶೋಭಾ ಅವರ ಮಾರಕ ಬೌಲಿಂಗ್ ಆಕರ್ಷಕವಾಗಿತ್ತು. ದೊಡ್ಡಕೆರೆ ಮೈದಾನದಲ್ಲಿ ರಾಜ್ಯ ಸಚಿವರ ಈ ಕ್ರಿಕೆಟ್ ಆಟ ಮೈಸೂರಿಗರಿಗೆ ರಸದೌತಣ ನೀಡಿತು.
ಮೈತ್ರಾದೇವಿ ಯಡಿಯೂರಪ್ಪ ಟ್ರಸ್ಟ್ ಆಯೋಜಿಸಿದ್ದ ದಿವಂಗತ ವರನಟ ಡಾ.ರಾಜ್ ಕುಮಾರ್ ಸವಿನೆನಪಿಗಾಗಿ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳವಾರ ಮೈಸೂರಿಗೆ ಆಗಮಿಸಿದ್ದರು. ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಪಂದ್ಯಾವಳಿ ನಡೆಯಲಿದೆ. ಈ ಸಂದರ್ಭದಲ್ಲಿ ಅವರು ಅರೆ ಕ್ಷಣ ರಾಜಕೀಯ ಮರೆತು ಬ್ಯಾಟು ಹಿಡಿದು ಮೈದಾನಕ್ಕೆ ಇಳಿದದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮದಾಸ್, ಅಬಕಾರಿ ಸಚಿವ ರೇಣುಕಾಚಾರ್ಯ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಮೂಡಾ ಅಧ್ಯಕ್ಷ ನಾಗೇಂದ್ರ, ಗೃಹ ಮಂಡಳಿ ಅಧ್ಯಕ್ಷ ಜಿ ಟಿ ದೇವೇಗೌಡ, ಮೇಯರ್ ಸಂದೇಶ್ ಸ್ವಾಮಿ ಸೇರಿದಂತೆ ಹಲವಾರು ಮುಖಂಡರು ಭಾಗಹಿಸಿದ್ದರು. ಅದೆಲ್ಲಾ ಸರಿ ಸಫಾರಿಯನ್ನು ಒಂಚೂರು ಒಳಗೆ ಸಿಗಿಸಿಕೊಂಡು, ಪ್ಯಾಡ್ ತೊಟ್ಟು ತಲೆಗೆ ಹೆಲ್ಮೆಟ್ ಹಾಕಿಕೊಂಡು ಬಂದಿದ್ದಿದ್ದರೆ ಥೇಟ್ ಆರಂಭಿಕ ಬ್ಯಾಟ್ಸ್ಮನ್ರಂತೆ ಕಂಗೊಳಿಸುತ್ತಿದ್ದರು ಎಂಬ ಮಾತುಗಳು ಕೇಳಿಬಂದಿವೆ.



Click it and Unblock the Notifications











