Latest Updates
-
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್!
ಶೋಭಾ ಮಾರಕ ಬೌಲಿಂಗ್ಗೆ ಯಡ್ಡಿ ಕ್ಲೀನ್ ಬೋಲ್ಡ್

ರಾಜಕೀಯದಲ್ಲಿ ಸಿಕ್ಸರ್, ಬೌಂಡರಿಗಳನ್ನು ಸಿಡಿಸಿದ ಅನುಭವ ಇರುವ ಯಡಿಯೂರಪ್ಪ ಆಟ ಇಲ್ಲಿ ನಡೆಯಲಿಲ್ಲ. ಶೋಭಾ ಬೌಲಿಂಗಿಗೆ ಕ್ಲೀನ್ ಬೌಲ್ಡ್ ಆದರು. ಯಡಿಯೂಪ್ಪ ಅವರ ಬ್ಯಾಟಿಂಗ್ಗಿಂತಲೂ ಶೋಭಾ ಅವರ ಮಾರಕ ಬೌಲಿಂಗ್ ಆಕರ್ಷಕವಾಗಿತ್ತು. ದೊಡ್ಡಕೆರೆ ಮೈದಾನದಲ್ಲಿ ರಾಜ್ಯ ಸಚಿವರ ಈ ಕ್ರಿಕೆಟ್ ಆಟ ಮೈಸೂರಿಗರಿಗೆ ರಸದೌತಣ ನೀಡಿತು.
ಮೈತ್ರಾದೇವಿ ಯಡಿಯೂರಪ್ಪ ಟ್ರಸ್ಟ್ ಆಯೋಜಿಸಿದ್ದ ದಿವಂಗತ ವರನಟ ಡಾ.ರಾಜ್ ಕುಮಾರ್ ಸವಿನೆನಪಿಗಾಗಿ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳವಾರ ಮೈಸೂರಿಗೆ ಆಗಮಿಸಿದ್ದರು. ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಪಂದ್ಯಾವಳಿ ನಡೆಯಲಿದೆ. ಈ ಸಂದರ್ಭದಲ್ಲಿ ಅವರು ಅರೆ ಕ್ಷಣ ರಾಜಕೀಯ ಮರೆತು ಬ್ಯಾಟು ಹಿಡಿದು ಮೈದಾನಕ್ಕೆ ಇಳಿದದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮದಾಸ್, ಅಬಕಾರಿ ಸಚಿವ ರೇಣುಕಾಚಾರ್ಯ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಮೂಡಾ ಅಧ್ಯಕ್ಷ ನಾಗೇಂದ್ರ, ಗೃಹ ಮಂಡಳಿ ಅಧ್ಯಕ್ಷ ಜಿ ಟಿ ದೇವೇಗೌಡ, ಮೇಯರ್ ಸಂದೇಶ್ ಸ್ವಾಮಿ ಸೇರಿದಂತೆ ಹಲವಾರು ಮುಖಂಡರು ಭಾಗಹಿಸಿದ್ದರು. ಅದೆಲ್ಲಾ ಸರಿ ಸಫಾರಿಯನ್ನು ಒಂಚೂರು ಒಳಗೆ ಸಿಗಿಸಿಕೊಂಡು, ಪ್ಯಾಡ್ ತೊಟ್ಟು ತಲೆಗೆ ಹೆಲ್ಮೆಟ್ ಹಾಕಿಕೊಂಡು ಬಂದಿದ್ದಿದ್ದರೆ ಥೇಟ್ ಆರಂಭಿಕ ಬ್ಯಾಟ್ಸ್ಮನ್ರಂತೆ ಕಂಗೊಳಿಸುತ್ತಿದ್ದರು ಎಂಬ ಮಾತುಗಳು ಕೇಳಿಬಂದಿವೆ.



Click it and Unblock the Notifications