Latest Updates
-
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ!
ಶೋಭಾ ಮಾರಕ ಬೌಲಿಂಗ್ಗೆ ಯಡ್ಡಿ ಕ್ಲೀನ್ ಬೋಲ್ಡ್

ರಾಜಕೀಯದಲ್ಲಿ ಸಿಕ್ಸರ್, ಬೌಂಡರಿಗಳನ್ನು ಸಿಡಿಸಿದ ಅನುಭವ ಇರುವ ಯಡಿಯೂರಪ್ಪ ಆಟ ಇಲ್ಲಿ ನಡೆಯಲಿಲ್ಲ. ಶೋಭಾ ಬೌಲಿಂಗಿಗೆ ಕ್ಲೀನ್ ಬೌಲ್ಡ್ ಆದರು. ಯಡಿಯೂಪ್ಪ ಅವರ ಬ್ಯಾಟಿಂಗ್ಗಿಂತಲೂ ಶೋಭಾ ಅವರ ಮಾರಕ ಬೌಲಿಂಗ್ ಆಕರ್ಷಕವಾಗಿತ್ತು. ದೊಡ್ಡಕೆರೆ ಮೈದಾನದಲ್ಲಿ ರಾಜ್ಯ ಸಚಿವರ ಈ ಕ್ರಿಕೆಟ್ ಆಟ ಮೈಸೂರಿಗರಿಗೆ ರಸದೌತಣ ನೀಡಿತು.
ಮೈತ್ರಾದೇವಿ ಯಡಿಯೂರಪ್ಪ ಟ್ರಸ್ಟ್ ಆಯೋಜಿಸಿದ್ದ ದಿವಂಗತ ವರನಟ ಡಾ.ರಾಜ್ ಕುಮಾರ್ ಸವಿನೆನಪಿಗಾಗಿ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳವಾರ ಮೈಸೂರಿಗೆ ಆಗಮಿಸಿದ್ದರು. ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಪಂದ್ಯಾವಳಿ ನಡೆಯಲಿದೆ. ಈ ಸಂದರ್ಭದಲ್ಲಿ ಅವರು ಅರೆ ಕ್ಷಣ ರಾಜಕೀಯ ಮರೆತು ಬ್ಯಾಟು ಹಿಡಿದು ಮೈದಾನಕ್ಕೆ ಇಳಿದದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮದಾಸ್, ಅಬಕಾರಿ ಸಚಿವ ರೇಣುಕಾಚಾರ್ಯ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಮೂಡಾ ಅಧ್ಯಕ್ಷ ನಾಗೇಂದ್ರ, ಗೃಹ ಮಂಡಳಿ ಅಧ್ಯಕ್ಷ ಜಿ ಟಿ ದೇವೇಗೌಡ, ಮೇಯರ್ ಸಂದೇಶ್ ಸ್ವಾಮಿ ಸೇರಿದಂತೆ ಹಲವಾರು ಮುಖಂಡರು ಭಾಗಹಿಸಿದ್ದರು. ಅದೆಲ್ಲಾ ಸರಿ ಸಫಾರಿಯನ್ನು ಒಂಚೂರು ಒಳಗೆ ಸಿಗಿಸಿಕೊಂಡು, ಪ್ಯಾಡ್ ತೊಟ್ಟು ತಲೆಗೆ ಹೆಲ್ಮೆಟ್ ಹಾಕಿಕೊಂಡು ಬಂದಿದ್ದಿದ್ದರೆ ಥೇಟ್ ಆರಂಭಿಕ ಬ್ಯಾಟ್ಸ್ಮನ್ರಂತೆ ಕಂಗೊಳಿಸುತ್ತಿದ್ದರು ಎಂಬ ಮಾತುಗಳು ಕೇಳಿಬಂದಿವೆ.



Click it and Unblock the Notifications