Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಶೋಭಾ ಮಾರಕ ಬೌಲಿಂಗ್ಗೆ ಯಡ್ಡಿ ಕ್ಲೀನ್ ಬೋಲ್ಡ್

ರಾಜಕೀಯದಲ್ಲಿ ಸಿಕ್ಸರ್, ಬೌಂಡರಿಗಳನ್ನು ಸಿಡಿಸಿದ ಅನುಭವ ಇರುವ ಯಡಿಯೂರಪ್ಪ ಆಟ ಇಲ್ಲಿ ನಡೆಯಲಿಲ್ಲ. ಶೋಭಾ ಬೌಲಿಂಗಿಗೆ ಕ್ಲೀನ್ ಬೌಲ್ಡ್ ಆದರು. ಯಡಿಯೂಪ್ಪ ಅವರ ಬ್ಯಾಟಿಂಗ್ಗಿಂತಲೂ ಶೋಭಾ ಅವರ ಮಾರಕ ಬೌಲಿಂಗ್ ಆಕರ್ಷಕವಾಗಿತ್ತು. ದೊಡ್ಡಕೆರೆ ಮೈದಾನದಲ್ಲಿ ರಾಜ್ಯ ಸಚಿವರ ಈ ಕ್ರಿಕೆಟ್ ಆಟ ಮೈಸೂರಿಗರಿಗೆ ರಸದೌತಣ ನೀಡಿತು.
ಮೈತ್ರಾದೇವಿ ಯಡಿಯೂರಪ್ಪ ಟ್ರಸ್ಟ್ ಆಯೋಜಿಸಿದ್ದ ದಿವಂಗತ ವರನಟ ಡಾ.ರಾಜ್ ಕುಮಾರ್ ಸವಿನೆನಪಿಗಾಗಿ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳವಾರ ಮೈಸೂರಿಗೆ ಆಗಮಿಸಿದ್ದರು. ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಪಂದ್ಯಾವಳಿ ನಡೆಯಲಿದೆ. ಈ ಸಂದರ್ಭದಲ್ಲಿ ಅವರು ಅರೆ ಕ್ಷಣ ರಾಜಕೀಯ ಮರೆತು ಬ್ಯಾಟು ಹಿಡಿದು ಮೈದಾನಕ್ಕೆ ಇಳಿದದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮದಾಸ್, ಅಬಕಾರಿ ಸಚಿವ ರೇಣುಕಾಚಾರ್ಯ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಮೂಡಾ ಅಧ್ಯಕ್ಷ ನಾಗೇಂದ್ರ, ಗೃಹ ಮಂಡಳಿ ಅಧ್ಯಕ್ಷ ಜಿ ಟಿ ದೇವೇಗೌಡ, ಮೇಯರ್ ಸಂದೇಶ್ ಸ್ವಾಮಿ ಸೇರಿದಂತೆ ಹಲವಾರು ಮುಖಂಡರು ಭಾಗಹಿಸಿದ್ದರು. ಅದೆಲ್ಲಾ ಸರಿ ಸಫಾರಿಯನ್ನು ಒಂಚೂರು ಒಳಗೆ ಸಿಗಿಸಿಕೊಂಡು, ಪ್ಯಾಡ್ ತೊಟ್ಟು ತಲೆಗೆ ಹೆಲ್ಮೆಟ್ ಹಾಕಿಕೊಂಡು ಬಂದಿದ್ದಿದ್ದರೆ ಥೇಟ್ ಆರಂಭಿಕ ಬ್ಯಾಟ್ಸ್ಮನ್ರಂತೆ ಕಂಗೊಳಿಸುತ್ತಿದ್ದರು ಎಂಬ ಮಾತುಗಳು ಕೇಳಿಬಂದಿವೆ.



Click it and Unblock the Notifications
