Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಶೋಭಾ ಮಾರಕ ಬೌಲಿಂಗ್ಗೆ ಯಡ್ಡಿ ಕ್ಲೀನ್ ಬೋಲ್ಡ್

ರಾಜಕೀಯದಲ್ಲಿ ಸಿಕ್ಸರ್, ಬೌಂಡರಿಗಳನ್ನು ಸಿಡಿಸಿದ ಅನುಭವ ಇರುವ ಯಡಿಯೂರಪ್ಪ ಆಟ ಇಲ್ಲಿ ನಡೆಯಲಿಲ್ಲ. ಶೋಭಾ ಬೌಲಿಂಗಿಗೆ ಕ್ಲೀನ್ ಬೌಲ್ಡ್ ಆದರು. ಯಡಿಯೂಪ್ಪ ಅವರ ಬ್ಯಾಟಿಂಗ್ಗಿಂತಲೂ ಶೋಭಾ ಅವರ ಮಾರಕ ಬೌಲಿಂಗ್ ಆಕರ್ಷಕವಾಗಿತ್ತು. ದೊಡ್ಡಕೆರೆ ಮೈದಾನದಲ್ಲಿ ರಾಜ್ಯ ಸಚಿವರ ಈ ಕ್ರಿಕೆಟ್ ಆಟ ಮೈಸೂರಿಗರಿಗೆ ರಸದೌತಣ ನೀಡಿತು.
ಮೈತ್ರಾದೇವಿ ಯಡಿಯೂರಪ್ಪ ಟ್ರಸ್ಟ್ ಆಯೋಜಿಸಿದ್ದ ದಿವಂಗತ ವರನಟ ಡಾ.ರಾಜ್ ಕುಮಾರ್ ಸವಿನೆನಪಿಗಾಗಿ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳವಾರ ಮೈಸೂರಿಗೆ ಆಗಮಿಸಿದ್ದರು. ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಪಂದ್ಯಾವಳಿ ನಡೆಯಲಿದೆ. ಈ ಸಂದರ್ಭದಲ್ಲಿ ಅವರು ಅರೆ ಕ್ಷಣ ರಾಜಕೀಯ ಮರೆತು ಬ್ಯಾಟು ಹಿಡಿದು ಮೈದಾನಕ್ಕೆ ಇಳಿದದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮದಾಸ್, ಅಬಕಾರಿ ಸಚಿವ ರೇಣುಕಾಚಾರ್ಯ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಮೂಡಾ ಅಧ್ಯಕ್ಷ ನಾಗೇಂದ್ರ, ಗೃಹ ಮಂಡಳಿ ಅಧ್ಯಕ್ಷ ಜಿ ಟಿ ದೇವೇಗೌಡ, ಮೇಯರ್ ಸಂದೇಶ್ ಸ್ವಾಮಿ ಸೇರಿದಂತೆ ಹಲವಾರು ಮುಖಂಡರು ಭಾಗಹಿಸಿದ್ದರು. ಅದೆಲ್ಲಾ ಸರಿ ಸಫಾರಿಯನ್ನು ಒಂಚೂರು ಒಳಗೆ ಸಿಗಿಸಿಕೊಂಡು, ಪ್ಯಾಡ್ ತೊಟ್ಟು ತಲೆಗೆ ಹೆಲ್ಮೆಟ್ ಹಾಕಿಕೊಂಡು ಬಂದಿದ್ದಿದ್ದರೆ ಥೇಟ್ ಆರಂಭಿಕ ಬ್ಯಾಟ್ಸ್ಮನ್ರಂತೆ ಕಂಗೊಳಿಸುತ್ತಿದ್ದರು ಎಂಬ ಮಾತುಗಳು ಕೇಳಿಬಂದಿವೆ.



Click it and Unblock the Notifications