Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಶೋಭಾ ಮಾರಕ ಬೌಲಿಂಗ್ಗೆ ಯಡ್ಡಿ ಕ್ಲೀನ್ ಬೋಲ್ಡ್

ರಾಜಕೀಯದಲ್ಲಿ ಸಿಕ್ಸರ್, ಬೌಂಡರಿಗಳನ್ನು ಸಿಡಿಸಿದ ಅನುಭವ ಇರುವ ಯಡಿಯೂರಪ್ಪ ಆಟ ಇಲ್ಲಿ ನಡೆಯಲಿಲ್ಲ. ಶೋಭಾ ಬೌಲಿಂಗಿಗೆ ಕ್ಲೀನ್ ಬೌಲ್ಡ್ ಆದರು. ಯಡಿಯೂಪ್ಪ ಅವರ ಬ್ಯಾಟಿಂಗ್ಗಿಂತಲೂ ಶೋಭಾ ಅವರ ಮಾರಕ ಬೌಲಿಂಗ್ ಆಕರ್ಷಕವಾಗಿತ್ತು. ದೊಡ್ಡಕೆರೆ ಮೈದಾನದಲ್ಲಿ ರಾಜ್ಯ ಸಚಿವರ ಈ ಕ್ರಿಕೆಟ್ ಆಟ ಮೈಸೂರಿಗರಿಗೆ ರಸದೌತಣ ನೀಡಿತು.
ಮೈತ್ರಾದೇವಿ ಯಡಿಯೂರಪ್ಪ ಟ್ರಸ್ಟ್ ಆಯೋಜಿಸಿದ್ದ ದಿವಂಗತ ವರನಟ ಡಾ.ರಾಜ್ ಕುಮಾರ್ ಸವಿನೆನಪಿಗಾಗಿ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳವಾರ ಮೈಸೂರಿಗೆ ಆಗಮಿಸಿದ್ದರು. ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಪಂದ್ಯಾವಳಿ ನಡೆಯಲಿದೆ. ಈ ಸಂದರ್ಭದಲ್ಲಿ ಅವರು ಅರೆ ಕ್ಷಣ ರಾಜಕೀಯ ಮರೆತು ಬ್ಯಾಟು ಹಿಡಿದು ಮೈದಾನಕ್ಕೆ ಇಳಿದದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮದಾಸ್, ಅಬಕಾರಿ ಸಚಿವ ರೇಣುಕಾಚಾರ್ಯ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಮೂಡಾ ಅಧ್ಯಕ್ಷ ನಾಗೇಂದ್ರ, ಗೃಹ ಮಂಡಳಿ ಅಧ್ಯಕ್ಷ ಜಿ ಟಿ ದೇವೇಗೌಡ, ಮೇಯರ್ ಸಂದೇಶ್ ಸ್ವಾಮಿ ಸೇರಿದಂತೆ ಹಲವಾರು ಮುಖಂಡರು ಭಾಗಹಿಸಿದ್ದರು. ಅದೆಲ್ಲಾ ಸರಿ ಸಫಾರಿಯನ್ನು ಒಂಚೂರು ಒಳಗೆ ಸಿಗಿಸಿಕೊಂಡು, ಪ್ಯಾಡ್ ತೊಟ್ಟು ತಲೆಗೆ ಹೆಲ್ಮೆಟ್ ಹಾಕಿಕೊಂಡು ಬಂದಿದ್ದಿದ್ದರೆ ಥೇಟ್ ಆರಂಭಿಕ ಬ್ಯಾಟ್ಸ್ಮನ್ರಂತೆ ಕಂಗೊಳಿಸುತ್ತಿದ್ದರು ಎಂಬ ಮಾತುಗಳು ಕೇಳಿಬಂದಿವೆ.



Click it and Unblock the Notifications