Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
ರಾಜಮನೆತನದ ವಿವಾಹ ಆಹ್ವಾನ ಪತ್ರಿಕಾ

ವಿಲಿಯಂ ಮತ್ತು ಕೇಟ್ ಇಬ್ಬರ ವಯಸ್ಸೂ 29. ಮದುವೆ ಆಗುತ್ತಿರುವ ದಿನಾಂಕವೂ 29. ಅದೊಂದು ವಿಶೇಷ. ವಧೂ ವರರ ನಡುವಿನ ವಯಸ್ಸಿನ ಅಂತರ ಎಷ್ಟಿರಬೇಕು ಎಂಬ ಚರ್ಚೆಗಳನ್ನು ಚರ್ಚುಗಳಿಗೆ ಬಿಟ್ಟು ವೆಸ್ಟ್ ಮಿನಿಸ್ಟರ್ ಅಬ್ಬೆಯಲ್ಲಿ ಮದುವೆಗೆ ಭರದಿಂದ ಸಿದ್ಧತೆಗಳು ನಡೆಯುತ್ತಿವೆ. ಹುಡುಗ ಹುಡುಗಿಯ ನಡುವಿನ ವರ್ಗ ಭೇದಕ್ಕೂ ಈ ಮಂಗಳಕಾರ್ಯ ಮಂಗಳವನ್ನೇ ಹಾಡಿದೆ. ವಿಲಿಯಂ ರಾಜಕುಮಾರ ಆಗರ್ಭ ಶ್ರೀಮಂತ. ವಧು ಮಧ್ಯ ಇಂಗ್ಲೆಂಡಿನಿಂದ ಬಂದ ಮಧ್ಯಮ ವರ್ಗದ ಹುಡುಗಿ.
ಈ ವೈವಾಹಿಕ ಸಂಬಂಧಗಳ ವಿಶಿಷ್ಟತೆ ಇಂದೇನೂ ಹೊಸತಲ್ಲ. ವಿಲಿಯಂನ ಅಪ್ಪ ಕೂಡ ಇದೇ ದಾರಿ ಹಿಡಿದಿದ್ದ. ಬಡವರ ಮನೆ ಹುಡುಗಿ ಡಯಾನಾಳನ್ನು ವರಿಸಿ ಮದುವೆ ಆಗಿದ್ದ. ಪ್ರೀತಿ ಪ್ರೇಮ ಪ್ರಣಯದಲ್ಲಿ ಬಡತನ ಸಿರಿತನ ಜಗಳಕ್ಕೆ ಜಾಗ ಇಲ್ಲ ಎಂದು ಆತ ತೋರಿಸಿದ್ದ. ಮುದ್ದಾದ ಎರಡು ಮಕ್ಕಳೂ ಜನಿಸಿದವು. ಚಾರ್ಲ್ಸ್ ಈಗ ವಿಧುರ.
ದೇವಾನುದೇವತೆಗಳ ಮನೆಯಂಗಳದಲ್ಲಿ ಮಂಗಳ ಕಾರ್ಯ ನಡೆಯುತ್ತಿದ್ದರೆ ದಾನವರು ಬೆಂಕಿ ಉಂಡೆಗಳನ್ನು ಎರಚುವುದರ ಮೂಲಕ ವಿಘ್ನ ಉಂಟುಮಾಡುವುದನ್ನು ನಾವು ಭಾರತೀಯ ಪೌರಾಣಿಕ ಚಲನಚಿತ್ರಗಳಲ್ಲಿ ಅಥವಾ ಕಾರ್ಟೂನುಗಳಲ್ಲಿ ನೋಡಿರುತ್ತೀವಿ. ಈ ಮದುವೆಗೂ ಕೂಡ ಅಡ್ಡಿ ಆತಂಕ ಉಂಟುಮಾಡಲು ಬ್ರಿಟನ್ನಿನ ಮುಸ್ಲಿಂ ಬಾಂಧವರು ಮುಂದಾಗಿದ್ದಾರೆ. ಮದುವೆ ವೇಳೆ ಕಪ್ಪು ಬಾವುಟ ಪ್ರದರ್ಶನಕ್ಕೆ ಅವಕಾಶ ಕೊಡುವಂತೆ ಪೊಲೀಸ್ ಕಮಿಷನರ್ಗೆ ಅಪ್ಲಿಕೇಷನ್ ಹಾಕಿಕೊಂಡಿದ್ದಾರೆ.
ಸ್ಕಾಟ್ ಲ್ಯಾಂಡ್ ಪೊಲೀಸರು ಅವಕಾಶ ಕೊಡುವುದಿಲ್ಲ. ಆಕಸ್ಮಾತ್ ಅವಕಾಶ ಕೊಟ್ಟರೆ ತಾವೂ ಕೂಡ ಪ್ರತಿಭಟನಾ ಪ್ರದರ್ಶನದಲ್ಲಿ ತೊಡಗುವುದಾಗಿ ಬ್ರಿಟನ್ನಿನ ರಕ್ಷಣಾ ಇಲಾಖೆ ಹೇಳಿಕೆ ನೀಡಿದೆ. ಇದೇ ವೇಳೆ ವಿವಾಹ ಕಾರ್ಯಕ್ರಮದ ವೇಳೆ ಬಂದೋಬಸ್ತಿಗಾಗಿ 5,000 ಪೊಲೀಸರನ್ನು ನಿಯೋಜಿಸಲಾಗಿದೆ. ದಿಬ್ಬಣ ಸಾಗಿಬರುವ ದಾರಿಯುದ್ದಕ್ಕೂ ಅವಘಡ ಸಂಭವಿಸುವ ಯಾವುದೇ ಕುತಂತ್ರವನ್ನು ಮೊಳಕೆಯಲ್ಲೇ ಚಿವುಟಿ ಹಾಕಲು ಪೊಲೀಸರು ಕಣ್ಣಲ್ಲಿ ಕಣ್ಣಿಟ್ಟು ತಪಾಸಣೆ ಮಾಡುತ್ತಿದ್ದಾರೆ. ಅಂದ ಹಾಗೆ, ಈ ರಾಯಲ್ ವೆಡ್ಡಿಂಗಿಗೆ ಎಷ್ಟು ಖರ್ಚಾಗುತ್ತದೆಂದು ಯಾರಾದರೂ ಲೆಕ್ಕ ಹಾಕಿ ವಿವರ ನಮಗೆ ನೀಡುತ್ತೀರಾ?



Click it and Unblock the Notifications