Latest Updates
-
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ!
ಮೇ 21 : ಪ್ರಳಯ, ಕ್ರಿಸ್ತನ ನಿರೀಕ್ಷೆಯಲ್ಲಿ ಅಮೆರಿಕ!

ಮೇ 21, ವಿಶ್ವ ಅಂತ್ಯವಾಗುವ ದಿನ. ಜಗತ್ ಪ್ರಳಯ ಸಂಭವಿಸಿ ವರ್ಷಾನುವರ್ಷಗಳಿಂದ ಕೂಡಿಟ್ಟ ಆಸ್ತಿಪಾಸ್ತಿ, ಬಂಧುಬಳಗವನ್ನು ಕಳೆದುಕೊಳ್ಳುತ್ತೇವೆಂಬ ಭಯ ಅನೇಕರಲ್ಲಿ ಆವರಿಸಿದೆ. ರಕ್ಷಕನಾದ ಕ್ರೈಸ್ತ ಜೀವಜಗತ್ತನ್ನು ಕಾಪಾಡಲೆಂದು ಇಂದು ಅವತರಿಸಿ ಬರಲಿದ್ದಾನೆ ಎಂದು ಕ್ರೈಸ್ತ ಸಮೂಹ ಕಾದು ಕುಳಿತಿದೆ. ಊರತುಂಬೆಲ್ಲ ಇದೆ ಮಾತು. ಹಾಗಾಗತ್ತಂತೆ, ಹೀಗಾಗತ್ತಂತೆ! ಉಳಿದಂತೆ ವ್ಯಾಪಾರ ತನ್ನಷ್ಟಕ್ಕೆ ತಾನು ನಡೆಯುತ್ತಿದೆ.
ಇಗರ್ಜಿಗಳು ಸಾಮೂಹಿಕ ಪ್ರಾರ್ಥನೆಗಳನ್ನು ಏರ್ಪಡಿಸಿವೆ. ಟಿವಿ, ರೇಡಿಯೋಗಳ ಮುಖಾಂತರ ಇಂದಿನ ದಿನದ ಎಚ್ಚರದಿಂದಿರಬೇಕೆಂದು ಸಾರಿಸಾರಿ ಹೇಳಲಾಗುತ್ತಿದೆ. ಬಸ್ ನಿಲ್ದಾಣ, ಮಾಲ್, ಸೇತುವೆ, ಕಟ್ಟಡಗಳು, ಹೋರ್ಡಿಂಗ್, ಪೋಸ್ಟ್ ಕಾರ್ಡ್, ಇಂಟರ್ನೆಟ್, ಮೊಬೈಲ್ ಮುಖಾಂತರ ಕ್ರೈಸ್ತ ಬರುತ್ತಿರುವ ಸಂದೇಶವನ್ನು ರವಾನಿಸಲಾಗುತ್ತಿದೆ. ನಮ್ಮ ಜ್ಯೋತಿಷಿಗಳಂತೆ ಅಲ್ಲಿನ ಬ್ರಹ್ಮಾಂಡ ಜ್ಯೋತಿಷಿಗಳು ತಮಗೆ ತಿಳಿದದ್ದು ಹೇಳುತ್ತಿದ್ದಾರೆ.
ಮೇಲಿಂದ ಮೇಲೆ ಸರ್ವನಾಶ ಮಾಡುವಂಥ ಭೂಕಂಪನಗಳಾಗುತ್ತಿವೆ, ಭೂತಾಪಮಾನ ಜಾಸ್ತಿಯಾಗುತ್ತಿದೆ, ಅಣ್ವಸ್ತ್ರ ಬಳಕೆಯ ಬಗ್ಗೆ ಹೆದರಿಕೆ ತಲೆಯ ಮೇಲೆ ತೂಗುತ್ತಿದೆ, ಭ್ರಷ್ಟಾಚಾರ ವಿಶ್ವವ್ಯಾಪಿಸಿದೆ, ಅಪರಾಧ ಜಾಸ್ತಿಯಾಗುತ್ತಿದೆ, ಆರ್ಥಿಕ ಮುಗ್ಗಟ್ಟು ತನ್ನ ಮುಷ್ಠಿ ಬಿಗಿ ಮಾಡುತ್ತಿದೆ... ಈ ಎಲ್ಲ ಕಾರಣಗಳು ಭೂಮಿಯ ಸರ್ವನಾಶಕ್ಕೆ ನಾಂದಿ ಹಾಡಲಿವೆ ಎಂದು ಅನೇಕರು ನಂಬಿದ್ದಾರೆ.
ಜಗತ್ ಪ್ರಳಯ ಇಂದೇ ಆಗುತ್ತದೆಂದು ನಂಬಿರುವ ಜನತೆಯಲ್ಲಿ ವಿಚಿತ್ರ ಭಯ ವ್ಯಾಪಿಸಿದೆ. ಜಗದ್ ರಕ್ಷಕನಾದ ಭಗವಂತನೆ, ಅವತರಿಸಿ ನಮ್ಮನ್ನು ಕಾಪಾಡು ತಂದೆಯೇ ಎಂದು ಜನರು ಪರಿಪರಿಯಾಗಿ ಪ್ರಾರ್ಥಿಸುತ್ತಿದ್ದಾರೆ. (ಓದಿ : ಪ್ರಾರ್ಥನೆಗೂ ಒಂದು ದಿನ) ಇದೇ ದಿನ ರೈಟ್ ಬ್ರದರ್ಸ್ ತಾವು ನಿರ್ಮಿಸಿದ್ದ ವಿಮಾನ ಎಷ್ಟೇ ಪ್ರಯತ್ನ ಪಟ್ಟರೂ ಹಾರಾಡಿದ್ದಿದಿಲ್ಲವಂತೆ. ಕೆಲಸ ಬೊಗಸಿ ಎಲ್ಲ ಬಿಟ್ಟ ಜನ ಕ್ರೈಸ್ತ ಪರಮಾತ್ಮ ಬರುತ್ತಾನೆಂದು ಕಾದಿದ್ದಾರೆ. ಬರುತ್ತಾನೆಯೆ? ಬಂದರೂ ಪ್ರಳಯವಾಗುವ ಮೊದಲು ಬರುತ್ತಾನೋ, ಆದ ನಂತರ ಬರುತ್ತಾನೋ ಗೊತ್ತಿಲ್ಲ!



Click it and Unblock the Notifications