Latest Updates
-
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ!
ತರ್ಕಕ್ಕೆ ಸಿಕ್ಕದ ಟಿವಿ9 ಕಾರ್ಯಕ್ರಮ ಹೀಗೂ ಉಂಠೇ

ಜನಪ್ರಿಯತೆ ಮಂಚೂಣಿಯಲ್ಲಿರುವ ಟಿವಿ9 ಒಳಗೆ ಪ್ರಸಾರವಾಗುವ ರೋಮಾಂಚಕ ಕಾರ್ಯಕ್ರಮಗಳಲ್ಲಿ "ಹೀಗೂ ಉಂಟೆ"ಗೆ ಮೊದಲ ಸ್ಥಾನ. ನಮ್ಮನೆಗಳ ಹೆಂಗಸರು ನಂಬಿಕೆ ಅಪನಂಬಿಕೆಗಳನ್ನು ಸ್ಟೌವ್ ಮೇಲಿಟ್ಟು ಇದನ್ನು ನೋಡುತ್ತಾ ಕುಳಿತರೆ ಮುಗಿಯಿತು ಕೆಲಸ. ಅಡುಗೆ ಮನೆಯಲ್ಲಿ ಹಾಲು ಉಕ್ಕುವುದು ಖಂಡಿತ.
ಉಕ್ಕಿ ಹರಿದ ಹಾಲು ನಮ್ಮ ವೆಬ್ ಸೈಟಿನ ವೆರಾಂಡದವರೆವಿಗೂ ಹರಿದು ಬರುವುದು ವಾಡಿಕೆ. "ಟಿವಿ9ನೊಳಗೆ ಹೇಳಿದರಂತೆ, ಅದರ ಬಗ್ಗೆ ಹೆಚ್ಚಿನ ವಿವರ ಕೊಡಿ, ಅಡ್ರೆಸ್ ಮತ್ತು ಫೋನ್ ನಂಬರುಗಳನ್ನೂ ಕೊಡಿ" ಎಂದು ಕೇಳಿ ಬರುವ ಸಪೋರ್ಟ್ ರಿಕ್ವೆಸ್ಟುಗಳನ್ನು ನಿಭಾಯಿಸುವುದು ನಮಗೆ ಕಷ್ಟವೇ ಆಗುತ್ತದೆ.
ನಿನ್ನೆ ಸೋಮವಾರ ಒಬ್ಬ ಮಹರಾಯ್ ಗಿತ್ತಿ ನಮ್ಮ ಫೋನ್ ನಂಬರ್ ಪತ್ತೆ ಮಾಡಿ ಸೀದಾ ಕೇಳಿಬಿಟ್ಟರು. ಆಕೆಯ ಹೆಸರು ಗಿರಿಜಾ, ತಿಪಟೂರಿನವರಂತೆ. "ನಿಮಗೆ ಗೊತ್ತಿರತ್ತೆ ಕೊಡಿ ಸಾರ್" ಎನ್ನುವುದು ಆಕೆಯ ಆಗ್ರಹ. ಅವರು ಹೇಳುವುದು ಇಷ್ಟು:
"ಈಚೆಗೆ ಟಿವಿ9 ನಲ್ಲಿ ಒಂದು ಪ್ರೊಗ್ರಾಂ ಬಂತಂತೆ. ಶಿಂಷಾಗೆ ಸ್ವಲ್ಪ ದೂರದಲ್ಲಿ ಒಂದು ಹಳ್ಳಿ ಇದೆಯಂತೆ. ಅಲ್ಲಿರುವ ಶ್ರೀಚಕ್ರ ಅಥವಾ ಸೋಮೇಶ್ವರ ಎಂಬ ದೇವಸ್ಥಾನದಲ್ಲಿ ಬಾವಿಯೋ, ಕೆರೆಯೋ ಒಟ್ಟಾರೆ ಒಂದು ನೀರಿನ ಸೆಲೆ ಇದೆಯಂತೆ. ಆ ನೀರಿನಲ್ಲಿ ಚಕ್ರತೀರ್ಥ ಇದೆಯಂತೆ. ಅಲ್ಲಿಗೆ ಹೋಗಿ ಬಂದರೆ ಕಾರ್ಯಸಿದ್ಧಿ ಆಗುತ್ತದಂತೆ."
ಕಳೆದುಹೋದದ್ದು ಏನೇ ಆಗಿರಲಿ. ಓಲೆ, ಉಂಗುರ, ಬೈಕು, ಮಗು, ಎಮ್ಮೆ, ಹಸ ಕರ, ಪಾಸ್ ಪೋರ್ಟು, ಸಾಕುನಾಯಿ, ಗೆಳೆಯ, ಗೆಳತಿ, ನೆಮ್ಮದಿ ವಾಪಸ್ಸು ಸಿಗತ್ತಂತೆ ಅದಕ್ಕಾಗಿ ತಾವುಗಳು ಮಾಡಬೇಕಾದುದು ಇಷ್ಟೆ ಎಂದು ನಾರಾಯಣ ಸ್ವಾಮಿ ಹೇಳಿದಾರಂತೆ:
ಆ ಹಳ್ಳಿಗೆ ಹೋಗಿ ಎರಡು ವೀಳ್ಯದೆಲೆ, ಚೂರು ಅಡಿಕೆಯನ್ನು ನೀರಿನಲ್ಲಿ ತೇಲಿಬಿಟ್ಟರೆ ಸಾಕಂತೆ. ನೀವು ಕಳೆದುಕೊಂಡಿರುವ ಯಾವುದೇ ಅಮೂಲ್ಯ ವಸ್ತು ವಾಪಾಸು ನಿಮ್ಮ ಕೈಸೇರುತ್ತದಂತೆ ಎನ್ನುವುದು ಸಮಾಚಾರ. ಯಾರಿಗಾದರೂ ಶಿಂಷಾ ಬಳಿ ಇರುವ ಪವಾಡ ಸದೃಶ ಚಕ್ರತೀರ್ಥದ ಬಗ್ಗೆ ವಿವರಗಳು ತಿಳಿದಿದ್ದರೆ ನಮಗೂ ತಿಳಿಸಬೇಕಾಗಿ ವಿನಂತಿ.
ನಮ್ಮ ವೆಬ್ ಸೈಟಿನಲ್ಲಿ ಈ ಮಾಹಿತಿಗಳು ಸಿಗುವುದಿಲ್ಲ. ಮಾನ್ಯ ಓದುಗರು ನೇರವಾಗಿ ಟಿವಿ9 ಕಚೇರಿಯನ್ನು ಸಂಪರ್ಕಿಸಬೇಕೆಂದು ([email protected]) ಕೋರಿಕೆ. ಶಿಂಷಾ ಪವಾಡದ ಬಗ್ಗೆ ಗೊತ್ತಿದ್ದರೆ ವಿವರಗಳನ್ನು ಇಮೇಲ್ ಮಾಡಿ. ಸಾರ್ವಜನಿಕ ಹಿತಾಸಕ್ತಿಯಿಂದ ಅದನ್ನು ಪ್ರಕಟಿಸಲಾಗುವುದು.



Click it and Unblock the Notifications
