Latest Updates
-
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ!
ತರ್ಕಕ್ಕೆ ಸಿಕ್ಕದ ಟಿವಿ9 ಕಾರ್ಯಕ್ರಮ ಹೀಗೂ ಉಂಠೇ

ಜನಪ್ರಿಯತೆ ಮಂಚೂಣಿಯಲ್ಲಿರುವ ಟಿವಿ9 ಒಳಗೆ ಪ್ರಸಾರವಾಗುವ ರೋಮಾಂಚಕ ಕಾರ್ಯಕ್ರಮಗಳಲ್ಲಿ "ಹೀಗೂ ಉಂಟೆ"ಗೆ ಮೊದಲ ಸ್ಥಾನ. ನಮ್ಮನೆಗಳ ಹೆಂಗಸರು ನಂಬಿಕೆ ಅಪನಂಬಿಕೆಗಳನ್ನು ಸ್ಟೌವ್ ಮೇಲಿಟ್ಟು ಇದನ್ನು ನೋಡುತ್ತಾ ಕುಳಿತರೆ ಮುಗಿಯಿತು ಕೆಲಸ. ಅಡುಗೆ ಮನೆಯಲ್ಲಿ ಹಾಲು ಉಕ್ಕುವುದು ಖಂಡಿತ.
ಉಕ್ಕಿ ಹರಿದ ಹಾಲು ನಮ್ಮ ವೆಬ್ ಸೈಟಿನ ವೆರಾಂಡದವರೆವಿಗೂ ಹರಿದು ಬರುವುದು ವಾಡಿಕೆ. "ಟಿವಿ9ನೊಳಗೆ ಹೇಳಿದರಂತೆ, ಅದರ ಬಗ್ಗೆ ಹೆಚ್ಚಿನ ವಿವರ ಕೊಡಿ, ಅಡ್ರೆಸ್ ಮತ್ತು ಫೋನ್ ನಂಬರುಗಳನ್ನೂ ಕೊಡಿ" ಎಂದು ಕೇಳಿ ಬರುವ ಸಪೋರ್ಟ್ ರಿಕ್ವೆಸ್ಟುಗಳನ್ನು ನಿಭಾಯಿಸುವುದು ನಮಗೆ ಕಷ್ಟವೇ ಆಗುತ್ತದೆ.
ನಿನ್ನೆ ಸೋಮವಾರ ಒಬ್ಬ ಮಹರಾಯ್ ಗಿತ್ತಿ ನಮ್ಮ ಫೋನ್ ನಂಬರ್ ಪತ್ತೆ ಮಾಡಿ ಸೀದಾ ಕೇಳಿಬಿಟ್ಟರು. ಆಕೆಯ ಹೆಸರು ಗಿರಿಜಾ, ತಿಪಟೂರಿನವರಂತೆ. "ನಿಮಗೆ ಗೊತ್ತಿರತ್ತೆ ಕೊಡಿ ಸಾರ್" ಎನ್ನುವುದು ಆಕೆಯ ಆಗ್ರಹ. ಅವರು ಹೇಳುವುದು ಇಷ್ಟು:
"ಈಚೆಗೆ ಟಿವಿ9 ನಲ್ಲಿ ಒಂದು ಪ್ರೊಗ್ರಾಂ ಬಂತಂತೆ. ಶಿಂಷಾಗೆ ಸ್ವಲ್ಪ ದೂರದಲ್ಲಿ ಒಂದು ಹಳ್ಳಿ ಇದೆಯಂತೆ. ಅಲ್ಲಿರುವ ಶ್ರೀಚಕ್ರ ಅಥವಾ ಸೋಮೇಶ್ವರ ಎಂಬ ದೇವಸ್ಥಾನದಲ್ಲಿ ಬಾವಿಯೋ, ಕೆರೆಯೋ ಒಟ್ಟಾರೆ ಒಂದು ನೀರಿನ ಸೆಲೆ ಇದೆಯಂತೆ. ಆ ನೀರಿನಲ್ಲಿ ಚಕ್ರತೀರ್ಥ ಇದೆಯಂತೆ. ಅಲ್ಲಿಗೆ ಹೋಗಿ ಬಂದರೆ ಕಾರ್ಯಸಿದ್ಧಿ ಆಗುತ್ತದಂತೆ."
ಕಳೆದುಹೋದದ್ದು ಏನೇ ಆಗಿರಲಿ. ಓಲೆ, ಉಂಗುರ, ಬೈಕು, ಮಗು, ಎಮ್ಮೆ, ಹಸ ಕರ, ಪಾಸ್ ಪೋರ್ಟು, ಸಾಕುನಾಯಿ, ಗೆಳೆಯ, ಗೆಳತಿ, ನೆಮ್ಮದಿ ವಾಪಸ್ಸು ಸಿಗತ್ತಂತೆ ಅದಕ್ಕಾಗಿ ತಾವುಗಳು ಮಾಡಬೇಕಾದುದು ಇಷ್ಟೆ ಎಂದು ನಾರಾಯಣ ಸ್ವಾಮಿ ಹೇಳಿದಾರಂತೆ:
ಆ ಹಳ್ಳಿಗೆ ಹೋಗಿ ಎರಡು ವೀಳ್ಯದೆಲೆ, ಚೂರು ಅಡಿಕೆಯನ್ನು ನೀರಿನಲ್ಲಿ ತೇಲಿಬಿಟ್ಟರೆ ಸಾಕಂತೆ. ನೀವು ಕಳೆದುಕೊಂಡಿರುವ ಯಾವುದೇ ಅಮೂಲ್ಯ ವಸ್ತು ವಾಪಾಸು ನಿಮ್ಮ ಕೈಸೇರುತ್ತದಂತೆ ಎನ್ನುವುದು ಸಮಾಚಾರ. ಯಾರಿಗಾದರೂ ಶಿಂಷಾ ಬಳಿ ಇರುವ ಪವಾಡ ಸದೃಶ ಚಕ್ರತೀರ್ಥದ ಬಗ್ಗೆ ವಿವರಗಳು ತಿಳಿದಿದ್ದರೆ ನಮಗೂ ತಿಳಿಸಬೇಕಾಗಿ ವಿನಂತಿ.
ನಮ್ಮ ವೆಬ್ ಸೈಟಿನಲ್ಲಿ ಈ ಮಾಹಿತಿಗಳು ಸಿಗುವುದಿಲ್ಲ. ಮಾನ್ಯ ಓದುಗರು ನೇರವಾಗಿ ಟಿವಿ9 ಕಚೇರಿಯನ್ನು ಸಂಪರ್ಕಿಸಬೇಕೆಂದು ([email protected]) ಕೋರಿಕೆ. ಶಿಂಷಾ ಪವಾಡದ ಬಗ್ಗೆ ಗೊತ್ತಿದ್ದರೆ ವಿವರಗಳನ್ನು ಇಮೇಲ್ ಮಾಡಿ. ಸಾರ್ವಜನಿಕ ಹಿತಾಸಕ್ತಿಯಿಂದ ಅದನ್ನು ಪ್ರಕಟಿಸಲಾಗುವುದು.



Click it and Unblock the Notifications