Latest Updates
-
ಮಳೆಗಾಲದ ಮದುವೆ: ನಿಮ್ಮ ಸಂಭ್ರಮಕ್ಕೆ ಅಡ್ಡಿಯಾಗದಂತೆ ಪ್ಲಾನ್ ಮಾಡುವುದು ಹೇಗೆ? -
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು! -
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ! -
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್
ಮದರ್ಸ್ ಡೇ, ಫಾದರ್ಸ್ ಡೇ ಮಧ್ಯೆ ಅನಾಥ ಪ್ರಜ್ಞೆ ನಮಗೆ ಬೇಕಾ?

ಹೀಗೆ ಕುಟುಂಬದಿಂದ ದೂರವಾಗಿ ಬೇಕಾದಷ್ಟು ಹಣ, ಕೀರ್ತಿ ಸಂಪಾದಿಸಿ ಬದುಕಿನ ಕೊನೆಯಲ್ಲಿ ನೆಮ್ಮದಿಗಾಗಿ ಅಧ್ಯಾತ್ಮದ ಮೊರೆ ಹೋಗುವ ವಿದೇಶಿಯರನ್ನು ಕಂಡೇ ಇರುತ್ತೇವೆ. ಅವರಿಗೆ ನಿಜವಾಗಿ ಬೇಕಿರುವುದು ಆಧ್ಯಾತ್ಮಿಕ ಶಾಂತಿಯಲ್ಲ.
ಸೂಕ್ತ ವಯಸ್ಸಿನಲ್ಲಿ ಸಿಗದ ಕೌಟುಂಬಿಕ ಪ್ರೀತಿ. ಅದನ್ನು ಅವರು ಬದುಕಿನುದ್ದಕ್ಕೂ ಅರಸಿ ಸೋತು ಕಡೆಯದಾಗಿ ಮಾನಸಿಕ ನೆಮ್ಮದಿಯತ್ತ ಹೊರಳಿರುತ್ತಾರೆ. ಅಂಥ ಅನಾಥ ಪ್ರಜ್ಞೆಯನ್ನು ಭಾರತೀಯರು ಕೈಯ್ಯಾರೆ ಬರಮಾಡಿಕೊಳ್ಳಬೇಕೇ?
ತಂದೆ ತಾಯಿಯೊಂದಿಗೆ ಬದುಕು ಪೂರ್ತಿ ಇರಲು ನಮ್ಮ ಸಮಾಜ ಸಮ್ಮತಿ ನೀಡಿದೆ. ಅಂಥದ್ದರಲ್ಲಿ ಪಾಶ್ಚಾತ್ಯ ಸಮಾಜವನ್ನು ಅನುಕರಿಸುವ ಅಗತ್ಯ ನಮಗೇಕೆ? ಅನುಕರಣೆಗಳಿಗೆ ಕಟ್ಟುಬಿದ್ದು ಸಂಬಂಧಗಳ ಸುಳಿಗಳಿಂದ ಹೊರಬರುವ ಪ್ರಯತ್ನದಲ್ಲಿ ಒಂಟಿಯಾಗುವತ್ತ ಹೊರಡುವ ಆತುರವೇಕೆ?
ಉದ್ಯೋಗದ ಅನಿವಾರ್ಯತೆಯಿಂದ ಕುಟುಂಬದಿಂದ ದೂರವಾಗುವವರು, ಅವಿಭಕ್ತ ಕುಟುಂಬದಿಂದ ಬೇರೆಯಾಗಿ ಗಂಡ-ಹೆಂಡತಿ ಇಬ್ಬರೇ ಬದುಕುವ ನಿರ್ಧಾರ ಮಾಡುವವರ ಸಂಖ್ಯೆ ಹೆಚ್ಚಿದಂತೆ ಅಂತರ್ಜಾತಿ ವಿವಾಹವಾದ ದಂಪತಿಗಳು ಸಂಬಂಧಿಗಳಿಂದ ದೂರವಾಗಿ ಬದುಕುವುದು ಅನಿವಾರ್ಯವಾಗಿದೆ. ಆದರೆ ಅವುಗಳ ನಡುವೆಯೇ ಸಂಬಂಧಗಳನ್ನು ನಿಭಾಯಿಸುವ ಮನಸ್ಸು ಮಾಡಬೇಕಿದೆ.



Click it and Unblock the Notifications